• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು-ಕಾಶ್ಮೀರದಲ್ಲಿ ಉಗ್ರರ ನಿಗ್ರಹಕ್ಕೆ ಸೇನೆ ಎಂತಹ ಯೋಜನೆ ರೂಪಿಸಿದೆ ಗೊತ್ತಾ?

TNN Correspondent Posted On May 21, 2018
0


0
Shares
  • Share On Facebook
  • Tweet It

ಜಮ್ಮು-ಕಾಶ್ಮೀರ ಎಂದರೇನೆ ಹಾಗೆ. ಅಲ್ಲಿ ಯಾವಾಗ ಯಾವ ಉಗ್ರರು ದಾಳಿ ಮಾಡುತ್ತಾರೋ, ಗುಂಡಿನ ಸುರಿಮಳೆಗೈಯುತ್ತಾರೋ ಗೊತ್ತಾಗುವುದಿಲ್ಲ. ಆದರೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕಣಿವೆ ರಾಜ್ಯದಲ್ಲಿ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲಲಾಗುತ್ತಿದೆ. ಇತ್ತೀಚೆಗೆ ಬರ್ಹಾನ್ ವಾನಿ ಸಹಚರರೆಲ್ಲರನ್ನೂ ಕೊಂದ ಶ್ರೇಯಸ್ಸು ಭಾರತೀಯ ಸೈನ್ಯಕ್ಕೇ ಸಲ್ಲಬೇಕು.

ಆದರೆ ಹೀಗೆ, ಉಗ್ರರನ್ನು ಹುಡುಕಿ ಹುಡುಕಿ ಏನೋ ಕೊಲ್ಲಲಾಗುತ್ತಿದೆಯಾದರೂ, ಉಗ್ರರನ್ನು ಸಂಪೂರ್ಣವಾಗಿ ನಿಗ್ರಹ ಮಾಡಲಾಗುತ್ತಿಲ್ಲ. ಕಳೆದ ಏಳು ತಿಂಗಳಲ್ಲಿ ಕಾಶ್ಮೀರದಲ್ಲಿ 70 ಉಗ್ರರ ಹತ್ಯೆ ಮಾಡಿದರೂ ಇಂದಿಗೂ ಉಗ್ರರು ದಾಳಿ ಮಾಡುತ್ತಲೇ ಇದ್ದಾರೆ.

ಆದರೆ ಉಗ್ರರು ಚಾಪೆ ಕೆಳಗೆ ನೂಕಿದರೆ, ಭಾರತೀಯ ಸೈನ್ಯ ರಂಗೋಲಿ ಕೆಳಗಡೆಯೇ ನುಗ್ಗಲು ಅಣಿಯಾಗಿದೆ. ಹೌದು, ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ನಿಗ್ರಹ ಮಾಡಲು ಭಾರತೀಯ ಸೈನ್ಯ ನೂತನ ಯೋಜನೆ ರೂಪಿಸಿದ್ದು, ಉಗ್ರರನ್ನು ಕೊಲ್ಲುವ ಬದಲು ಜೀವಂತವಾಗಿ ಹಿಡಿಯಲು ಮುಂದಾಗಿದೆ.

ಯಾವುದೇ ಉಗ್ರರನ್ನು ಹತ್ಯೆ ಮಾಡುವುದರಿಂದ ಅವರ ಜೀವ ಹೋಗುತ್ತದೆಯೇ ವಿನಾ, ಅವರು ಎಷ್ಟು ಉಗ್ರರನ್ನು ನೇಮಿಸಿದ್ದಾರೆ, ಆ ಉಗ್ರ ತನ್ನ ಕುಟುಂಬದವರನ್ನೂ ಉಗ್ರ ಸಂಘಟನೆಯತ್ತ ಸೆಳೆಯುತ್ತಿದ್ದಾನಾ, ಉಗ್ರರ ಮುಂದಿನ ದಾಳಿ ಕುರಿತ ಯೋಜನೆ ಯಾವುದು ಎಂಬುದರ ಕುರಿತು ಪತ್ತೆ ಹಚ್ಚಲು ಭಾರತೀಯ ಸೇನೆ ಈ ಯೋಜನೆ ರೂಪಿಸಿದೆ.

ಹಾಗಾಗಿ, ಉಗ್ರರು ಅಡಗಿರುವ ಸೇನಾನೆಲೆಯನ್ನು ಪತ್ತೆ ಹಚ್ಚಿ, ಎಷ್ಟು ಸಾಧ್ಯವೋ ಅಷ್ಟು ಸಾಧ್ಯವಾದಷ್ಟು ಉಗ್ರರನ್ನು ಜೀವಂತವಾಗಿ ಹಿಡಿಯುವುದು ಸೇನೆಯ ಮುಂದಿನ ಯೋಜನೆಯಾಗಿದೆ, ಹೀಗೆ ಸೆರೆಸಿಕ್ಕ ಉಗ್ರರನ್ನು ಹಿಡಿದು ತಂದು, ಅವರಿಗೆ ಚಿತ್ರಹಿಂಸೆ ನೀಡಿ ಬಾಯಿಬಿಡಿಸುವ ಯೋಜನೆಯನ್ನು ಸೇನೆ ಹಾಕಿಕೊಂಡಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search