• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಹಿಳೆಯರ ಸಬಲೀಕರಣಕ್ಕಾಗಿ ತ್ರಿಪುರ ಸರ್ಕಾರ ಮಹತ್ತರ ನಿರ್ಧಾರ ತೆಗೆದುಕೊಂಡಿದೆ ನೋಡಿ!

TNN Correspondent Posted On May 21, 2018
0


0
Shares
  • Share On Facebook
  • Tweet It

ಅಗರ್ತಲಾ: ಕಮ್ಯುನಿಸ್ಟರ ಆಡಳಿತದಿಂದ ಬಗ್ಗಡವಾಗಿದ್ದ ತ್ರಿಪುರಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಲವು ಸುಧಾರಣೆಗಳಾಗುತ್ತಿವೆ. ಇತ್ತೀಚೆಗೆ ತ್ರಿಪುರಾದ ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ನಿರ್ಮಿಸಿದ್ದ ಸಿಪಿಎಂ ಹಾಗೂ ಕಾಂಗ್ರೆಸ್ಸಿಗೆ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ಅವರು ಟಾಂಗ್ ನೀಡಿದ್ದಲ್ಲದೆ, ತೆರವುಗೊಳಿಸುವಂತೆ ಆದೇಶಿಸಿದ್ದು ದೇಶದ ಗಮನ ಸೆಳೆದಿತ್ತು.
ಈಗ ತ್ರಿಪುರಾ ಸರ್ಕಾರ ಮತ್ತೊಂದು ಮಹತ್ತರ ನಿರ್ಧಾರ ತೆಗೆದುಕೊಂಡಿದ್ದು, ಈ ಬಾರಿ ಮಹಿಳೆಯರ ಏಳಿಗೆಯ ದೃಷ್ಟಿಯಿಂದ ಹೆಜ್ಜೆ ಮುಂದಿಡುತ್ತಿದೆ.
ಹೌದು, ತ್ರಿಪುರಾ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಮಹತ್ತರ ಹೆಜ್ಜೆ ಇಟ್ಟಿದ್ದು, ನೂತನ ನೇಮಕಾತಿ ನೀತಿಯೊಂದನ್ನು ಘೋಷಿಸಿದೆ. ಈ ನೀತಿಯನ್ವಯ ಸರ್ಕಾರಿ ಉದ್ಯೋಗ ಪಡೆಯುವಲ್ಲಿ ಮಹಿಳೆಯರು ಮೀಸಲಾತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ತ್ರಿಪುರಾ ಶಿಕ್ಷಣ ಹಾಗೂ ಕಾನೂನು ಸಚಿವ ರತನ್ ಲಾಲ್ ನಾಥ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೂ ಪ್ರಾತಿನಿಧ್ಯ ನೀಡಬೇಕು, ಅವರೂ ಮುಖ್ಯವಾಹಿನಿಗೆ ಬರಬೇಕು ಎಂಬ ದೃಷ್ಟಿಯಿಂದ ನೂತನ ನೇಮಕಾತಿ ನೀತಿಯನ್ನು ಘೋಷಣೆ ಮಾಡಲಾಗಿದೆ. ಇದರಿಂದ ಮಹಿಳೆಯರು ಸರ್ಕಾರಿ ಉದ್ಯೋಗ ಪಡೆಯುವಲ್ಲಿ ಮೀಸಲಾತಿ ಸೌಲಭ್ಯ ಪಡೆಯುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ಅದರಲ್ಲೂ ಎಡಪಕ್ಷಗಳು ರಚಿಸಿರುವ, ಪ್ರಸ್ತುತ ಅಳವಡಿಸಿಕೊಳ್ಳಲಾಗಿರುವ ನೇಮಕಾತಿ ನೀತಿ ಹಲವು ದೋಷಗಳಿಂದ ಕೂಡಿದೆ. ಹಾಗಾಗಿ ಸರ್ಕಾರ ನೂತನ ಹಾಗೂ ಪಾರದರ್ಶಕತೆಯಿಂದ ಕೂಡಿರುವ ನೇಮಕಾತಿ ಪಾಲಿಸಿ ಘೋಷಿಸಿದ್ದು ಕೂಡಲೇ ಜಾರಿಗೊಳಿಸಲಾಗುತ್ತದೆ. ಪಾಲಿಸಿ ಮೂಲಕ ಮಹಿಳೆಯರಿಗೆ ಸೌಲಭ್ಯ ಕಲ್ಪಿಸುವುದು ಸಹ ಸರ್ಕಾರದ ಮಹತ್ತರ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search