• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಹಿಳೆಯರ ಸಬಲೀಕರಣಕ್ಕಾಗಿ ತ್ರಿಪುರ ಸರ್ಕಾರ ಮಹತ್ತರ ನಿರ್ಧಾರ ತೆಗೆದುಕೊಂಡಿದೆ ನೋಡಿ!

TNN Correspondent Posted On May 21, 2018
0


0
Shares
  • Share On Facebook
  • Tweet It

ಅಗರ್ತಲಾ: ಕಮ್ಯುನಿಸ್ಟರ ಆಡಳಿತದಿಂದ ಬಗ್ಗಡವಾಗಿದ್ದ ತ್ರಿಪುರಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಹಲವು ಸುಧಾರಣೆಗಳಾಗುತ್ತಿವೆ. ಇತ್ತೀಚೆಗೆ ತ್ರಿಪುರಾದ ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ನಿರ್ಮಿಸಿದ್ದ ಸಿಪಿಎಂ ಹಾಗೂ ಕಾಂಗ್ರೆಸ್ಸಿಗೆ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ಅವರು ಟಾಂಗ್ ನೀಡಿದ್ದಲ್ಲದೆ, ತೆರವುಗೊಳಿಸುವಂತೆ ಆದೇಶಿಸಿದ್ದು ದೇಶದ ಗಮನ ಸೆಳೆದಿತ್ತು.
ಈಗ ತ್ರಿಪುರಾ ಸರ್ಕಾರ ಮತ್ತೊಂದು ಮಹತ್ತರ ನಿರ್ಧಾರ ತೆಗೆದುಕೊಂಡಿದ್ದು, ಈ ಬಾರಿ ಮಹಿಳೆಯರ ಏಳಿಗೆಯ ದೃಷ್ಟಿಯಿಂದ ಹೆಜ್ಜೆ ಮುಂದಿಡುತ್ತಿದೆ.
ಹೌದು, ತ್ರಿಪುರಾ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಮಹತ್ತರ ಹೆಜ್ಜೆ ಇಟ್ಟಿದ್ದು, ನೂತನ ನೇಮಕಾತಿ ನೀತಿಯೊಂದನ್ನು ಘೋಷಿಸಿದೆ. ಈ ನೀತಿಯನ್ವಯ ಸರ್ಕಾರಿ ಉದ್ಯೋಗ ಪಡೆಯುವಲ್ಲಿ ಮಹಿಳೆಯರು ಮೀಸಲಾತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ತ್ರಿಪುರಾ ಶಿಕ್ಷಣ ಹಾಗೂ ಕಾನೂನು ಸಚಿವ ರತನ್ ಲಾಲ್ ನಾಥ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೂ ಪ್ರಾತಿನಿಧ್ಯ ನೀಡಬೇಕು, ಅವರೂ ಮುಖ್ಯವಾಹಿನಿಗೆ ಬರಬೇಕು ಎಂಬ ದೃಷ್ಟಿಯಿಂದ ನೂತನ ನೇಮಕಾತಿ ನೀತಿಯನ್ನು ಘೋಷಣೆ ಮಾಡಲಾಗಿದೆ. ಇದರಿಂದ ಮಹಿಳೆಯರು ಸರ್ಕಾರಿ ಉದ್ಯೋಗ ಪಡೆಯುವಲ್ಲಿ ಮೀಸಲಾತಿ ಸೌಲಭ್ಯ ಪಡೆಯುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ಅದರಲ್ಲೂ ಎಡಪಕ್ಷಗಳು ರಚಿಸಿರುವ, ಪ್ರಸ್ತುತ ಅಳವಡಿಸಿಕೊಳ್ಳಲಾಗಿರುವ ನೇಮಕಾತಿ ನೀತಿ ಹಲವು ದೋಷಗಳಿಂದ ಕೂಡಿದೆ. ಹಾಗಾಗಿ ಸರ್ಕಾರ ನೂತನ ಹಾಗೂ ಪಾರದರ್ಶಕತೆಯಿಂದ ಕೂಡಿರುವ ನೇಮಕಾತಿ ಪಾಲಿಸಿ ಘೋಷಿಸಿದ್ದು ಕೂಡಲೇ ಜಾರಿಗೊಳಿಸಲಾಗುತ್ತದೆ. ಪಾಲಿಸಿ ಮೂಲಕ ಮಹಿಳೆಯರಿಗೆ ಸೌಲಭ್ಯ ಕಲ್ಪಿಸುವುದು ಸಹ ಸರ್ಕಾರದ ಮಹತ್ತರ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search