• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೇನೆಗೆ ಕೇಂದ್ರ ಸರ್ಕಾರದ ಬಿಗ್ ಗಿಫ್ಟ್: ಭಾರತೀಯ ಸೇನೆಗೆ ಮಾನವ ರಹಿತ ಯಂತ್ರಗಳ ಬಲ

TNN Correspondent Posted On May 21, 2018
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ಸೇನೆಗೆ ಶುಭ ಕಾಲ ಆರಂಭವಾಗಿದ್ದು, ಭಾರಿ ಗುಂಡುನಿರೋಧಕ ಜಾಕೆಟ್ ಗಳು ನೀಡುತ್ತಿರುವುದು, ಆಧುನಿಕ ತಂತ್ರಜ್ಞಾನಗಳುಳ್ಳ ಗನ್ ಮಷಿನ್ ಗಳನ್ನು ನೀಡುತ್ತಿರುವುದು ಸೇರಿ ಹಲವು ಮಹತ್ತರ ಯೋಜನೆಗಳನ್ನು ಕೇಂದ್ರ ಸರ್ಕಾರ ಸೇನೆಗೆ ಸೇರ್ಪಡೆ ಮಾಡುತ್ತಿದೆ. ಇದೀಗ ಸೇನೆಗೆ ಕೇಂದ್ರ ಸರ್ಕಾರ ಭರ್ಜರಿ ಕೊಡುಗೆ ನೀಡಲು ನಿರ್ಧರಿಸಿದೆ. ರೋಬೋಟಿಕ್ ತಂತ್ರಜ್ಞಾನ (ಕೃತಕ ಬುದ್ಧಿಮತ್ತೆ)ಯುಳ್ಳ ಯುದ್ಧದಲ್ಲಿ ಹೋರಾಡುವ ಯಂತ್ರಗಳನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ದೇಶದಲ್ಲಿ ಭವಿಷ್ಯದಲ್ಲಿ ಉಂಟಾಗುವ ಯುದ್ಧಗಳಿಗೆ ಬೇಕಾಗುವ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳುವ ನೀತಿಯ ಭಾಗವಾಗಿ ಕೇಂದ್ರ ಸರ್ಕಾರ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗಳಲ್ಲಿ ಈ ಮಾನವರಹಿತ ಯಂತ್ರಗಳನ್ನು ಬಳಸಲು ಮುಂದಾಗಿದೆ. ಭಾರತೀಯ ಸೇನೆಯ ಮೂರೂ ಪಡೆಗಳಲ್ಲಿ ಕೃತಕ ಬುದ್ಧಿಮತ್ತೆಯ ಯಂತ್ರಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಭವಿಷ್ಯದ ಯುದ್ಧದ ಪ್ರತಿ ತಂತ್ರಗಳು ಇಂತಹ ತಂತ್ರಜ್ಞಾನಗಳನ್ನು ಹೊಂದಿರುವ ಯಂತ್ರಗಳನ್ನೇ ಅವಲಂಬಿಸಿರುತ್ತದೆ ಎಂದು ಉತ್ಪಾದನೆ ಕಾರ್ಯದರ್ಶಿ ಅಜಯ್‌ ಕುಮಾರ್‌ ತಿಳಿಸಿದ್ದಾರೆ.

ಟಾಟಾ ಸನ್ಸ್ ಮುಖ್ಯಸ್ಥ ಎನ್. ಚಂದ್ರಶೇಖರನ್ ನೇತೃತ್ವದಲ್ಲಿ ರಚನೆ ಆಗಿರುವ ಉನ್ನತ್ತಾಧಿಕಾರದ ಕಾರ್ಯಪಡೆ ಈ ಮಹತ್ವದ  ಯೋಜನೆಯ ಕುರಿತ ಕಾರ್ಯಸೂಚಿ ಸಿದ್ಧಪಡಿಸಲಿದೆ.  ಖಾಸಗಿ ಕಂಪನಿಗಳು ಮತ್ತು ಸಶಸ್ತ್ರ ಪಡೇಗಳ ಸಹಭಾಗಿತ್ವದಲ್ಲಿ ಯೋಜನೆ ಜಾರಿಯಾಗಲಿದೆ. ರೋಬಾಟಿಕ್ ತಂತ್ರಜ್ಞಾನದ ಅಳವಡಿಕೆ ಹೆಚ್ಚು ಹೆಚ್ಚು ಅಳವಡಿಕೆ ಅನಿವಾರ್ಯ ಆಗಿರುವುದುರಿಂದ ವಿಶ್ವದ ಹಲವು ರಾಷ್ಟ್ರಗಳು ಈ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿವೆ ಎಂದು ಅಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

ಚೀನಾ ಎಐ ಸಂಶೋಧನೆ ಮತ್ತು ಮೆಷಿನ್‌ ಲರ್ನಿಂಗ್‌ (ಯಂತ್ರ ಕಲಿಕೆ) ಗಾಗಿ ನೂರಾರು ಕೋಟಿ ಡಾಲರ್‌ಗಳನ್ನು ಖರ್ಚು ಮಾಡುತ್ತಿದೆ. 2030ರ ವೇಳೆಗೆ ಜಾಗತಿಕ ಎಐ ಆವಿಷ್ಕಾರ ಕೇಂದ್ರವಾಗಿ ಬೆಳೆಯುವುದು ಚೀನಾದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಅಮೆರಿಕ, ಬ್ರಿಟನ್‌, ಫ್ರಾನ್ಸ್‌ ಮತ್ತು ಐರೋಪ್ಯ ಒಕ್ಕೂಟಗಳು ಕೂಡ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಕ್ಷೇತ್ರದಲ್ಲಿ ಭಾರೀ ಪ್ರಮಾಣದ ಸಂಶೋಧನೆ ಮಾಡುತ್ತಿವೆ.

ಈ ಕುರಿತು ಕೇಂದ್ರ ಸರ್ಕಾರ ಜೂನ್​ನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಚೀನಾ ಹಾಗೂ ಪಾಕಿಸ್ತಾನ ಗಡಿಯಲ್ಲಿ ಭದ್ರತೆ ಒದಗಿಸಲು ಈ ಯೋಜನೆ ಪೂರಕವಾಗಲಿದೆ. ರೋಬೋಟಿಕ್ ತಂತ್ರಜ್ಞಾನದ ಯಂತ್ರಗಳನ್ನು ಬಳಸುವ ಮೂಲಕ ಗಡಿಯಲ್ಲಿ ಹೈಟೆಕ್ ಭದ್ರತೆ ನೀಡಬೇಕು ಎಂದು ಸೇನೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search