• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾವೂದ್ ಇಬ್ರಾಹಿಂ ಸಹಚರನಿಂದ ಉತ್ತರ ಪ್ರದೇಶ ಬಿಜೆಪಿ ಶಾಸಕರಿಗೆ ಬೆದರಿಕೆ ಕರೆ

TNN Correspondent Posted On May 24, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾದ ನಂತರ ಯುಪಿಯಲ್ಲಿ ನಾಯಿಕೊಡೆಗಳಂತೆ ತಲೆಎತ್ತಿದ್ದ ರೌಡಿಗಳನ್ನು ಮಟ್ಟಹಾಕಲು ಕೈಗೊಂಡ ನಿಯಮಗಳಿಂದ ಇದೀಗ ಜನ ನೆಮ್ಮದಿಯಿಂದ ಇದ್ದಾರೆ. ಆದರೆ ಯೋಗಿ ಸರ್ಕಾರದ ಏಟಿನಿಂದ ಕಂಗಾಲಾಗಿರುವ ರೌಡಿಗಳು, , ಅಂಡರ್ ವಲ್ಡ್ ಸಂಪರ್ಕ ಹೊಂದಿರುವ ರೌಡಿಗಳು ಬಿಜೆಪಿ ಶಾಸಕರನ್ನು, ಮುಖಂಡರನ್ನು ಬೆದರಿಸುವ ಕಾರ್ಯಕ್ಕೆ ಇಳಿದಿದ್ದಾರೆ. ಆದರೆ ಬೆದರಿಕೆ ಬಗ್ಗದೇ ಮುನ್ನುಗುತ್ತಿರುವ ಯೋಗಿ ಆದಿನ್ಯಾಥ ಶಾಸಕರಿಗೆ ಬೆದರಿಕೆ ಒಡಿದವರನ್ನು ಹೆಡೆಮುರಿಕಟ್ಟುವಂತೆ ಆದೇಶ ನೀಡಿದ್ದಾರೆ. ತನಿಖೆಗೆಗಾಗಿ ಎಸ್ ಐಟಿ ನೇಮಕ ಮಾಡಿದ್ದಾರೆ.

ಉತ್ತರ ಪ್ರದೇಶದ 12 ಬಿಜೆಪಿ ಶಾಸಕರಿಗೆ ಅಂಡರ್ ವಲ್ಡ್ ಡಾನ್ ದಾವೂದ್ ಇಬ್ರಾಹಿಂ ಸಹಚರರು ಎನ್ನಲಾದ ಕೆಲವರು ವಾಟ್ಸ್ ಆ್ಯಪ್, ಮೆಸೆಂಜರ್ ಮತ್ತು ಕರೆ ಮಾಡುವ ಮೂಲಕ ಬೆದರಿಕೆಯ ಸಂದೇಶ ಕಳುಹಿಸಿದ್ದಾರೆ. ಅಲ್ಲದೇ 10ಲಕ್ಷ ಹಣ ನೀಡಲು ಬೇಡಿಕೆ ಇಟ್ಟಿದ್ದಾರೆ. ಮೂರು ದಿನದಲ್ಲಿ 10 ಲಕ್ಷ ರೂಪಾಯಿ ನೀಡದಿದ್ದಲ್ಲಿ ನಿಮ್ಮ ಕುಟುಂಬದವರನ್ನು ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

ವೀರ ವಿಕ್ರಮ ಸಿಂಗ್, ಮನ್ವೇಂದ್ರ ಸಿಂಗ್, ಪ್ರೇಮ ಪ್ರಕಾಶ ಪಾಂಡೆ, ವಿಜಯಕುಮಾರ ದ್ವಿವೇದಿ, ವಿನೋದ ಕಟಿಯಾರ್, ಶಶಾಂಕ್ ತ್ರಿವೇದಿ, ಅನಿತಾ ರಜಪೂತ ಸೇರಿ ಹಲವು ಶಾಸಕರಿಗೆ ಬೆದರಿಕೆ ಸಂದೇಶಗಳು, ಕರೆಗಳು ಬಂದಿವೆ. ಕರೆಗಳು ಅಂಡರ್ ವಲ್ಡ್ ಡಾನ್ ದಾವೂದ್ ಇಬ್ರಾಹಿಂ ಸಹಚರನಾಗಿದ್ದವನಿಂದ ಪಾಕ್ ಮೂಲದ ವ್ಯಕ್ತಿಯಿಂದ ಬಂದಿವೆ ಎಂದು ವರದಿಗಳಾಗಿವೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ‘ಶಾಸಕರಿಗೆ ಬೆದರಿಕೆ ಕರೆ ಮಾಡಿರುವ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ತನಿಖೆ ನೇತೃತ್ವವನ್ನು ವಿಶೇಷ ತನಿಖಾ ತಂಡಕ್ಕೆ(ಎಸ್ ಐಟಿ) ವಹಿಸಿದ್ದಾರೆ. ಅಲ್ಲದೇ ಭಯೋತ್ಪಾದನಾ ನಿಯಂತ್ರಣಾ ದಳಕ್ಕೂ ಈ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ಪ್ರಸ್ತುತ ಕರೆ ಮಾಡಿರುವ ವ್ಯಕ್ತಿ ತಾನೇ ದುಬೈನ ಅಲಿ ಬುದೇಶ್ ಬಾಯ್ ಎಂದು ಹೇಳಿಕೊಂಡಿದ್ದಾನೆ. ಆದರೆ ಕರೆಗಳ ಬೆನ್ನುತ್ತಿರುವ ಪೊಲೀಸರಿಗೆ ಕರೆ ಮಾಡಿರುವ ವ್ಯಕ್ತಿ ದಾವೂದ್ ಇಬ್ರಾಹಿಂ ಬಂಟನ್ನೆಂದು ತಿಳಿದು ಬಂದಿದೆ. ಈ ವ್ಯಕ್ತಿ 1990ದಶಕದಲ್ಲಿ ದೇಶದಲ್ಲಿ ಸಿನಿಮಾ ನಟರಿಗೆ ಈ ರೀತಿಯ ಬೆದರಿಕೆ ಒಡ್ಡಲಾಗುತ್ತಿತ್ತು. ದಾವೂದ್ ಬಂಟ 1998ಲ್ಲಿ ಬಹ್ರೇನ್ ಗೆ ಹೋಗಿದ್ದು, ಅಲ್ಲಿಯೇ ವಾಸವಾಗಿದ್ದಾನೆ. ಆತನಿಂದ ಹಲವು ದಿನಗಳಿಂದ ಇಂತಹ ಕೃತ್ಯಗಳು ಕಂಡು ಬಂದಿಲ್ಲ. ಆದರೆ ಪ್ರಸ್ತುತ ಮತ್ತೆ ದುಷ್ಕೃತ್ಯ ನಡೆಸಿರಬೇಕು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search