• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದು ದಿನದ ಭೇಟಿಯಲ್ಲೇ ಕಣಿವೆ ರಾಜ್ಯ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶ ಸಾರಿದ ಮೋದಿ

TNN Correspondent Posted On May 20, 2018
0


0
Shares
  • Share On Facebook
  • Tweet It

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಯಾವುದೇ ದೇಶ ಅಥವಾ ದೇಶದ ಯಾವುದೇ ರಾಜ್ಯಕ್ಕೆ ಭೇಟಿ ನೀಡಿದರೂ ಅದರಲ್ಲೊಂದು ದೂರದೃಷ್ಟಿಯ ಚಿಂತನೆ ಹೊಂದಿರುತ್ತಾರೆ. ಅದರ ಫಲ ದೇಶವಾಸಿಗಳಿಗೆ ದೊರಯಬೇಕು ಎಂಬ ದೂರದೃಷ್ಟಿಯಿಂದಲೇ ಸದಾ ಕಾರ್ಯಪವೃತ್ತರಾಗಿರುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಆ ಮಾತಿಗೆ ಪುಷ್ಠಿ ನೀಡಿದ್ದುಮ ಮೇ.19 ಜಮ್ಮು ಕಾಶ್ಮೀರ ಭೇಟಿ ವೇಳೆ ಶತ್ರು ರಾಷ್ಟ್ರ ಪಾಕಿಸ್ತಾನದ ಜೊತೆಗೆ ಇಡೀ ವಿಶ್ವಕ್ಕೆ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶವನ್ನು ಸಾರಿ ಬಂದಿದ್ದಾರೆ.

ಮೇ.19ರಂದು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಏಷ್ಯಾದ ಅತಿ ಉದ್ದನೆಯ ದ್ವಿಪಥ ಸುರಂಗಮಾರ್ಗ ಝೋಜಿಲಾ ಯೋಜನೆಗೆ ಚಾಲನೆ ನೀಡುವ ಮೂಲಕ ಪಾಕಿಸ್ತಾನಕ್ಕೆ ಚುರುಕು ಮುಟ್ಟಿಸಿದ್ದಾರೆ. ಸುಮಾರು 25 ಸಾವಿರ ಕೋಟಿ ಅನುದಾನದ ಈ ಯೋಜನೆಯಿಂದ ಕಣಿವೆ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ದೊರೆಯಲಿದೆ. ಅಲ್ಲದೇ ಶ್ರೀನಗರ, ಕಾರ್ಗಿಲ್ ಮತ್ತು ಲೇಹ್ ಮಧ್ಯೆ ಉತ್ತಮ ಸಂಪರ್ಕ ಸಾಧಿಸಲು ಪೂರಕವಾಗಲಿದೆ. ಈ ದ್ವಿಪಥ ರಸ್ತೆ ಹಲವು ದೃಷ್ಟಿಯಿಂದ ದೇಶಕ್ಕೆ ಅನುಕೂಲವಾಗಲಿದೆ.

330 ಮೇಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಕಿಶನ್ ಗಂಗಾ ಜಲ ವಿದ್ಯುದಾಗಾರವನ್ನು ಶ್ರೀನಗರದಲ್ಲಿ ಹಮ್ಮಿಕೊಂಡಿರುವ ಶೇರ್ ಇ ಕಾಶ್ಮೀರ ಸಮ್ಮೇಳದ ಮೂಲಕ ದೇಶಕ್ಕೆ ಸಮರ್ಪಿಸಿದರು. ಇದು ಕಣಿವೆ ರಾಜ್ಯಕ್ಕೆ ವಿದ್ಯುತ್ ಒದಗಿಸಲು ಅನುಕೂಲ ಕಲ್ಪಿಸಲಿದೆ. ಅಲ್ಲದೇ ಮಾತಾ ವೈಷ್ಣೋದೇವಿ ಕ್ಷೇತ್ರಕ್ಕೆ ಭೇಟಿ ನೀಡುವ ಯಾತ್ರಿಕರ ಅನುಕೂಲಕ್ಕೆ ನಿರ್ಮಿಸಲಾಗಿರುವ ರೋಪ್ ವೇಗೂ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಹೀಗೆ ಒಂದೇ ಸಾಲು ಸಾಲು ಕಾರ್ಯಕ್ರಮಗಳ ಮೂಲಕ ಕಣಿವೆ ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಪ್ರಧಾನಿ ನರೇಂದ್ರ ಮೋದಿ ಇಡೀ ವಿಶ್ವಕ್ಕೆ ವಿಶೇಷವಾಗಿ ಪಾಕಿಸ್ತಾನಕ್ಕೆ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶವನ್ನು ಸಾರಿದ್ದಾರೆ.

ಝೋಜಿಲಾ ಸುರಂಗ ಮಾರ್ಗ, ಕಿಶನಗಂಗಾ ಜಲವಿದ್ಯುತ್ ಗಾರ, ಪಾಕುಲ್ ದರ್ ವಿದ್ಯುತ್ ಯೋಜನೆ ಸೇರಿ ನಾನಾ ಯೋಜನೆಗಳನ್ನು ಒಂದೇ ದಿನದಲ್ಲಿ ಉದ್ಘಾಟನೆ, ಶಂಕುಸ್ಥಾಪನೆ ಮಾಡುವ ಮೂಲಕ ಇಡೀ ಕಣಿವೆ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭಿಸಿ, ಯುವಕರನ್ನು ಹೊಸ ಚಿಂತನೆಗೆ ಹಚ್ಚಿಸುವ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search