• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲಬುರಗಿ ರೈತರ ನೆರವಿಗೆ ಮುಂದಾದ ಆರೆಸ್ಸೆಸ್, ಉಚಿತವಾಗಿ ಎತ್ತು ನೀಡಿ ಶ್ಲಾಘನೀಯ ಕಾರ್ಯ!

TNN Correspondent Posted On May 22, 2018
0


0
Shares
  • Share On Facebook
  • Tweet It

ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಎಂದರೇನೆ ಹಾಗೆ. ಈ ಸಂಘಟನೆ ದೇಶದ ಯಾವುದೇ ಮೂಲೆಯಲ್ಲಿ ಯಾರಿಗೇ ತೊಂದರೆಯಾಗಿ, ತಕ್ಷಣ ಕಾರ್ಯಕರ್ತರು ನೆರವಿಗೆ ಧಾವಿಸುತ್ತಾರೆ. ಪ್ರಕೃತಿ ವಿಕೋಪ ಸೇರಿ ಯಾವುದೇ ದುರ್ಘಟನೆ ಸಂಭವಿಸಿದರೂ ಆರೆಸ್ಸೆಸ್ ಕಾರ್ಯಕರ್ತರು ಅಲ್ಲಿರುತ್ತಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ಸಿನ ಜವಾಹರ್ ಲಾಲ್ ನೆಹರೂ ಅವರು ಆರೆಸ್ಸೆಸ್ ಕಾರ್ಯಕರ್ತರನ್ನು ಕರೆಸಿ ಸನ್ಮಾನ ಮಾಡಿದ್ದರು.

ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಇಂಥಾದ್ದೇ ಮಹತ್ಕಾರ್ಯವೊಂದನ್ನು ಮಾಡಿದ್ದು, ಕಲಬುರಗಿ ಜಿಲ್ಲೆಯ ಗೌಡಗಾಂವ ಗ್ರಾಮದ ಒಂಬತ್ತು ರೈತರಿಗೆ 14 ಎತ್ತುಗಳನ್ನು ಉಚಿತವಾಗಿ ನೀಡುವ ಮೂಲಕ ಮಾನವೀಯತೆ ಮೆರೆದಿದೆ.

ಕಳೆದ ಮೂರ್ನಾಲ್ಕು ವರ್ಷದಿಂದ ಕಲಬುರಗಿ ಸುತ್ತಮುತ್ತ ಬರದ ಪರಿಸ್ಥಿತಿ ಆವರಿಸಿದ್ದು, ರೈತರು ತಮ್ಮ ಜೀವನಕ್ಕೆ ಆಧಾರವಾಗಿದ್ದ ಎತ್ತುಗಳನ್ನೂ ಮಾರಾಟ ಮಾಡಿದ್ದರು. ಆದರೆ ಈಗ ಮಳೆಗಾಲ ಆರಂಭವಾಗಲಿದ್ದು, ಬಿತ್ತನೆ ಮಾಡಲು ಎತ್ತು ಖರೀದಿಸದ ಪರಿಸ್ಥಿತಿಯಲ್ಲಿ ರೈತರು ಇದ್ದರು. ಇದನ್ನು ಗಮನಿಸಿದ ಆರೆಸ್ಸೆಸ್ ಬಡ ರೈತರನ್ನು ಗುರುತಿಸಿ ಎತ್ತುಗಳನ್ನು ಒಪ್ಪಂದದ ಮೂಲಕ ನೀಡಿದೆ.

ಸರಿಯಾಗಿ ಮಳೆಯಾಗದೆ ಬೆಳೆ ಬೆಳೆಯಲು ಸಾಧ್ಯವಾಗದ ಕಾರಣ ನಾವು ಜೀವನಕ್ಕೆ ಆಧಾರವಾಗಿದ್ದ ಎತ್ತುಗಳನ್ನು ಮಾರಾಟ ಮಾಡಲೇಬೇಕಾಗಿತ್ತು. ಆದರೆ ಈ ಬಾರಿ ಮಳೆಯಾದರೆ ಎತ್ತುಗಳಿಲ್ಲದೆ ಹೇಗೆ ಬಿತ್ತನೆ ಮಾಡಬೇಕು ಎಂಬ ಚಿಂತೆಯಲ್ಲಿದ್ದೆವು. ಆದರೆ ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ನಮ್ಮ ನೆರವಿಗೆ ಧಾವಿಸಿದ್ದು, ವ್ಯವಸಾಯ ಮಾಡಲು ತುಂಬ ಸಹಾಯಕವಾಗಿದೆ ಎಂದು ಗೌಡಗಾಂವ್ ಗ್ರಾಮದ ರೈತ ಸಂತೋಷ್ ಸಂತಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ರೈತನೇ ದೇಶದ ಬೆನ್ನೆಲುಬು, ರೈತನೇ ನಮಗೆ ಅನ್ನದಾತ ಎಂಬುದು ಸಾರ್ವಕಾಲಿಕ ಸತ್ಯ. ಅಂತಹ ರೈತರಿಗೆ ಆರೆಸ್ಸೆಸ್ ವತಿಯಿಂದ ಎತ್ತುಗಳನ್ನು ನೀಡಿರುವುದು ಶ್ಲಾಘನೀಯ. ಎಲ್ಲ ಸಂಘಟನೆಗಳೂ ಹೀಗೆ ರೈತರಿಗೆ ನೆರವಾದರೆ, ರೈತ ಕಣ್ಣೀರಲ್ಲಿ ಕೈ ತೊಳೆಯಲಾರ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search