• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೇನೆಗೆ ಬ್ರಹ್ಮೋಸ್ ಬಲ: ಪರೀಕ್ಷಾರ್ಥ ಉಡಾವಣೆ ಯಶಸ್ವಿ

TNN Correspondent Posted On May 22, 2018
0


0
Shares
  • Share On Facebook
  • Tweet It

ಬಾಲಾಸೋರ್: ಒಡಿಶಾದ ಬಾಲಾಸೋರ್ ಕಡಲ ತೀರದಲ್ಲಿ  ಭಾರತ- ರಷ್ಯಾ ಸಹಯೋಗದಲ್ಲಿ ಅಭಿವೃದ್ಧಿ ಪಡಿಸಿರುವ ಶಬ್ದಾತೀತ ವೇಗದ (ಸೂಪರ್​ಸಾನಿಕ್) ಬ್ರಹ್ಮೋಸ್ ಸುಧಾರಿತ ಕ್ಷಿಪಣಿಯ ಪ್ರಯೋಗಾರ್ಥ ಪರೀಕ್ಷೆ ಸೋಮವಾರ ಯಶಸ್ವಿಯಾಗಿ ನೆರವೇರಿತು.

ಚಂಡೀಪುರದ ಸಮಗ್ರ ಪರೀಕ್ಷಾ ಪ್ರದೇಶದ (ಐಟಿಆರ್) ಲಾಂಚ್ ಪ್ಯಾಡ್-3ರಿಂದ ಸುಧಾರಿತ ಕ್ಷಿಪಣಿಯನ್ನು ಬೆಳಗ್ಗೆ 10.40ಕ್ಕೆ ಪ್ರಯೋಗಾರ್ಥ ಪರೀಕ್ಷೆ ನಡೆಯಿತು. ಕ್ಷಿಪಣಿಯ ಜೀವಿತಾವಧಿ ಹೆಚ್ಚಿಸುವ ತಂತ್ರಜ್ಞಾನವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ) ಮೊದಲ ಬಾರಿಗೆ ಅಭಿವೃದ್ಧಿಪಡಿಸಿದೆ. ಸುಧಾರಿತ ಕ್ಷಿಪಣಿ ಪರೀಕ್ಷೆಯಿಂದ ಸೇನಾ ಶಸ್ತ್ರಾಸ್ತ್ರ ಸಂಗ್ರಹಾಗಾರದಲ್ಲಿರುವ ಕ್ಷಿಪಣಿಗಳ ಬದಲಾವಣೆಗೆ ತಗುಲುವ ದೊಡ್ಡ ಮೊತ್ತದ ವೆಚ್ಚ ಕಡಿಮೆ ಮಾಡಲಿದೆ ಎಂದು ಡಿಆರ್​ಡಿಒ ಮಾಹಿತಿ ನೀಡಿದೆ.

ಪ್ರಸ್ತುತ ಪರೀಕ್ಷೆ ನಡೆಸಿರುವ ಕ್ಷಿಪಣಿ ಘನರೂಪಿ ನೋದಕ ಶಕ್ತಿ ಮತ್ತು ರಾಮ್ ಜೆಟ್ ದ್ರವರೂಪಿ ನೋದಕಶಕ್ತಿ ಎಂಬ ಎರಡು ಹಂತಗಳನ್ನು ಹೊಂದಿದೆ. 2016ರಲ್ಲಿ ನಡೆದ ಬ್ರಹ್ಮೋಸ್ ಪರೀಕ್ಷೆಯಲ್ಲಿ 290 ಕಿ.ಮೀ. ಇದ್ದ ಗುರಿಯನ್ನು 2017ರ ನಡೆದ ಪರೀಕ್ಷೆಯಲ್ಲಿ 400 ಕಿ.ಮೀ.ಗೆ ಹೆಚ್ಚಳ ಮಾಡಲಾಗಿತ್ತು. ಇದೀಗ ಸುಧಾರಿತ ಪರೀಕ್ಷೆಯಲ್ಲಿ 800 ಕಿ.ಮೀ.ಗೆ ಏರಿಕೆ ಮಾಡಲಾಗಿದ್ದು, ಜಲಾಂತರ್ಗಾಮಿಗೆ ಬ್ರಹ್ಮೋಸ್ ಕ್ಷಿಪಣಿ ಸೇರಿಸುವ ಕಾರ್ಯ ಪ್ರಗತಿಯಲ್ಲಿದೆ.

ಡಿಆರ್ ಡಿಒ ಯಶಸ್ವಿಯಾಗಿ ಸೂಪರ್​ಸಾನಿಕ್ ಬ್ರಹ್ಮೋಸ್ ಸುಧಾರಿತ ಕ್ಷಿಪಣಿ ಪರೀಕ್ಷೆಯನ್ನು ನಡೆಸಿರುವುದಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search