• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾಗಳ ಹಿಂದೂ ವಿರೋಧಿತನಕ್ಕೆ ಮತ್ತೊಂದು ನಿದರ್ಶನ, ಮ್ಯಾನ್ಮಾರ್ ನಲ್ಲಿ ಹಿಂದೂಗಳ ಹತ್ಯೆ

TNN Correspondent Posted On May 23, 2018
0


0
Shares
  • Share On Facebook
  • Tweet It

ಯಾಂಗೂನ್: ಭಾರತದಲ್ಲಿ ಹಾಗೇನೆ. ಮುಸ್ಲಿಮರು ಎಂದ ಕೂಡಲೇ ಅವರು ಎಷ್ಟೇ ಅಪಾಯಕಾರಿಯಾದರೂ ನಮ್ಮವರು ಎಂಬ ಭಾವನೆ ಇಲ್ಲಿನ ಮುಸ್ಲಿಂ ಮುಖಂಡರಿಗೆ, ರಾಜಕಾರಣಿಗಳಿಗೆ, ಕಾಂಗ್ರೆಸ್ಸಿಗರಿಗೆ ಕರಳು ಚುರುಕ್ ಅನ್ನುತ್ತದೆ. ಈ ಮಾತಿಗೆ ನಿದರ್ಶನವಾಗಿ ವಿಶ್ವಕ್ಕೇ ತಲೆನೋವಾಗುವ ಲಕ್ಷಣ ಇರುವ, ಭಾರತದಲ್ಲಿ ಬಂದು ನೆಲೆಸಿರುವ ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡಬೇಕು ಎಂಬ ವಾದವೇ ಇವರ ಆಂತರ್ಯಕ್ಕೆ ಕನ್ನಡಿ ಹಿಡಿಯುತ್ತದೆ.

ಆದರೆ ಈ ರೋಹಿಂಗ್ಯಾ ಮುಸ್ಲಿಮರು ಮಾತ್ರ ತಾವು ಮಾನವ ವಿರೋಧಿಗಳು, ಅದರಲ್ಲೂ ಹಿಂದೂಗಳನ್ನು ಕಂಡರೆ ಆಗದು ಎಂಬ ಉದ್ದೇಶಕ್ಕೆ ಮ್ಯಾನ್ಮಾರ್ ನಲ್ಲೇ ಉತ್ತಮ ನಿದರ್ಶನ ಸಿಕ್ಕಿದ್ದು, ಕಳೆದ ವರ್ಷದ ಆಗಸ್ಟ್ ನಲ್ಲಿ ರೋಹಿಂಗ್ಯಾ ಮುಸ್ಲಿಮರ ತಂಡವೊಂದು ಸುಮಾರು 99ಕ್ಕೂ ಹೆಚ್ಚು ಹಿಂದೂಗಳನ್ನು ಕೊಂದಿದೆ ಎಂದು ತಿಳಿದುಬಂದಿರುವುದು ಆತಂಕ ಮೂಡಿಸಿದೆ.

ಹೌದು, ಈ ಕುರಿತು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಎಂಬ ಸಂಸ್ಥೆ ವರದಿ ಬಿಡುಗಡೆ ಮಾಡಿದ್ದು, ಪೂರ್ವ ಮ್ಯಾನ್ಮಾರ್ ನಲ್ಲಿ ಕಳೆದ ವರ್ಷ 99ಕ್ಕೂ ಹಿಂದೂಗಳನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ಹಿಂದೂಗಳನ್ನು ಭಯಭೀತಗೊಳಿಸಿದೆ.

ಆಸ್ರಾ ಎಂಬ ರೋಹಿಂಗ್ಯಾಗಳ ತಂಡವೊಂದು ಈ ಕೃತ್ಯ ಎಸಗಿದ್ದು, ಹಿಂದೂಗಳ ಮಹಿಳೆಯರು, ಮಕ್ಕಳು ಹಾಗೂ ಪುರುಷರು ಸೇರಿ 99ಕ್ಕೂ ಅಧಿಕ ಜನರನ್ನು ಕೊಂದಿದೆ. ಇದರಲ್ಲಿ ಸುಮಾರು 53 ಜನರನ್ನು ಕೊಲೆ ಮಾಡುವ ಮುನ್ನ ಬಲವಂತವಾಗಿ ಇಸ್ಲಾಮಿಗೆ ಮತಾಂತರ ಸಹ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಮ್ಯಾನ್ಮಾರ್ ನಲ್ಲಿ ಬೌದ್ಧರ ವಿರುದ್ಧ ಸಮರ ಸಾರಿರುವ ರೋಹಿಂಗ್ಯಾ ಮುಸ್ಲಿಮರು ಈಗ ಹಿಂದೂಗಳ ವಿರುದ್ಧವೂ ಕಿಡಿಕಾರುತ್ತಿದ್ದಾರೆ. ಗ್ರಾಮದಲ್ಲಿರುವ ಹಿಂದೂಗಳು ಏಕಾಏಕಿ ಕಾಣೆಯಾಗುತ್ತಿದ್ದಾರೆ. ಸುಮಾರು 70 ಸಾವಿರಕ್ಕೂ ಅಧಿಕ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶಕ್ಕೆ ಅಕ್ರಮವಾಗಿ ವಲಸೆ ಹೋಗಿ ಅಲ್ಲೂ ತಲೆನೋವಾಗುತ್ತಿದ್ದಾರೆ. ಆದರೆ ಭಾರತದಲ್ಲಿ ಮಾತ್ರ ಇಂತಹವರಿಗೆ ಪೋಷಣೆ ಮಾಡಬೇಕು ಎನ್ನುತ್ತಾರೆ. ಬುದ್ಧಿ ಬೇಡವೇ ಇವರಿಗೆ!

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search