• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದು ದಿನದ ಭೇಟಿಯಲ್ಲೇ ಕಣಿವೆ ರಾಜ್ಯ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶ ಸಾರಿದ ಮೋದಿ

TNN Correspondent Posted On May 20, 2018
0


0
Shares
  • Share On Facebook
  • Tweet It

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಯಾವುದೇ ದೇಶ ಅಥವಾ ದೇಶದ ಯಾವುದೇ ರಾಜ್ಯಕ್ಕೆ ಭೇಟಿ ನೀಡಿದರೂ ಅದರಲ್ಲೊಂದು ದೂರದೃಷ್ಟಿಯ ಚಿಂತನೆ ಹೊಂದಿರುತ್ತಾರೆ. ಅದರ ಫಲ ದೇಶವಾಸಿಗಳಿಗೆ ದೊರಯಬೇಕು ಎಂಬ ದೂರದೃಷ್ಟಿಯಿಂದಲೇ ಸದಾ ಕಾರ್ಯಪವೃತ್ತರಾಗಿರುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಆ ಮಾತಿಗೆ ಪುಷ್ಠಿ ನೀಡಿದ್ದುಮ ಮೇ.19 ಜಮ್ಮು ಕಾಶ್ಮೀರ ಭೇಟಿ ವೇಳೆ ಶತ್ರು ರಾಷ್ಟ್ರ ಪಾಕಿಸ್ತಾನದ ಜೊತೆಗೆ ಇಡೀ ವಿಶ್ವಕ್ಕೆ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶವನ್ನು ಸಾರಿ ಬಂದಿದ್ದಾರೆ.

ಮೇ.19ರಂದು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಏಷ್ಯಾದ ಅತಿ ಉದ್ದನೆಯ ದ್ವಿಪಥ ಸುರಂಗಮಾರ್ಗ ಝೋಜಿಲಾ ಯೋಜನೆಗೆ ಚಾಲನೆ ನೀಡುವ ಮೂಲಕ ಪಾಕಿಸ್ತಾನಕ್ಕೆ ಚುರುಕು ಮುಟ್ಟಿಸಿದ್ದಾರೆ. ಸುಮಾರು 25 ಸಾವಿರ ಕೋಟಿ ಅನುದಾನದ ಈ ಯೋಜನೆಯಿಂದ ಕಣಿವೆ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ದೊರೆಯಲಿದೆ. ಅಲ್ಲದೇ ಶ್ರೀನಗರ, ಕಾರ್ಗಿಲ್ ಮತ್ತು ಲೇಹ್ ಮಧ್ಯೆ ಉತ್ತಮ ಸಂಪರ್ಕ ಸಾಧಿಸಲು ಪೂರಕವಾಗಲಿದೆ. ಈ ದ್ವಿಪಥ ರಸ್ತೆ ಹಲವು ದೃಷ್ಟಿಯಿಂದ ದೇಶಕ್ಕೆ ಅನುಕೂಲವಾಗಲಿದೆ.

330 ಮೇಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಕಿಶನ್ ಗಂಗಾ ಜಲ ವಿದ್ಯುದಾಗಾರವನ್ನು ಶ್ರೀನಗರದಲ್ಲಿ ಹಮ್ಮಿಕೊಂಡಿರುವ ಶೇರ್ ಇ ಕಾಶ್ಮೀರ ಸಮ್ಮೇಳದ ಮೂಲಕ ದೇಶಕ್ಕೆ ಸಮರ್ಪಿಸಿದರು. ಇದು ಕಣಿವೆ ರಾಜ್ಯಕ್ಕೆ ವಿದ್ಯುತ್ ಒದಗಿಸಲು ಅನುಕೂಲ ಕಲ್ಪಿಸಲಿದೆ. ಅಲ್ಲದೇ ಮಾತಾ ವೈಷ್ಣೋದೇವಿ ಕ್ಷೇತ್ರಕ್ಕೆ ಭೇಟಿ ನೀಡುವ ಯಾತ್ರಿಕರ ಅನುಕೂಲಕ್ಕೆ ನಿರ್ಮಿಸಲಾಗಿರುವ ರೋಪ್ ವೇಗೂ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಹೀಗೆ ಒಂದೇ ಸಾಲು ಸಾಲು ಕಾರ್ಯಕ್ರಮಗಳ ಮೂಲಕ ಕಣಿವೆ ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಪ್ರಧಾನಿ ನರೇಂದ್ರ ಮೋದಿ ಇಡೀ ವಿಶ್ವಕ್ಕೆ ವಿಶೇಷವಾಗಿ ಪಾಕಿಸ್ತಾನಕ್ಕೆ ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬ ಸಂದೇಶವನ್ನು ಸಾರಿದ್ದಾರೆ.

ಝೋಜಿಲಾ ಸುರಂಗ ಮಾರ್ಗ, ಕಿಶನಗಂಗಾ ಜಲವಿದ್ಯುತ್ ಗಾರ, ಪಾಕುಲ್ ದರ್ ವಿದ್ಯುತ್ ಯೋಜನೆ ಸೇರಿ ನಾನಾ ಯೋಜನೆಗಳನ್ನು ಒಂದೇ ದಿನದಲ್ಲಿ ಉದ್ಘಾಟನೆ, ಶಂಕುಸ್ಥಾಪನೆ ಮಾಡುವ ಮೂಲಕ ಇಡೀ ಕಣಿವೆ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭಿಸಿ, ಯುವಕರನ್ನು ಹೊಸ ಚಿಂತನೆಗೆ ಹಚ್ಚಿಸುವ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search