• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾವೂದ್ ಇಬ್ರಾಹಿಂ ಸಹಚರನಿಂದ ಉತ್ತರ ಪ್ರದೇಶ ಬಿಜೆಪಿ ಶಾಸಕರಿಗೆ ಬೆದರಿಕೆ ಕರೆ

TNN Correspondent Posted On May 24, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾದ ನಂತರ ಯುಪಿಯಲ್ಲಿ ನಾಯಿಕೊಡೆಗಳಂತೆ ತಲೆಎತ್ತಿದ್ದ ರೌಡಿಗಳನ್ನು ಮಟ್ಟಹಾಕಲು ಕೈಗೊಂಡ ನಿಯಮಗಳಿಂದ ಇದೀಗ ಜನ ನೆಮ್ಮದಿಯಿಂದ ಇದ್ದಾರೆ. ಆದರೆ ಯೋಗಿ ಸರ್ಕಾರದ ಏಟಿನಿಂದ ಕಂಗಾಲಾಗಿರುವ ರೌಡಿಗಳು, , ಅಂಡರ್ ವಲ್ಡ್ ಸಂಪರ್ಕ ಹೊಂದಿರುವ ರೌಡಿಗಳು ಬಿಜೆಪಿ ಶಾಸಕರನ್ನು, ಮುಖಂಡರನ್ನು ಬೆದರಿಸುವ ಕಾರ್ಯಕ್ಕೆ ಇಳಿದಿದ್ದಾರೆ. ಆದರೆ ಬೆದರಿಕೆ ಬಗ್ಗದೇ ಮುನ್ನುಗುತ್ತಿರುವ ಯೋಗಿ ಆದಿನ್ಯಾಥ ಶಾಸಕರಿಗೆ ಬೆದರಿಕೆ ಒಡಿದವರನ್ನು ಹೆಡೆಮುರಿಕಟ್ಟುವಂತೆ ಆದೇಶ ನೀಡಿದ್ದಾರೆ. ತನಿಖೆಗೆಗಾಗಿ ಎಸ್ ಐಟಿ ನೇಮಕ ಮಾಡಿದ್ದಾರೆ.

ಉತ್ತರ ಪ್ರದೇಶದ 12 ಬಿಜೆಪಿ ಶಾಸಕರಿಗೆ ಅಂಡರ್ ವಲ್ಡ್ ಡಾನ್ ದಾವೂದ್ ಇಬ್ರಾಹಿಂ ಸಹಚರರು ಎನ್ನಲಾದ ಕೆಲವರು ವಾಟ್ಸ್ ಆ್ಯಪ್, ಮೆಸೆಂಜರ್ ಮತ್ತು ಕರೆ ಮಾಡುವ ಮೂಲಕ ಬೆದರಿಕೆಯ ಸಂದೇಶ ಕಳುಹಿಸಿದ್ದಾರೆ. ಅಲ್ಲದೇ 10ಲಕ್ಷ ಹಣ ನೀಡಲು ಬೇಡಿಕೆ ಇಟ್ಟಿದ್ದಾರೆ. ಮೂರು ದಿನದಲ್ಲಿ 10 ಲಕ್ಷ ರೂಪಾಯಿ ನೀಡದಿದ್ದಲ್ಲಿ ನಿಮ್ಮ ಕುಟುಂಬದವರನ್ನು ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

ವೀರ ವಿಕ್ರಮ ಸಿಂಗ್, ಮನ್ವೇಂದ್ರ ಸಿಂಗ್, ಪ್ರೇಮ ಪ್ರಕಾಶ ಪಾಂಡೆ, ವಿಜಯಕುಮಾರ ದ್ವಿವೇದಿ, ವಿನೋದ ಕಟಿಯಾರ್, ಶಶಾಂಕ್ ತ್ರಿವೇದಿ, ಅನಿತಾ ರಜಪೂತ ಸೇರಿ ಹಲವು ಶಾಸಕರಿಗೆ ಬೆದರಿಕೆ ಸಂದೇಶಗಳು, ಕರೆಗಳು ಬಂದಿವೆ. ಕರೆಗಳು ಅಂಡರ್ ವಲ್ಡ್ ಡಾನ್ ದಾವೂದ್ ಇಬ್ರಾಹಿಂ ಸಹಚರನಾಗಿದ್ದವನಿಂದ ಪಾಕ್ ಮೂಲದ ವ್ಯಕ್ತಿಯಿಂದ ಬಂದಿವೆ ಎಂದು ವರದಿಗಳಾಗಿವೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ‘ಶಾಸಕರಿಗೆ ಬೆದರಿಕೆ ಕರೆ ಮಾಡಿರುವ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ತನಿಖೆ ನೇತೃತ್ವವನ್ನು ವಿಶೇಷ ತನಿಖಾ ತಂಡಕ್ಕೆ(ಎಸ್ ಐಟಿ) ವಹಿಸಿದ್ದಾರೆ. ಅಲ್ಲದೇ ಭಯೋತ್ಪಾದನಾ ನಿಯಂತ್ರಣಾ ದಳಕ್ಕೂ ಈ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ಪ್ರಸ್ತುತ ಕರೆ ಮಾಡಿರುವ ವ್ಯಕ್ತಿ ತಾನೇ ದುಬೈನ ಅಲಿ ಬುದೇಶ್ ಬಾಯ್ ಎಂದು ಹೇಳಿಕೊಂಡಿದ್ದಾನೆ. ಆದರೆ ಕರೆಗಳ ಬೆನ್ನುತ್ತಿರುವ ಪೊಲೀಸರಿಗೆ ಕರೆ ಮಾಡಿರುವ ವ್ಯಕ್ತಿ ದಾವೂದ್ ಇಬ್ರಾಹಿಂ ಬಂಟನ್ನೆಂದು ತಿಳಿದು ಬಂದಿದೆ. ಈ ವ್ಯಕ್ತಿ 1990ದಶಕದಲ್ಲಿ ದೇಶದಲ್ಲಿ ಸಿನಿಮಾ ನಟರಿಗೆ ಈ ರೀತಿಯ ಬೆದರಿಕೆ ಒಡ್ಡಲಾಗುತ್ತಿತ್ತು. ದಾವೂದ್ ಬಂಟ 1998ಲ್ಲಿ ಬಹ್ರೇನ್ ಗೆ ಹೋಗಿದ್ದು, ಅಲ್ಲಿಯೇ ವಾಸವಾಗಿದ್ದಾನೆ. ಆತನಿಂದ ಹಲವು ದಿನಗಳಿಂದ ಇಂತಹ ಕೃತ್ಯಗಳು ಕಂಡು ಬಂದಿಲ್ಲ. ಆದರೆ ಪ್ರಸ್ತುತ ಮತ್ತೆ ದುಷ್ಕೃತ್ಯ ನಡೆಸಿರಬೇಕು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search