• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2 ಕೋಟಿ ವೆಚ್ಚದಲ್ಲಿ ಶ್ರೀಕೃಷ್ಣ ದೇವಸ್ಥಾನ ಜೀರ್ಣೋದ್ಧಾರಕ್ಕೆ ಪಾಕ್ ಸರ್ಕಾರ ನಿರ್ಧಾರ

TNN Correspondent Posted On May 21, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರ ಶ್ರೀಕೃಷ್ಣನ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿ ಅವಳಿ ನಗರದಲ್ಲಿರುವ ಏಕೈಕ ಹಿಂದೂ ದೇವಾಲಯ ಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಪಂಜಾಬ್ ಪ್ರಾಂತ್ಯದ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲಿ  ಜೀರ್ಣೋದ್ಧಾರ ಕಾಮಗಾರಿ ಆರಂಭವಾಗಲಿದೆ. ಪಂಜಾಬ್ ಪ್ರಾಂತ್ಯದಲ್ಲಿರುವ ಹಿಂದೂಗಳು ಹಬ್ಬಗಳನ್ನು ಆಚರಿಸಲು, ಪೂಜೆಗಳನ್ನು ಕೈಗೊಳ್ಳು ಈ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ.

ಸ್ಥಳೀಯ ಟ್ರಸ್ಟ್ ಆಸ್ತಿಗಳ ಮಂಡಳಿಯ(ಇಟಿಪಿಬಿ) ಡೆಪ್ಯುಟಿ ಆಡಳಿತಾಧಿಕಾರಿ ಮೊಹಮ್ಮದ್ ಆಸಿಫ್ ಈ ಕುರಿತು ಮಾಹಿತಿ ನೀಡಿದ್ದು, ಪಂಜಾಬ್ ಪ್ರಾಂತ್ಯದ ಶಾಸನ ಸಭೆಯ ಸದಸ್ಯರು ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದರು. ಆದ್ದರಿಂದ ಸರ್ಕಾರ 2 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜೀಣೋದ್ಧಾರ ಪೂರ್ಣವಾದ ನಂತರ ದೇವಾಲಯವನ್ನು ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಸ್ಥಳೀಯ ಹಿಂದೂಗಳ ಮನವಿ ಮಾಡಿದ್ದು, ಪ್ರಸ್ತುತ ಚಿಕ್ಕದಾಗಿರುವ ದೇವಸ್ಥಾನದ ಅಭಿವೃದ್ಧಿ ಪಡಿಸಬೇಕು.ದೇವಸ್ಥಾನದ ಅಕ್ಕಪಕ್ಕದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಿ, ದೇವಸ್ಥಾನವನ್ನು ವಿಸ್ತಾರಗೊಳಿಸಬೇಕು ಎಂದು ಸ್ಥಳೀಯ ಹಿಂದೂ ಮುಖಂಡ ಜಗ್ ಮೋಹನ್ ಅರೋರಾ ಮನವಿ ಮಾಡಿದ್ದಾರೆ.

1897 ರಲ್ಲಿ ರಾವಲ್ಪಿಂಡಿಯಲ್ಲಿ ಈ ದೇವಸ್ಥಾನ ನಿರ್ಮಾಣವಾಗಿದ್ದು, ಸ್ವಾತಂತ್ರ್ಯ ಹೋರಾಟ, ಭಾರತ ಪಾಕ್ ದೇಶ ವಿಭಜನೆ ವೇಳೆಯಲ್ಲಿ ಮುಚ್ಚಲ್ಪಟ್ಟಿತ್ತು. 1949ರಲ್ಲಿ ದೇವಸ್ಥಾನ ಪುನರ್ ಆರಂಭವಾಗಿತ್ತು. 1970 ರಲ್ಲಿ ಪಾಕಿಸ್ತಾದ ಸ್ಥಳೀಯ ಟ್ರಸ್ಟ್ ಆಸ್ತಿಗಳ ಮಂಡಳಿಗೆ ದೇವಸ್ಥಾನ ವಶಕ್ಕೆ ಪಡೆದಿತ್ತು. ದೇವಸ್ಥಾನದಲ್ಲಿ ನಿತ್ಯ ಬೆಳಗ್ಗೆ ಮತ್ತು ರಾತ್ರಿ ಪೂಜಾ ಕಾರ್ಯಗಳು ನಡೆಯುತ್ತಿದ್ದು, ಆರು-ಏಳು ಜನ ಭಾಗವಹಿಸುತ್ತಾರೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search