• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಪಾಕ್ ರಾಯಭಾರಿಯ ಕರೆ ಕದ್ದಾಲಿಸಿ ಐಎಸ್ಐಗೆ ಸಾಥ್ ನೀಡಿದ ಅಡುಗೆ ಸಹಾಯಕನ ಬಂಧನ

TNN Correspondent Posted On May 24, 2018
0


0
Shares
  • Share On Facebook
  • Tweet It

ಲಖನೌ: ಪಾಕಿಸ್ತಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತದ ರಾಯಭಾರಿ ನಿವಾಸದ ಕದ್ದಾಲಿಕೆ ಮಾಡಿದ ಆರೋಪಿ, ಉತ್ತರ ಖಂಡದ ಪಿತ್ತೋರ್ ಗಡ್ ಮೂಲದ ಅಡುಗೆಯವನನ್ನು ಪೊಲೀಸರು ಬಂಧಿಸಿದ್ದಾರೆ. ಐಎಸ್‌ಐಗೆ ನೆರವು ನೀಡಿರುವ ಮತ್ತು ಹಣಕ್ಕಾಗಿ ಮಹತ್ವದ ಮಾಹಿತಿಯನ್ನು ಸೋರಿಕೆ ಮಾಡಿದ್ದಾನೆ ಎಂಬ ಆರೋಪದಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಪಿತ್ತೋರ್‌ಗಢ ದ ಗರಾಲಿ ಗ್ರಾಮದ 35 ವರ್ಷದ ರಮೇಶ್ ಸಿಂಗ್‌ನನ್ನು ಆತನ ನಿವಾಸದಲ್ಲೇ ಬಂಧಿಸಲಾಗಿದೆ. ಉತ್ತರ ಪ್ರದೇಶದ ಭದ್ರತಾ ವಿರೋಧಿ ದಳ, ಸೇನೆ ಗುಪ್ತಚರ ಇಲಾಖೆ ಹಾಗೂ ಉತ್ತರಾಖಂಡ ಪೊಲೀಸರು ಜಂಟಿಯಾಗಿ ಬಂಧಿಸಿದ್ದಾರೆ.  ಪಾಕಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದ ಭಾರತದ ರಕ್ಷಣಾ ಅಧಿಕಾರಿಯ ನಿವಾಸದಿಂದ ಮಹತ್ವದ ಮಾಹಿತಿಯನ್ನು ಐಎಸ್ ಐ ಸಹಕಾರದಲ್ಲಿ ಕದ್ದಾಲಿಕೆ ಮಾಡುತ್ತಿದ್ದ. ಭಾರತ ರಾಯಭಾರಿ ಮನೆಯಲ್ಲಿ ಅಡುಗೆಯವನಾಗಿ ಕಾರ್ಯ ನಿರ್ವಹಿಸುತ್ತಿದ್ದ. ರಮೇಶ್ ಸಿಂಗ್ ನ ಸಹೋದರ ಭಾರತೀಯ ಸೇನೆಯ ಅಧಿಕಾರಿಯ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಪಿತ್ತೋರ್‌ಗಢ ಕೋರ್ಟ್‌ಗೆ ರಮೇಶ್‌ ಸಿಂಗ್‌ನನ್ನು ಹಾಜರುಪಡಿಸಿದ್ದು, ಲಖನೌಗೆ ಕರೆದೊಯ್ಯಲಾಗಿದೆ. ಈ ಪ್ರಕರಣದ ಬಗ್ಗೆ ಉತ್ತರಾಖಂಡ ಡಿಜಿಪಿ ಉತ್ತರ ಪ್ರದೇಶದ ಎಟಿಎಸ್‌ ಅಧಿಕಾರಿಗಳ ನೆರವು ಕೋರಿದ್ದರು ಎಂದು ಯುಪಿಯ ಎಟಿಎಸ್‌ ಐಜಿ ಆಸಿಮ್ ಅರುಣ್ ಮಾಹಿತಿ ನೀಡಿದ್ದಾರೆ. ಮಿಲಿಟರಿ ಗುಪ್ತಚರ ಇಲಾಖೆಯ ನಿರ್ದೇಶಕರ ನೆರವನ್ನೂ ಪಡೆಯಲಾಗಿದೆ.

ರೈತನಾಗಿರುವ ರಮೇಶ್‌ ಸಿಂಗ್‌ಗೆ ಸಂಬಂಧಿಕರೊಬ್ಬರು ಪಾಕಿಸ್ತಾನದಲ್ಲಿ ಅಡುಗೆ ಕೆಲಸ ಕೊಡಿಸಿದ್ದಾರೆ. ಬಳಿಕ, ಈತ 2015ರ ಮಧ್ಯಭಾಗದಿಂದ 2017 ಸೆಪ್ಟೆಂಬರ್‌ವರೆಗೆ ಭಾರತ ರಕ್ಷಣಾ ಇಲಾಖೆಯ ಅಧಿಕಾರಿಯ ನಿವಾಸದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಐಎಸ್‌ಐ ಸಂಪರ್ಕ ಸಾಧಿಸಿರುವ ಸಿಂಗ್, ಅಧಿಕಾರಿಯ ಮನೆಯಲ್ಲಿ ಪ್ರಮುಖ ದಾಖಲೆ ಸೋರಿಕೆ ಮಾಡಲು ಹಣ ಪಡೆಯುತ್ತಿದ್ದ. ಅಧಿಕಾರಿಯ ಡೈರಿ ಸೇರಿ ಹಲವು ಮಾಹಿತಿ ಐಎಸ್ ಐಗೆ ನೀಡುತ್ತಿದ್ದ ಎನ್ನಲಾಗಿದೆ. ಐಎಸ್‌ಐನಿಂದ ಆರೋಪಿ ಎಷ್ಟು ಹಣ ಪಡೆದಿದ್ದಾನೆ ಎಂದು ಇನ್ನೂ ಗೊತ್ತಾಗಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆನಂದ್ ಕುಮಾರ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search