• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರಿಂದ ಮತ್ತೊಂದು ದಿಟ್ಟ ನಿರ್ಧಾರ, ಇಂಗ್ಲಿಷ್ ಕಲಿಸುವಂತೆ ಮದರಸಾಗಳಿಗೆ ಸೂಚನೆ!

TNN Correspondent Posted On May 23, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಬಳಿಕ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಅವುಗಳಲ್ಲಿ ನೋಂದಣಿಯಾಗದ  ಮದರಸಾಗಳ ನೋಂದಣಿ ರದ್ದುಗೊಳಿಸಿದ್ದು ಪ್ರಮುಖವಾಗಿದೆ, ಅಷ್ಟೇ ಮದರಸಾಗಳು ಬರೀ ಧರ್ಮಬೋಧನೆಗಷ್ಟೇ ಸೀಮಿತವಾಗದೆ ಎನ್ ಸಿಇಆರ್ ಟಿ ಪಠ್ಯ ಬೋಧಿಸಬೇಕು ಎಂಬುದು ಸಹ ಯೋಗಿ ಆದಿತ್ಯನಾಥರು ತೆಗೆದುಕೊಂಡ ಪ್ರಮುಖ ನಿರ್ಧಾರವಾಗಿದೆ.

ಇಂತಹ ದಿಟ್ಟ ಯೋಗಿ ಆದಿತ್ಯನಾಥರು ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದು, ಮದರಸಾಗಳಲ್ಲಿ ಉರ್ದು ಜತೆಗೆ ಇಂಗ್ಲಿಷ್ ಹಾಗೂ ಹಿಂದಿ ಮಾಧ್ಯಮದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಆದೇಶ ಹೊರಡಿಸಿದ್ದಾರೆ.

ಅದರಲ್ಲೂ ಅರ್ಬಿ-ಫಾರ್ಸಿ ಉರ್ದು ಮದರಸಾ ಬೋರ್ಡ್ ಕಳೆದ ಮೇ 15ರಂದು ನಡೆಸಿದ ಸಭೆಯಲ್ಲಿ ಎಲ್ಲ ಮದರಸಾಗಳೂ ಇಂಗ್ಲಿಷ್ ಹಾಗೂ ಹಿಂದಿ ಮಾಧ್ಯಮದಲ್ಲಿ ಶಿಕ್ಷಣ ನೀಡುವಂತಾಗಬೇಕು ಎಂದು ಸಲಹೆ ನೀಡಲಾಗಿತ್ತು. ಅದರಂತೆ ಉತ್ತರ ಪ್ರದೇಶ ಸಚಿವ ಸಂಪುಟ ಆದೇಶ ಹೊರಡಿಸಿದ್ದು, ಎಲ್ಲ ಮದರಸಾಗಳೂ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಶಿಕ್ಷಣ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಎಲ್ಲ ಮದರಸಾಗಳೂ ಕಡ್ಡಾಯವಾಗಿ ಎನ್ ಸಿಇಆರ್ ಟಿ ಅನ್ವಯ ಇಂಗ್ಲಿಷ್ ಮತ್ತು ಹಿಂದಿ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಜತೆಗೆ, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾದಂತಹ ಮಾನವಿಕ ಹಾಗೂ ಮಕ್ಕಳ ಭವಿಷ್ಯ ರೂಪಿಸುವ ವಿಷಯಗಳನ್ನು ಸಹ ಕಲಿಸಬೇಕು ಎಂದು ಸೂಚಿಸಲಾಗಿದೆ.

ಒಟ್ಟಿನಲ್ಲಿ ಮದರಸಾಗಳು ಎಂದರೆ ಬರೀ ಉರ್ದು ಮಾಧ್ಯಮದಲ್ಲಿ ಶಿಕ್ಷಣ ನೀಡುವ ಹಾಗೂ ಬರೀ ಧರ್ಮಬೋಧನೆಯನ್ನೇ ಮಾಡುವ ಸಂಸ್ಥೆಗಳು ಎನ್ನಲಾಗುತ್ತಿತ್ತು. ಆದರೆ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಬಳಿಕ ಮದರಸಾಗಳ ಚಹರೆಯನ್ನೇ ಬದಲಿಸುತ್ತಿದ್ದು, ಮಕ್ಕಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುವ ಹಾಗೆ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ಬೋಧನೆಗೆ ಅನುವು ಮಾಡಿಕೊಟ್ಟಿರುವುದು ಶ್ಲಾಘನೀಯವಾಗಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search