• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರೆಂಬ ಮುಖ್ಯಮಂತ್ರಿ, ಪಿಎಂ ಅಭ್ಯರ್ಥಿ ರಾಹುಲ್ ಗಾಂಧಿಯನ್ನು ಸೋಲಿಸಿಬಿಟ್ಟರಲ್ಲ!

TNN Correspondent Posted On May 24, 2018
0


0
Shares
  • Share On Facebook
  • Tweet It

ಕರ್ನಾಟದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆ ನಾನಾ ಕಾರಣಗಳಿಗಾಗಿ ರಂಗೇರಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಆಡಳಿತದ ವಿರೋಧಿ ಅಲೆ, ನರೇಂದ್ರ ಮೋದಿ ಅವರ ವರ್ಚಸ್ಸು, ಯಡಿಯೂರಪ್ಪನವರ ನಾಯಕತ್ವ ಸೇರಿ ಹಲವು ವಿಷಯಗಳು ಗಮನ ಸೆಳೆದಿದ್ದವು.

ಇದರ ನಡುವೆಯೇ ರಾಹುಲ್ ಗಾಂಧಿಯವರು ರಾಜ್ಯಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡಿದರು. ಇವನರ್ವ ಇವನರ್ವ ಎಂದು ಬಸವಣ್ಣರ ವಚನವನ್ನೂ ವಿರೂಪಗೊಳಿಸಿದರು. ಅಂದಹಾಗೆ ರಾಹುಲ್ ಗಾಂಧಿಯವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಾದ್ಯಂತ 32 ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಅತ್ತ ಬಿಜೆಪಿಯೇನೂ ಕಡಿಮೆ ಇರಲಿಲ್ಲ. ಫೈರ್ ಬ್ರ್ಯಾಂಡ್ ಮುಖ್ಯಮಂತ್ರಿ ಎಂದೇ ಖ್ಯಾತಿಯಾದ ಯೋಗಿ ಆದಿತ್ಯನಾಥರು ಕರೆಸಿ ಸಮಾವೇಶ ಮಾಡಿಸಿದರು. ಯೋಗಿ ಆದಿತ್ಯನಾಥರೂ ಜಿದ್ದಿಗೆ ಬಿದ್ದಹಾಗೆ 35 ರ್ಯಾಲಿಗಳಲ್ಲಿ ಭಾಗವಹಿಸಿ ಕಾಂಗ್ರೆಸ್ಸಿನ ಮುಖವಾಡ ಬಯಲು ಮಾಡಿದರು.

ಹಾಗಾದರೆ ಈ ಇಬ್ಬರೂ ನಾಯಕರು ರ್ಯಾಲಿ ಮಾಡಿದ ಕ್ಷೇತ್ರಗಳಲ್ಲಿ ಇವರ ಪಕ್ಷದ ಅಭ್ಯರ್ಥಿಗಳೇ ಗೆದ್ದಿದ್ದಾರಾ? ಗೆದ್ದಿದ್ದಾರೆ ಎಂದರೆ ಎಷ್ಟು ಅಭ್ಯರ್ಥಿಗಳು ಗೆದ್ದಿದ್ದಾರೆ? ಯಾವ ನಾಯಕರು ಭಾಷಣ ಮಾಡಿದ ಕ್ಷೇತ್ರದಲ್ಲಿ ಯಾರು ಜಾಸ್ತಿ ಗೆದ್ದಿದ್ದಾರೆ? ಇಂಥಾದ್ದೊಂದು ಕುತೂಹಲ ಮೂಡಿದ್ದರೆ, ಅದಕ್ಕೆ ಆರ್ಗನೈಸರ್ ಸಂಸ್ಥೆ ಉತ್ತರ ನೀಡಿದೆ.

ಹೌದು, ಹೀಗೆ ಸಾಲು ಸಾಲು ಕ್ಷೇತ್ರಗಳಲ್ಲಿ ಸಮಾವೇಶ ಮಾಡಿದವರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೇ ಮುನ್ನಡೆ ಯಾಗಿದೆ. ರಾಹುಲ್ ಗಾಂದಿ ಮಾಡಿದ 32 ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿನ 17 ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸಿದ್ದಾರೆ. ಆದರೆ 32 ರ್ಯಾಲಿಗಳನ್ನು ಯೋಗಿ ಆದಿತ್ಯನಾಥರು ಮಾಡಿದ್ದು, ಅದರಲ್ಲಿ 23 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ.

ಅಲ್ಲಿಗೆ ಅನುಪಾತದ ಪ್ರಕಾರ ಯೋಗಿ ಆದಿತ್ಯನಾಥರೇ ಮುನ್ನಡೆ ಸಾಧಿಸಿದ್ದಾರೆ. ಒಬ್ಬ ಮುಖ್ಯಮಂತ್ರಿಯಾದವರು ಪ್ರಧಾನಿ ಅಭ್ಯರ್ಥಿಯನ್ನೇ ಹಿಂದಿಕ್ಕಿದ್ದನ್ನು ನೋಡಿದರೆ, ರಾಹುಲ್ ಗಾಂಧಿಯವರ ನಾಯಕತ್ವವನ್ನೇ ಪ್ರಶ್ನಿಸುವಂತಿದೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search