• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2 ಕೋಟಿ ವೆಚ್ಚದಲ್ಲಿ ಶ್ರೀಕೃಷ್ಣ ದೇವಸ್ಥಾನ ಜೀರ್ಣೋದ್ಧಾರಕ್ಕೆ ಪಾಕ್ ಸರ್ಕಾರ ನಿರ್ಧಾರ

TNN Correspondent Posted On May 21, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರ ಶ್ರೀಕೃಷ್ಣನ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿ ಅವಳಿ ನಗರದಲ್ಲಿರುವ ಏಕೈಕ ಹಿಂದೂ ದೇವಾಲಯ ಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಪಂಜಾಬ್ ಪ್ರಾಂತ್ಯದ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲಿ  ಜೀರ್ಣೋದ್ಧಾರ ಕಾಮಗಾರಿ ಆರಂಭವಾಗಲಿದೆ. ಪಂಜಾಬ್ ಪ್ರಾಂತ್ಯದಲ್ಲಿರುವ ಹಿಂದೂಗಳು ಹಬ್ಬಗಳನ್ನು ಆಚರಿಸಲು, ಪೂಜೆಗಳನ್ನು ಕೈಗೊಳ್ಳು ಈ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ.

ಸ್ಥಳೀಯ ಟ್ರಸ್ಟ್ ಆಸ್ತಿಗಳ ಮಂಡಳಿಯ(ಇಟಿಪಿಬಿ) ಡೆಪ್ಯುಟಿ ಆಡಳಿತಾಧಿಕಾರಿ ಮೊಹಮ್ಮದ್ ಆಸಿಫ್ ಈ ಕುರಿತು ಮಾಹಿತಿ ನೀಡಿದ್ದು, ಪಂಜಾಬ್ ಪ್ರಾಂತ್ಯದ ಶಾಸನ ಸಭೆಯ ಸದಸ್ಯರು ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದರು. ಆದ್ದರಿಂದ ಸರ್ಕಾರ 2 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜೀಣೋದ್ಧಾರ ಪೂರ್ಣವಾದ ನಂತರ ದೇವಾಲಯವನ್ನು ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಸ್ಥಳೀಯ ಹಿಂದೂಗಳ ಮನವಿ ಮಾಡಿದ್ದು, ಪ್ರಸ್ತುತ ಚಿಕ್ಕದಾಗಿರುವ ದೇವಸ್ಥಾನದ ಅಭಿವೃದ್ಧಿ ಪಡಿಸಬೇಕು.ದೇವಸ್ಥಾನದ ಅಕ್ಕಪಕ್ಕದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಿ, ದೇವಸ್ಥಾನವನ್ನು ವಿಸ್ತಾರಗೊಳಿಸಬೇಕು ಎಂದು ಸ್ಥಳೀಯ ಹಿಂದೂ ಮುಖಂಡ ಜಗ್ ಮೋಹನ್ ಅರೋರಾ ಮನವಿ ಮಾಡಿದ್ದಾರೆ.

1897 ರಲ್ಲಿ ರಾವಲ್ಪಿಂಡಿಯಲ್ಲಿ ಈ ದೇವಸ್ಥಾನ ನಿರ್ಮಾಣವಾಗಿದ್ದು, ಸ್ವಾತಂತ್ರ್ಯ ಹೋರಾಟ, ಭಾರತ ಪಾಕ್ ದೇಶ ವಿಭಜನೆ ವೇಳೆಯಲ್ಲಿ ಮುಚ್ಚಲ್ಪಟ್ಟಿತ್ತು. 1949ರಲ್ಲಿ ದೇವಸ್ಥಾನ ಪುನರ್ ಆರಂಭವಾಗಿತ್ತು. 1970 ರಲ್ಲಿ ಪಾಕಿಸ್ತಾದ ಸ್ಥಳೀಯ ಟ್ರಸ್ಟ್ ಆಸ್ತಿಗಳ ಮಂಡಳಿಗೆ ದೇವಸ್ಥಾನ ವಶಕ್ಕೆ ಪಡೆದಿತ್ತು. ದೇವಸ್ಥಾನದಲ್ಲಿ ನಿತ್ಯ ಬೆಳಗ್ಗೆ ಮತ್ತು ರಾತ್ರಿ ಪೂಜಾ ಕಾರ್ಯಗಳು ನಡೆಯುತ್ತಿದ್ದು, ಆರು-ಏಳು ಜನ ಭಾಗವಹಿಸುತ್ತಾರೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search