• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಂತಿ ಮಾರ್ಗದಲ್ಲಿ ಬಂದರೆ ಸರಿ, ಇಲ್ಲದಿದ್ದರೇ ತಕ್ಕ ಪ್ರತ್ಯುತ್ತರ: ರಾಜನಾಥ್ ಸಿಂಗ್

TNN Correspondent Posted On May 23, 2018
0


0
Shares
  • Share On Facebook
  • Tweet It

ದೆಹಲಿ: ಪವಿತ್ರ ರಮ್ಜಾನ್‌ ಮಾಸದಲ್ಲಿ ಭಾರತ ಕದನ ವಿರಾಮ ಘೋಷಿಸಿದ್ದರೂ, ಪಾಕಿಸ್ತಾನ ತನ್ನ ನರಿ ಬುದ್ಧಿ ತೋರಿಸುತ್ತಿದ್ದು, ಅಪ್ರಚೋದಿತ ಗುಂಡಿನ ದಾಳಿಯನ್ನು ಮುಂದುವರಿಸಿದೆ. ಇಂತಹ ಸಂದಿಗ್ದ ಸ್ಥಿತಿಯಲ್ಲಿ ಶತ್ರು ರಾಷ್ಟ್ರಕ್ಕೆ ಯಾವ ರೀತಿ ಪ್ರತ್ಯುತ್ತರ ನೀಡಬೇಕು ಎಂಬುದು ನಮ್ಮ ಭದ್ರತಾ ಪಡೆಗಳಿಗೆ ತಿಳಿದಿದೆ. ಅವರು ತಕ್ಕ ಪ್ರತ್ಯುತ್ತರ ನೀಡುತ್ತಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಪಾಕಿಸ್ತಾನಕ್ಕೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಗಡಿ ಭದ್ರತಾ ಪಡೆಯ 16ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸದೇ, ತರಾಟೆಗೆ ತೆಗೆದುಕೊಂಡರು. ಭಾರತ ಶಾಂತಿ ಬಯಸುತ್ತಿದೆ. ಆದರೂ ಪಕ್ಕದ ರಾಷ್ಟ್ರ ಉತ್ತಮ ಸ್ಪಂದನೆ ತೋರುತ್ತಿಲ್ಲ. ಹಲವು ಭಾರಿ ಏಟು ಬಿದ್ದರೂ ಪಾಠ ಕಲಿಯದ ಪಕ್ಕದ ರಾಷ್ಟ್ರದ ವರ್ತನೆ ಅರ್ಥ ಮಾಡಿಕೊಳ್ಳುವುದೇ ಕಷ್ಟಕರವಾಗಿದೆ ಎಂದು ಹೇಳಿದರು.

ಬಿಎಸ್ ಎಫ ಮತ್ತು ಇತರ ಭದ್ರತಾ ಪಡೆಗಳಿಗೆ ಶತ್ರುಗಳತ್ತ ಮೊದಲು ಗುಂಡು ಹಾರಿಸಬಾರದು ಎಂದು ಸೂಚಿಸಲಾಗಿದೆ. ಆದರೆ ಶತ್ರುಗಳಿಂದ ಗುಂಡು ಬಂದರೇ ತಕ್ಕ ಪ್ರತ್ಯುತ್ತರ ನೀಡಬೇಕು ಎಂಬದು ಸೈನ್ಯಕ್ಕೆ ಬಿಟ್ಟ ವಿಚಾರ. ಇದನ್ನು ಸರ್ಕಾರ ಪ್ರಶ್ನಿಸುವುದಿಲ್ಲ ಎಂದು ಹೇಳಿದರು.  ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ಹೊಂದಿಕೊಂಡಿರುವ ಗಡಿ ಭಾಗದಲ್ಲಿ ರಕ್ಷಣೆ ಮತ್ತು ಅಕ್ರಮ ನುಸುಳುವಿಕೆ ತಡೆಯಲು ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಸ್ಮಾರ್ಟ್‌ ಬೇಲಿ ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search