• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲಬುರಗಿ ರೈತರ ನೆರವಿಗೆ ಮುಂದಾದ ಆರೆಸ್ಸೆಸ್, ಉಚಿತವಾಗಿ ಎತ್ತು ನೀಡಿ ಶ್ಲಾಘನೀಯ ಕಾರ್ಯ!

TNN Correspondent Posted On May 22, 2018
0


0
Shares
  • Share On Facebook
  • Tweet It

ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಎಂದರೇನೆ ಹಾಗೆ. ಈ ಸಂಘಟನೆ ದೇಶದ ಯಾವುದೇ ಮೂಲೆಯಲ್ಲಿ ಯಾರಿಗೇ ತೊಂದರೆಯಾಗಿ, ತಕ್ಷಣ ಕಾರ್ಯಕರ್ತರು ನೆರವಿಗೆ ಧಾವಿಸುತ್ತಾರೆ. ಪ್ರಕೃತಿ ವಿಕೋಪ ಸೇರಿ ಯಾವುದೇ ದುರ್ಘಟನೆ ಸಂಭವಿಸಿದರೂ ಆರೆಸ್ಸೆಸ್ ಕಾರ್ಯಕರ್ತರು ಅಲ್ಲಿರುತ್ತಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ಸಿನ ಜವಾಹರ್ ಲಾಲ್ ನೆಹರೂ ಅವರು ಆರೆಸ್ಸೆಸ್ ಕಾರ್ಯಕರ್ತರನ್ನು ಕರೆಸಿ ಸನ್ಮಾನ ಮಾಡಿದ್ದರು.

ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಇಂಥಾದ್ದೇ ಮಹತ್ಕಾರ್ಯವೊಂದನ್ನು ಮಾಡಿದ್ದು, ಕಲಬುರಗಿ ಜಿಲ್ಲೆಯ ಗೌಡಗಾಂವ ಗ್ರಾಮದ ಒಂಬತ್ತು ರೈತರಿಗೆ 14 ಎತ್ತುಗಳನ್ನು ಉಚಿತವಾಗಿ ನೀಡುವ ಮೂಲಕ ಮಾನವೀಯತೆ ಮೆರೆದಿದೆ.

ಕಳೆದ ಮೂರ್ನಾಲ್ಕು ವರ್ಷದಿಂದ ಕಲಬುರಗಿ ಸುತ್ತಮುತ್ತ ಬರದ ಪರಿಸ್ಥಿತಿ ಆವರಿಸಿದ್ದು, ರೈತರು ತಮ್ಮ ಜೀವನಕ್ಕೆ ಆಧಾರವಾಗಿದ್ದ ಎತ್ತುಗಳನ್ನೂ ಮಾರಾಟ ಮಾಡಿದ್ದರು. ಆದರೆ ಈಗ ಮಳೆಗಾಲ ಆರಂಭವಾಗಲಿದ್ದು, ಬಿತ್ತನೆ ಮಾಡಲು ಎತ್ತು ಖರೀದಿಸದ ಪರಿಸ್ಥಿತಿಯಲ್ಲಿ ರೈತರು ಇದ್ದರು. ಇದನ್ನು ಗಮನಿಸಿದ ಆರೆಸ್ಸೆಸ್ ಬಡ ರೈತರನ್ನು ಗುರುತಿಸಿ ಎತ್ತುಗಳನ್ನು ಒಪ್ಪಂದದ ಮೂಲಕ ನೀಡಿದೆ.

ಸರಿಯಾಗಿ ಮಳೆಯಾಗದೆ ಬೆಳೆ ಬೆಳೆಯಲು ಸಾಧ್ಯವಾಗದ ಕಾರಣ ನಾವು ಜೀವನಕ್ಕೆ ಆಧಾರವಾಗಿದ್ದ ಎತ್ತುಗಳನ್ನು ಮಾರಾಟ ಮಾಡಲೇಬೇಕಾಗಿತ್ತು. ಆದರೆ ಈ ಬಾರಿ ಮಳೆಯಾದರೆ ಎತ್ತುಗಳಿಲ್ಲದೆ ಹೇಗೆ ಬಿತ್ತನೆ ಮಾಡಬೇಕು ಎಂಬ ಚಿಂತೆಯಲ್ಲಿದ್ದೆವು. ಆದರೆ ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ನಮ್ಮ ನೆರವಿಗೆ ಧಾವಿಸಿದ್ದು, ವ್ಯವಸಾಯ ಮಾಡಲು ತುಂಬ ಸಹಾಯಕವಾಗಿದೆ ಎಂದು ಗೌಡಗಾಂವ್ ಗ್ರಾಮದ ರೈತ ಸಂತೋಷ್ ಸಂತಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ರೈತನೇ ದೇಶದ ಬೆನ್ನೆಲುಬು, ರೈತನೇ ನಮಗೆ ಅನ್ನದಾತ ಎಂಬುದು ಸಾರ್ವಕಾಲಿಕ ಸತ್ಯ. ಅಂತಹ ರೈತರಿಗೆ ಆರೆಸ್ಸೆಸ್ ವತಿಯಿಂದ ಎತ್ತುಗಳನ್ನು ನೀಡಿರುವುದು ಶ್ಲಾಘನೀಯ. ಎಲ್ಲ ಸಂಘಟನೆಗಳೂ ಹೀಗೆ ರೈತರಿಗೆ ನೆರವಾದರೆ, ರೈತ ಕಣ್ಣೀರಲ್ಲಿ ಕೈ ತೊಳೆಯಲಾರ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search