• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರಿಂದ ಮತ್ತೊಂದು ದಿಟ್ಟ ನಿರ್ಧಾರ, ಇಂಗ್ಲಿಷ್ ಕಲಿಸುವಂತೆ ಮದರಸಾಗಳಿಗೆ ಸೂಚನೆ!

TNN Correspondent Posted On May 23, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಬಳಿಕ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಅವುಗಳಲ್ಲಿ ನೋಂದಣಿಯಾಗದ  ಮದರಸಾಗಳ ನೋಂದಣಿ ರದ್ದುಗೊಳಿಸಿದ್ದು ಪ್ರಮುಖವಾಗಿದೆ, ಅಷ್ಟೇ ಮದರಸಾಗಳು ಬರೀ ಧರ್ಮಬೋಧನೆಗಷ್ಟೇ ಸೀಮಿತವಾಗದೆ ಎನ್ ಸಿಇಆರ್ ಟಿ ಪಠ್ಯ ಬೋಧಿಸಬೇಕು ಎಂಬುದು ಸಹ ಯೋಗಿ ಆದಿತ್ಯನಾಥರು ತೆಗೆದುಕೊಂಡ ಪ್ರಮುಖ ನಿರ್ಧಾರವಾಗಿದೆ.

ಇಂತಹ ದಿಟ್ಟ ಯೋಗಿ ಆದಿತ್ಯನಾಥರು ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದು, ಮದರಸಾಗಳಲ್ಲಿ ಉರ್ದು ಜತೆಗೆ ಇಂಗ್ಲಿಷ್ ಹಾಗೂ ಹಿಂದಿ ಮಾಧ್ಯಮದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಆದೇಶ ಹೊರಡಿಸಿದ್ದಾರೆ.

ಅದರಲ್ಲೂ ಅರ್ಬಿ-ಫಾರ್ಸಿ ಉರ್ದು ಮದರಸಾ ಬೋರ್ಡ್ ಕಳೆದ ಮೇ 15ರಂದು ನಡೆಸಿದ ಸಭೆಯಲ್ಲಿ ಎಲ್ಲ ಮದರಸಾಗಳೂ ಇಂಗ್ಲಿಷ್ ಹಾಗೂ ಹಿಂದಿ ಮಾಧ್ಯಮದಲ್ಲಿ ಶಿಕ್ಷಣ ನೀಡುವಂತಾಗಬೇಕು ಎಂದು ಸಲಹೆ ನೀಡಲಾಗಿತ್ತು. ಅದರಂತೆ ಉತ್ತರ ಪ್ರದೇಶ ಸಚಿವ ಸಂಪುಟ ಆದೇಶ ಹೊರಡಿಸಿದ್ದು, ಎಲ್ಲ ಮದರಸಾಗಳೂ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಶಿಕ್ಷಣ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಎಲ್ಲ ಮದರಸಾಗಳೂ ಕಡ್ಡಾಯವಾಗಿ ಎನ್ ಸಿಇಆರ್ ಟಿ ಅನ್ವಯ ಇಂಗ್ಲಿಷ್ ಮತ್ತು ಹಿಂದಿ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಜತೆಗೆ, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾದಂತಹ ಮಾನವಿಕ ಹಾಗೂ ಮಕ್ಕಳ ಭವಿಷ್ಯ ರೂಪಿಸುವ ವಿಷಯಗಳನ್ನು ಸಹ ಕಲಿಸಬೇಕು ಎಂದು ಸೂಚಿಸಲಾಗಿದೆ.

ಒಟ್ಟಿನಲ್ಲಿ ಮದರಸಾಗಳು ಎಂದರೆ ಬರೀ ಉರ್ದು ಮಾಧ್ಯಮದಲ್ಲಿ ಶಿಕ್ಷಣ ನೀಡುವ ಹಾಗೂ ಬರೀ ಧರ್ಮಬೋಧನೆಯನ್ನೇ ಮಾಡುವ ಸಂಸ್ಥೆಗಳು ಎನ್ನಲಾಗುತ್ತಿತ್ತು. ಆದರೆ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಬಳಿಕ ಮದರಸಾಗಳ ಚಹರೆಯನ್ನೇ ಬದಲಿಸುತ್ತಿದ್ದು, ಮಕ್ಕಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುವ ಹಾಗೆ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ಬೋಧನೆಗೆ ಅನುವು ಮಾಡಿಕೊಟ್ಟಿರುವುದು ಶ್ಲಾಘನೀಯವಾಗಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search