• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಲಬುರಗಿ ರೈತರ ನೆರವಿಗೆ ಮುಂದಾದ ಆರೆಸ್ಸೆಸ್, ಉಚಿತವಾಗಿ ಎತ್ತು ನೀಡಿ ಶ್ಲಾಘನೀಯ ಕಾರ್ಯ!

TNN Correspondent Posted On May 22, 2018


  • Share On Facebook
  • Tweet It

ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಎಂದರೇನೆ ಹಾಗೆ. ಈ ಸಂಘಟನೆ ದೇಶದ ಯಾವುದೇ ಮೂಲೆಯಲ್ಲಿ ಯಾರಿಗೇ ತೊಂದರೆಯಾಗಿ, ತಕ್ಷಣ ಕಾರ್ಯಕರ್ತರು ನೆರವಿಗೆ ಧಾವಿಸುತ್ತಾರೆ. ಪ್ರಕೃತಿ ವಿಕೋಪ ಸೇರಿ ಯಾವುದೇ ದುರ್ಘಟನೆ ಸಂಭವಿಸಿದರೂ ಆರೆಸ್ಸೆಸ್ ಕಾರ್ಯಕರ್ತರು ಅಲ್ಲಿರುತ್ತಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ಸಿನ ಜವಾಹರ್ ಲಾಲ್ ನೆಹರೂ ಅವರು ಆರೆಸ್ಸೆಸ್ ಕಾರ್ಯಕರ್ತರನ್ನು ಕರೆಸಿ ಸನ್ಮಾನ ಮಾಡಿದ್ದರು.

ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಇಂಥಾದ್ದೇ ಮಹತ್ಕಾರ್ಯವೊಂದನ್ನು ಮಾಡಿದ್ದು, ಕಲಬುರಗಿ ಜಿಲ್ಲೆಯ ಗೌಡಗಾಂವ ಗ್ರಾಮದ ಒಂಬತ್ತು ರೈತರಿಗೆ 14 ಎತ್ತುಗಳನ್ನು ಉಚಿತವಾಗಿ ನೀಡುವ ಮೂಲಕ ಮಾನವೀಯತೆ ಮೆರೆದಿದೆ.

ಕಳೆದ ಮೂರ್ನಾಲ್ಕು ವರ್ಷದಿಂದ ಕಲಬುರಗಿ ಸುತ್ತಮುತ್ತ ಬರದ ಪರಿಸ್ಥಿತಿ ಆವರಿಸಿದ್ದು, ರೈತರು ತಮ್ಮ ಜೀವನಕ್ಕೆ ಆಧಾರವಾಗಿದ್ದ ಎತ್ತುಗಳನ್ನೂ ಮಾರಾಟ ಮಾಡಿದ್ದರು. ಆದರೆ ಈಗ ಮಳೆಗಾಲ ಆರಂಭವಾಗಲಿದ್ದು, ಬಿತ್ತನೆ ಮಾಡಲು ಎತ್ತು ಖರೀದಿಸದ ಪರಿಸ್ಥಿತಿಯಲ್ಲಿ ರೈತರು ಇದ್ದರು. ಇದನ್ನು ಗಮನಿಸಿದ ಆರೆಸ್ಸೆಸ್ ಬಡ ರೈತರನ್ನು ಗುರುತಿಸಿ ಎತ್ತುಗಳನ್ನು ಒಪ್ಪಂದದ ಮೂಲಕ ನೀಡಿದೆ.

ಸರಿಯಾಗಿ ಮಳೆಯಾಗದೆ ಬೆಳೆ ಬೆಳೆಯಲು ಸಾಧ್ಯವಾಗದ ಕಾರಣ ನಾವು ಜೀವನಕ್ಕೆ ಆಧಾರವಾಗಿದ್ದ ಎತ್ತುಗಳನ್ನು ಮಾರಾಟ ಮಾಡಲೇಬೇಕಾಗಿತ್ತು. ಆದರೆ ಈ ಬಾರಿ ಮಳೆಯಾದರೆ ಎತ್ತುಗಳಿಲ್ಲದೆ ಹೇಗೆ ಬಿತ್ತನೆ ಮಾಡಬೇಕು ಎಂಬ ಚಿಂತೆಯಲ್ಲಿದ್ದೆವು. ಆದರೆ ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ನಮ್ಮ ನೆರವಿಗೆ ಧಾವಿಸಿದ್ದು, ವ್ಯವಸಾಯ ಮಾಡಲು ತುಂಬ ಸಹಾಯಕವಾಗಿದೆ ಎಂದು ಗೌಡಗಾಂವ್ ಗ್ರಾಮದ ರೈತ ಸಂತೋಷ್ ಸಂತಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ರೈತನೇ ದೇಶದ ಬೆನ್ನೆಲುಬು, ರೈತನೇ ನಮಗೆ ಅನ್ನದಾತ ಎಂಬುದು ಸಾರ್ವಕಾಲಿಕ ಸತ್ಯ. ಅಂತಹ ರೈತರಿಗೆ ಆರೆಸ್ಸೆಸ್ ವತಿಯಿಂದ ಎತ್ತುಗಳನ್ನು ನೀಡಿರುವುದು ಶ್ಲಾಘನೀಯ. ಎಲ್ಲ ಸಂಘಟನೆಗಳೂ ಹೀಗೆ ರೈತರಿಗೆ ನೆರವಾದರೆ, ರೈತ ಕಣ್ಣೀರಲ್ಲಿ ಕೈ ತೊಳೆಯಲಾರ.

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
Tulunadu News May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
Tulunadu News May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search