• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೇನೆಗೆ ಬ್ರಹ್ಮೋಸ್ ಬಲ: ಪರೀಕ್ಷಾರ್ಥ ಉಡಾವಣೆ ಯಶಸ್ವಿ

TNN Correspondent Posted On May 22, 2018
0


0
Shares
  • Share On Facebook
  • Tweet It

ಬಾಲಾಸೋರ್: ಒಡಿಶಾದ ಬಾಲಾಸೋರ್ ಕಡಲ ತೀರದಲ್ಲಿ  ಭಾರತ- ರಷ್ಯಾ ಸಹಯೋಗದಲ್ಲಿ ಅಭಿವೃದ್ಧಿ ಪಡಿಸಿರುವ ಶಬ್ದಾತೀತ ವೇಗದ (ಸೂಪರ್​ಸಾನಿಕ್) ಬ್ರಹ್ಮೋಸ್ ಸುಧಾರಿತ ಕ್ಷಿಪಣಿಯ ಪ್ರಯೋಗಾರ್ಥ ಪರೀಕ್ಷೆ ಸೋಮವಾರ ಯಶಸ್ವಿಯಾಗಿ ನೆರವೇರಿತು.

ಚಂಡೀಪುರದ ಸಮಗ್ರ ಪರೀಕ್ಷಾ ಪ್ರದೇಶದ (ಐಟಿಆರ್) ಲಾಂಚ್ ಪ್ಯಾಡ್-3ರಿಂದ ಸುಧಾರಿತ ಕ್ಷಿಪಣಿಯನ್ನು ಬೆಳಗ್ಗೆ 10.40ಕ್ಕೆ ಪ್ರಯೋಗಾರ್ಥ ಪರೀಕ್ಷೆ ನಡೆಯಿತು. ಕ್ಷಿಪಣಿಯ ಜೀವಿತಾವಧಿ ಹೆಚ್ಚಿಸುವ ತಂತ್ರಜ್ಞಾನವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ) ಮೊದಲ ಬಾರಿಗೆ ಅಭಿವೃದ್ಧಿಪಡಿಸಿದೆ. ಸುಧಾರಿತ ಕ್ಷಿಪಣಿ ಪರೀಕ್ಷೆಯಿಂದ ಸೇನಾ ಶಸ್ತ್ರಾಸ್ತ್ರ ಸಂಗ್ರಹಾಗಾರದಲ್ಲಿರುವ ಕ್ಷಿಪಣಿಗಳ ಬದಲಾವಣೆಗೆ ತಗುಲುವ ದೊಡ್ಡ ಮೊತ್ತದ ವೆಚ್ಚ ಕಡಿಮೆ ಮಾಡಲಿದೆ ಎಂದು ಡಿಆರ್​ಡಿಒ ಮಾಹಿತಿ ನೀಡಿದೆ.

ಪ್ರಸ್ತುತ ಪರೀಕ್ಷೆ ನಡೆಸಿರುವ ಕ್ಷಿಪಣಿ ಘನರೂಪಿ ನೋದಕ ಶಕ್ತಿ ಮತ್ತು ರಾಮ್ ಜೆಟ್ ದ್ರವರೂಪಿ ನೋದಕಶಕ್ತಿ ಎಂಬ ಎರಡು ಹಂತಗಳನ್ನು ಹೊಂದಿದೆ. 2016ರಲ್ಲಿ ನಡೆದ ಬ್ರಹ್ಮೋಸ್ ಪರೀಕ್ಷೆಯಲ್ಲಿ 290 ಕಿ.ಮೀ. ಇದ್ದ ಗುರಿಯನ್ನು 2017ರ ನಡೆದ ಪರೀಕ್ಷೆಯಲ್ಲಿ 400 ಕಿ.ಮೀ.ಗೆ ಹೆಚ್ಚಳ ಮಾಡಲಾಗಿತ್ತು. ಇದೀಗ ಸುಧಾರಿತ ಪರೀಕ್ಷೆಯಲ್ಲಿ 800 ಕಿ.ಮೀ.ಗೆ ಏರಿಕೆ ಮಾಡಲಾಗಿದ್ದು, ಜಲಾಂತರ್ಗಾಮಿಗೆ ಬ್ರಹ್ಮೋಸ್ ಕ್ಷಿಪಣಿ ಸೇರಿಸುವ ಕಾರ್ಯ ಪ್ರಗತಿಯಲ್ಲಿದೆ.

ಡಿಆರ್ ಡಿಒ ಯಶಸ್ವಿಯಾಗಿ ಸೂಪರ್​ಸಾನಿಕ್ ಬ್ರಹ್ಮೋಸ್ ಸುಧಾರಿತ ಕ್ಷಿಪಣಿ ಪರೀಕ್ಷೆಯನ್ನು ನಡೆಸಿರುವುದಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search