• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೇನೆಗೆ ಬ್ರಹ್ಮೋಸ್ ಬಲ: ಪರೀಕ್ಷಾರ್ಥ ಉಡಾವಣೆ ಯಶಸ್ವಿ

TNN Correspondent Posted On May 22, 2018
0


0
Shares
  • Share On Facebook
  • Tweet It

ಬಾಲಾಸೋರ್: ಒಡಿಶಾದ ಬಾಲಾಸೋರ್ ಕಡಲ ತೀರದಲ್ಲಿ  ಭಾರತ- ರಷ್ಯಾ ಸಹಯೋಗದಲ್ಲಿ ಅಭಿವೃದ್ಧಿ ಪಡಿಸಿರುವ ಶಬ್ದಾತೀತ ವೇಗದ (ಸೂಪರ್​ಸಾನಿಕ್) ಬ್ರಹ್ಮೋಸ್ ಸುಧಾರಿತ ಕ್ಷಿಪಣಿಯ ಪ್ರಯೋಗಾರ್ಥ ಪರೀಕ್ಷೆ ಸೋಮವಾರ ಯಶಸ್ವಿಯಾಗಿ ನೆರವೇರಿತು.

ಚಂಡೀಪುರದ ಸಮಗ್ರ ಪರೀಕ್ಷಾ ಪ್ರದೇಶದ (ಐಟಿಆರ್) ಲಾಂಚ್ ಪ್ಯಾಡ್-3ರಿಂದ ಸುಧಾರಿತ ಕ್ಷಿಪಣಿಯನ್ನು ಬೆಳಗ್ಗೆ 10.40ಕ್ಕೆ ಪ್ರಯೋಗಾರ್ಥ ಪರೀಕ್ಷೆ ನಡೆಯಿತು. ಕ್ಷಿಪಣಿಯ ಜೀವಿತಾವಧಿ ಹೆಚ್ಚಿಸುವ ತಂತ್ರಜ್ಞಾನವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ) ಮೊದಲ ಬಾರಿಗೆ ಅಭಿವೃದ್ಧಿಪಡಿಸಿದೆ. ಸುಧಾರಿತ ಕ್ಷಿಪಣಿ ಪರೀಕ್ಷೆಯಿಂದ ಸೇನಾ ಶಸ್ತ್ರಾಸ್ತ್ರ ಸಂಗ್ರಹಾಗಾರದಲ್ಲಿರುವ ಕ್ಷಿಪಣಿಗಳ ಬದಲಾವಣೆಗೆ ತಗುಲುವ ದೊಡ್ಡ ಮೊತ್ತದ ವೆಚ್ಚ ಕಡಿಮೆ ಮಾಡಲಿದೆ ಎಂದು ಡಿಆರ್​ಡಿಒ ಮಾಹಿತಿ ನೀಡಿದೆ.

ಪ್ರಸ್ತುತ ಪರೀಕ್ಷೆ ನಡೆಸಿರುವ ಕ್ಷಿಪಣಿ ಘನರೂಪಿ ನೋದಕ ಶಕ್ತಿ ಮತ್ತು ರಾಮ್ ಜೆಟ್ ದ್ರವರೂಪಿ ನೋದಕಶಕ್ತಿ ಎಂಬ ಎರಡು ಹಂತಗಳನ್ನು ಹೊಂದಿದೆ. 2016ರಲ್ಲಿ ನಡೆದ ಬ್ರಹ್ಮೋಸ್ ಪರೀಕ್ಷೆಯಲ್ಲಿ 290 ಕಿ.ಮೀ. ಇದ್ದ ಗುರಿಯನ್ನು 2017ರ ನಡೆದ ಪರೀಕ್ಷೆಯಲ್ಲಿ 400 ಕಿ.ಮೀ.ಗೆ ಹೆಚ್ಚಳ ಮಾಡಲಾಗಿತ್ತು. ಇದೀಗ ಸುಧಾರಿತ ಪರೀಕ್ಷೆಯಲ್ಲಿ 800 ಕಿ.ಮೀ.ಗೆ ಏರಿಕೆ ಮಾಡಲಾಗಿದ್ದು, ಜಲಾಂತರ್ಗಾಮಿಗೆ ಬ್ರಹ್ಮೋಸ್ ಕ್ಷಿಪಣಿ ಸೇರಿಸುವ ಕಾರ್ಯ ಪ್ರಗತಿಯಲ್ಲಿದೆ.

ಡಿಆರ್ ಡಿಒ ಯಶಸ್ವಿಯಾಗಿ ಸೂಪರ್​ಸಾನಿಕ್ ಬ್ರಹ್ಮೋಸ್ ಸುಧಾರಿತ ಕ್ಷಿಪಣಿ ಪರೀಕ್ಷೆಯನ್ನು ನಡೆಸಿರುವುದಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!

  • Privacy Policy
  • Contact
© Tulunadu Infomedia.

Press enter/return to begin your search