• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು-ಕಾಶ್ಮೀರದಲ್ಲಿ ಉಗ್ರರ ನಿಗ್ರಹಕ್ಕೆ ಸೇನೆ ಎಂತಹ ಯೋಜನೆ ರೂಪಿಸಿದೆ ಗೊತ್ತಾ?

TNN Correspondent Posted On May 21, 2018
0


0
Shares
  • Share On Facebook
  • Tweet It

ಜಮ್ಮು-ಕಾಶ್ಮೀರ ಎಂದರೇನೆ ಹಾಗೆ. ಅಲ್ಲಿ ಯಾವಾಗ ಯಾವ ಉಗ್ರರು ದಾಳಿ ಮಾಡುತ್ತಾರೋ, ಗುಂಡಿನ ಸುರಿಮಳೆಗೈಯುತ್ತಾರೋ ಗೊತ್ತಾಗುವುದಿಲ್ಲ. ಆದರೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕಣಿವೆ ರಾಜ್ಯದಲ್ಲಿ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲಲಾಗುತ್ತಿದೆ. ಇತ್ತೀಚೆಗೆ ಬರ್ಹಾನ್ ವಾನಿ ಸಹಚರರೆಲ್ಲರನ್ನೂ ಕೊಂದ ಶ್ರೇಯಸ್ಸು ಭಾರತೀಯ ಸೈನ್ಯಕ್ಕೇ ಸಲ್ಲಬೇಕು.

ಆದರೆ ಹೀಗೆ, ಉಗ್ರರನ್ನು ಹುಡುಕಿ ಹುಡುಕಿ ಏನೋ ಕೊಲ್ಲಲಾಗುತ್ತಿದೆಯಾದರೂ, ಉಗ್ರರನ್ನು ಸಂಪೂರ್ಣವಾಗಿ ನಿಗ್ರಹ ಮಾಡಲಾಗುತ್ತಿಲ್ಲ. ಕಳೆದ ಏಳು ತಿಂಗಳಲ್ಲಿ ಕಾಶ್ಮೀರದಲ್ಲಿ 70 ಉಗ್ರರ ಹತ್ಯೆ ಮಾಡಿದರೂ ಇಂದಿಗೂ ಉಗ್ರರು ದಾಳಿ ಮಾಡುತ್ತಲೇ ಇದ್ದಾರೆ.

ಆದರೆ ಉಗ್ರರು ಚಾಪೆ ಕೆಳಗೆ ನೂಕಿದರೆ, ಭಾರತೀಯ ಸೈನ್ಯ ರಂಗೋಲಿ ಕೆಳಗಡೆಯೇ ನುಗ್ಗಲು ಅಣಿಯಾಗಿದೆ. ಹೌದು, ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ನಿಗ್ರಹ ಮಾಡಲು ಭಾರತೀಯ ಸೈನ್ಯ ನೂತನ ಯೋಜನೆ ರೂಪಿಸಿದ್ದು, ಉಗ್ರರನ್ನು ಕೊಲ್ಲುವ ಬದಲು ಜೀವಂತವಾಗಿ ಹಿಡಿಯಲು ಮುಂದಾಗಿದೆ.

ಯಾವುದೇ ಉಗ್ರರನ್ನು ಹತ್ಯೆ ಮಾಡುವುದರಿಂದ ಅವರ ಜೀವ ಹೋಗುತ್ತದೆಯೇ ವಿನಾ, ಅವರು ಎಷ್ಟು ಉಗ್ರರನ್ನು ನೇಮಿಸಿದ್ದಾರೆ, ಆ ಉಗ್ರ ತನ್ನ ಕುಟುಂಬದವರನ್ನೂ ಉಗ್ರ ಸಂಘಟನೆಯತ್ತ ಸೆಳೆಯುತ್ತಿದ್ದಾನಾ, ಉಗ್ರರ ಮುಂದಿನ ದಾಳಿ ಕುರಿತ ಯೋಜನೆ ಯಾವುದು ಎಂಬುದರ ಕುರಿತು ಪತ್ತೆ ಹಚ್ಚಲು ಭಾರತೀಯ ಸೇನೆ ಈ ಯೋಜನೆ ರೂಪಿಸಿದೆ.

ಹಾಗಾಗಿ, ಉಗ್ರರು ಅಡಗಿರುವ ಸೇನಾನೆಲೆಯನ್ನು ಪತ್ತೆ ಹಚ್ಚಿ, ಎಷ್ಟು ಸಾಧ್ಯವೋ ಅಷ್ಟು ಸಾಧ್ಯವಾದಷ್ಟು ಉಗ್ರರನ್ನು ಜೀವಂತವಾಗಿ ಹಿಡಿಯುವುದು ಸೇನೆಯ ಮುಂದಿನ ಯೋಜನೆಯಾಗಿದೆ, ಹೀಗೆ ಸೆರೆಸಿಕ್ಕ ಉಗ್ರರನ್ನು ಹಿಡಿದು ತಂದು, ಅವರಿಗೆ ಚಿತ್ರಹಿಂಸೆ ನೀಡಿ ಬಾಯಿಬಿಡಿಸುವ ಯೋಜನೆಯನ್ನು ಸೇನೆ ಹಾಕಿಕೊಂಡಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search