• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2 ಕೋಟಿ ವೆಚ್ಚದಲ್ಲಿ ಶ್ರೀಕೃಷ್ಣ ದೇವಸ್ಥಾನ ಜೀರ್ಣೋದ್ಧಾರಕ್ಕೆ ಪಾಕ್ ಸರ್ಕಾರ ನಿರ್ಧಾರ

TNN Correspondent Posted On May 21, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರ ಶ್ರೀಕೃಷ್ಣನ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿ ಅವಳಿ ನಗರದಲ್ಲಿರುವ ಏಕೈಕ ಹಿಂದೂ ದೇವಾಲಯ ಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಪಂಜಾಬ್ ಪ್ರಾಂತ್ಯದ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲಿ  ಜೀರ್ಣೋದ್ಧಾರ ಕಾಮಗಾರಿ ಆರಂಭವಾಗಲಿದೆ. ಪಂಜಾಬ್ ಪ್ರಾಂತ್ಯದಲ್ಲಿರುವ ಹಿಂದೂಗಳು ಹಬ್ಬಗಳನ್ನು ಆಚರಿಸಲು, ಪೂಜೆಗಳನ್ನು ಕೈಗೊಳ್ಳು ಈ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ.

ಸ್ಥಳೀಯ ಟ್ರಸ್ಟ್ ಆಸ್ತಿಗಳ ಮಂಡಳಿಯ(ಇಟಿಪಿಬಿ) ಡೆಪ್ಯುಟಿ ಆಡಳಿತಾಧಿಕಾರಿ ಮೊಹಮ್ಮದ್ ಆಸಿಫ್ ಈ ಕುರಿತು ಮಾಹಿತಿ ನೀಡಿದ್ದು, ಪಂಜಾಬ್ ಪ್ರಾಂತ್ಯದ ಶಾಸನ ಸಭೆಯ ಸದಸ್ಯರು ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದರು. ಆದ್ದರಿಂದ ಸರ್ಕಾರ 2 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜೀಣೋದ್ಧಾರ ಪೂರ್ಣವಾದ ನಂತರ ದೇವಾಲಯವನ್ನು ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಸ್ಥಳೀಯ ಹಿಂದೂಗಳ ಮನವಿ ಮಾಡಿದ್ದು, ಪ್ರಸ್ತುತ ಚಿಕ್ಕದಾಗಿರುವ ದೇವಸ್ಥಾನದ ಅಭಿವೃದ್ಧಿ ಪಡಿಸಬೇಕು.ದೇವಸ್ಥಾನದ ಅಕ್ಕಪಕ್ಕದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಿ, ದೇವಸ್ಥಾನವನ್ನು ವಿಸ್ತಾರಗೊಳಿಸಬೇಕು ಎಂದು ಸ್ಥಳೀಯ ಹಿಂದೂ ಮುಖಂಡ ಜಗ್ ಮೋಹನ್ ಅರೋರಾ ಮನವಿ ಮಾಡಿದ್ದಾರೆ.

1897 ರಲ್ಲಿ ರಾವಲ್ಪಿಂಡಿಯಲ್ಲಿ ಈ ದೇವಸ್ಥಾನ ನಿರ್ಮಾಣವಾಗಿದ್ದು, ಸ್ವಾತಂತ್ರ್ಯ ಹೋರಾಟ, ಭಾರತ ಪಾಕ್ ದೇಶ ವಿಭಜನೆ ವೇಳೆಯಲ್ಲಿ ಮುಚ್ಚಲ್ಪಟ್ಟಿತ್ತು. 1949ರಲ್ಲಿ ದೇವಸ್ಥಾನ ಪುನರ್ ಆರಂಭವಾಗಿತ್ತು. 1970 ರಲ್ಲಿ ಪಾಕಿಸ್ತಾದ ಸ್ಥಳೀಯ ಟ್ರಸ್ಟ್ ಆಸ್ತಿಗಳ ಮಂಡಳಿಗೆ ದೇವಸ್ಥಾನ ವಶಕ್ಕೆ ಪಡೆದಿತ್ತು. ದೇವಸ್ಥಾನದಲ್ಲಿ ನಿತ್ಯ ಬೆಳಗ್ಗೆ ಮತ್ತು ರಾತ್ರಿ ಪೂಜಾ ಕಾರ್ಯಗಳು ನಡೆಯುತ್ತಿದ್ದು, ಆರು-ಏಳು ಜನ ಭಾಗವಹಿಸುತ್ತಾರೆ.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search