• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲಬುರಗಿ ರೈತರ ನೆರವಿಗೆ ಮುಂದಾದ ಆರೆಸ್ಸೆಸ್, ಉಚಿತವಾಗಿ ಎತ್ತು ನೀಡಿ ಶ್ಲಾಘನೀಯ ಕಾರ್ಯ!

TNN Correspondent Posted On May 22, 2018
0


0
Shares
  • Share On Facebook
  • Tweet It

ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಎಂದರೇನೆ ಹಾಗೆ. ಈ ಸಂಘಟನೆ ದೇಶದ ಯಾವುದೇ ಮೂಲೆಯಲ್ಲಿ ಯಾರಿಗೇ ತೊಂದರೆಯಾಗಿ, ತಕ್ಷಣ ಕಾರ್ಯಕರ್ತರು ನೆರವಿಗೆ ಧಾವಿಸುತ್ತಾರೆ. ಪ್ರಕೃತಿ ವಿಕೋಪ ಸೇರಿ ಯಾವುದೇ ದುರ್ಘಟನೆ ಸಂಭವಿಸಿದರೂ ಆರೆಸ್ಸೆಸ್ ಕಾರ್ಯಕರ್ತರು ಅಲ್ಲಿರುತ್ತಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ಸಿನ ಜವಾಹರ್ ಲಾಲ್ ನೆಹರೂ ಅವರು ಆರೆಸ್ಸೆಸ್ ಕಾರ್ಯಕರ್ತರನ್ನು ಕರೆಸಿ ಸನ್ಮಾನ ಮಾಡಿದ್ದರು.

ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಇಂಥಾದ್ದೇ ಮಹತ್ಕಾರ್ಯವೊಂದನ್ನು ಮಾಡಿದ್ದು, ಕಲಬುರಗಿ ಜಿಲ್ಲೆಯ ಗೌಡಗಾಂವ ಗ್ರಾಮದ ಒಂಬತ್ತು ರೈತರಿಗೆ 14 ಎತ್ತುಗಳನ್ನು ಉಚಿತವಾಗಿ ನೀಡುವ ಮೂಲಕ ಮಾನವೀಯತೆ ಮೆರೆದಿದೆ.

ಕಳೆದ ಮೂರ್ನಾಲ್ಕು ವರ್ಷದಿಂದ ಕಲಬುರಗಿ ಸುತ್ತಮುತ್ತ ಬರದ ಪರಿಸ್ಥಿತಿ ಆವರಿಸಿದ್ದು, ರೈತರು ತಮ್ಮ ಜೀವನಕ್ಕೆ ಆಧಾರವಾಗಿದ್ದ ಎತ್ತುಗಳನ್ನೂ ಮಾರಾಟ ಮಾಡಿದ್ದರು. ಆದರೆ ಈಗ ಮಳೆಗಾಲ ಆರಂಭವಾಗಲಿದ್ದು, ಬಿತ್ತನೆ ಮಾಡಲು ಎತ್ತು ಖರೀದಿಸದ ಪರಿಸ್ಥಿತಿಯಲ್ಲಿ ರೈತರು ಇದ್ದರು. ಇದನ್ನು ಗಮನಿಸಿದ ಆರೆಸ್ಸೆಸ್ ಬಡ ರೈತರನ್ನು ಗುರುತಿಸಿ ಎತ್ತುಗಳನ್ನು ಒಪ್ಪಂದದ ಮೂಲಕ ನೀಡಿದೆ.

ಸರಿಯಾಗಿ ಮಳೆಯಾಗದೆ ಬೆಳೆ ಬೆಳೆಯಲು ಸಾಧ್ಯವಾಗದ ಕಾರಣ ನಾವು ಜೀವನಕ್ಕೆ ಆಧಾರವಾಗಿದ್ದ ಎತ್ತುಗಳನ್ನು ಮಾರಾಟ ಮಾಡಲೇಬೇಕಾಗಿತ್ತು. ಆದರೆ ಈ ಬಾರಿ ಮಳೆಯಾದರೆ ಎತ್ತುಗಳಿಲ್ಲದೆ ಹೇಗೆ ಬಿತ್ತನೆ ಮಾಡಬೇಕು ಎಂಬ ಚಿಂತೆಯಲ್ಲಿದ್ದೆವು. ಆದರೆ ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ನಮ್ಮ ನೆರವಿಗೆ ಧಾವಿಸಿದ್ದು, ವ್ಯವಸಾಯ ಮಾಡಲು ತುಂಬ ಸಹಾಯಕವಾಗಿದೆ ಎಂದು ಗೌಡಗಾಂವ್ ಗ್ರಾಮದ ರೈತ ಸಂತೋಷ್ ಸಂತಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ರೈತನೇ ದೇಶದ ಬೆನ್ನೆಲುಬು, ರೈತನೇ ನಮಗೆ ಅನ್ನದಾತ ಎಂಬುದು ಸಾರ್ವಕಾಲಿಕ ಸತ್ಯ. ಅಂತಹ ರೈತರಿಗೆ ಆರೆಸ್ಸೆಸ್ ವತಿಯಿಂದ ಎತ್ತುಗಳನ್ನು ನೀಡಿರುವುದು ಶ್ಲಾಘನೀಯ. ಎಲ್ಲ ಸಂಘಟನೆಗಳೂ ಹೀಗೆ ರೈತರಿಗೆ ನೆರವಾದರೆ, ರೈತ ಕಣ್ಣೀರಲ್ಲಿ ಕೈ ತೊಳೆಯಲಾರ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search