• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2 ಕೋಟಿ ವೆಚ್ಚದಲ್ಲಿ ಶ್ರೀಕೃಷ್ಣ ದೇವಸ್ಥಾನ ಜೀರ್ಣೋದ್ಧಾರಕ್ಕೆ ಪಾಕ್ ಸರ್ಕಾರ ನಿರ್ಧಾರ

TNN Correspondent Posted On May 21, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರ ಶ್ರೀಕೃಷ್ಣನ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿ ಅವಳಿ ನಗರದಲ್ಲಿರುವ ಏಕೈಕ ಹಿಂದೂ ದೇವಾಲಯ ಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಪಂಜಾಬ್ ಪ್ರಾಂತ್ಯದ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲಿ  ಜೀರ್ಣೋದ್ಧಾರ ಕಾಮಗಾರಿ ಆರಂಭವಾಗಲಿದೆ. ಪಂಜಾಬ್ ಪ್ರಾಂತ್ಯದಲ್ಲಿರುವ ಹಿಂದೂಗಳು ಹಬ್ಬಗಳನ್ನು ಆಚರಿಸಲು, ಪೂಜೆಗಳನ್ನು ಕೈಗೊಳ್ಳು ಈ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ.

ಸ್ಥಳೀಯ ಟ್ರಸ್ಟ್ ಆಸ್ತಿಗಳ ಮಂಡಳಿಯ(ಇಟಿಪಿಬಿ) ಡೆಪ್ಯುಟಿ ಆಡಳಿತಾಧಿಕಾರಿ ಮೊಹಮ್ಮದ್ ಆಸಿಫ್ ಈ ಕುರಿತು ಮಾಹಿತಿ ನೀಡಿದ್ದು, ಪಂಜಾಬ್ ಪ್ರಾಂತ್ಯದ ಶಾಸನ ಸಭೆಯ ಸದಸ್ಯರು ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದರು. ಆದ್ದರಿಂದ ಸರ್ಕಾರ 2 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜೀಣೋದ್ಧಾರ ಪೂರ್ಣವಾದ ನಂತರ ದೇವಾಲಯವನ್ನು ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಸ್ಥಳೀಯ ಹಿಂದೂಗಳ ಮನವಿ ಮಾಡಿದ್ದು, ಪ್ರಸ್ತುತ ಚಿಕ್ಕದಾಗಿರುವ ದೇವಸ್ಥಾನದ ಅಭಿವೃದ್ಧಿ ಪಡಿಸಬೇಕು.ದೇವಸ್ಥಾನದ ಅಕ್ಕಪಕ್ಕದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಿ, ದೇವಸ್ಥಾನವನ್ನು ವಿಸ್ತಾರಗೊಳಿಸಬೇಕು ಎಂದು ಸ್ಥಳೀಯ ಹಿಂದೂ ಮುಖಂಡ ಜಗ್ ಮೋಹನ್ ಅರೋರಾ ಮನವಿ ಮಾಡಿದ್ದಾರೆ.

1897 ರಲ್ಲಿ ರಾವಲ್ಪಿಂಡಿಯಲ್ಲಿ ಈ ದೇವಸ್ಥಾನ ನಿರ್ಮಾಣವಾಗಿದ್ದು, ಸ್ವಾತಂತ್ರ್ಯ ಹೋರಾಟ, ಭಾರತ ಪಾಕ್ ದೇಶ ವಿಭಜನೆ ವೇಳೆಯಲ್ಲಿ ಮುಚ್ಚಲ್ಪಟ್ಟಿತ್ತು. 1949ರಲ್ಲಿ ದೇವಸ್ಥಾನ ಪುನರ್ ಆರಂಭವಾಗಿತ್ತು. 1970 ರಲ್ಲಿ ಪಾಕಿಸ್ತಾದ ಸ್ಥಳೀಯ ಟ್ರಸ್ಟ್ ಆಸ್ತಿಗಳ ಮಂಡಳಿಗೆ ದೇವಸ್ಥಾನ ವಶಕ್ಕೆ ಪಡೆದಿತ್ತು. ದೇವಸ್ಥಾನದಲ್ಲಿ ನಿತ್ಯ ಬೆಳಗ್ಗೆ ಮತ್ತು ರಾತ್ರಿ ಪೂಜಾ ಕಾರ್ಯಗಳು ನಡೆಯುತ್ತಿದ್ದು, ಆರು-ಏಳು ಜನ ಭಾಗವಹಿಸುತ್ತಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search