• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತದ ಪಾಕ್ ರಾಯಭಾರಿಯ ಕರೆ ಕದ್ದಾಲಿಸಿ ಐಎಸ್ಐಗೆ ಸಾಥ್ ನೀಡಿದ ಅಡುಗೆ ಸಹಾಯಕನ ಬಂಧನ

TNN Correspondent Posted On May 24, 2018


  • Share On Facebook
  • Tweet It

ಲಖನೌ: ಪಾಕಿಸ್ತಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತದ ರಾಯಭಾರಿ ನಿವಾಸದ ಕದ್ದಾಲಿಕೆ ಮಾಡಿದ ಆರೋಪಿ, ಉತ್ತರ ಖಂಡದ ಪಿತ್ತೋರ್ ಗಡ್ ಮೂಲದ ಅಡುಗೆಯವನನ್ನು ಪೊಲೀಸರು ಬಂಧಿಸಿದ್ದಾರೆ. ಐಎಸ್‌ಐಗೆ ನೆರವು ನೀಡಿರುವ ಮತ್ತು ಹಣಕ್ಕಾಗಿ ಮಹತ್ವದ ಮಾಹಿತಿಯನ್ನು ಸೋರಿಕೆ ಮಾಡಿದ್ದಾನೆ ಎಂಬ ಆರೋಪದಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಪಿತ್ತೋರ್‌ಗಢ ದ ಗರಾಲಿ ಗ್ರಾಮದ 35 ವರ್ಷದ ರಮೇಶ್ ಸಿಂಗ್‌ನನ್ನು ಆತನ ನಿವಾಸದಲ್ಲೇ ಬಂಧಿಸಲಾಗಿದೆ. ಉತ್ತರ ಪ್ರದೇಶದ ಭದ್ರತಾ ವಿರೋಧಿ ದಳ, ಸೇನೆ ಗುಪ್ತಚರ ಇಲಾಖೆ ಹಾಗೂ ಉತ್ತರಾಖಂಡ ಪೊಲೀಸರು ಜಂಟಿಯಾಗಿ ಬಂಧಿಸಿದ್ದಾರೆ.  ಪಾಕಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದ ಭಾರತದ ರಕ್ಷಣಾ ಅಧಿಕಾರಿಯ ನಿವಾಸದಿಂದ ಮಹತ್ವದ ಮಾಹಿತಿಯನ್ನು ಐಎಸ್ ಐ ಸಹಕಾರದಲ್ಲಿ ಕದ್ದಾಲಿಕೆ ಮಾಡುತ್ತಿದ್ದ. ಭಾರತ ರಾಯಭಾರಿ ಮನೆಯಲ್ಲಿ ಅಡುಗೆಯವನಾಗಿ ಕಾರ್ಯ ನಿರ್ವಹಿಸುತ್ತಿದ್ದ. ರಮೇಶ್ ಸಿಂಗ್ ನ ಸಹೋದರ ಭಾರತೀಯ ಸೇನೆಯ ಅಧಿಕಾರಿಯ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಪಿತ್ತೋರ್‌ಗಢ ಕೋರ್ಟ್‌ಗೆ ರಮೇಶ್‌ ಸಿಂಗ್‌ನನ್ನು ಹಾಜರುಪಡಿಸಿದ್ದು, ಲಖನೌಗೆ ಕರೆದೊಯ್ಯಲಾಗಿದೆ. ಈ ಪ್ರಕರಣದ ಬಗ್ಗೆ ಉತ್ತರಾಖಂಡ ಡಿಜಿಪಿ ಉತ್ತರ ಪ್ರದೇಶದ ಎಟಿಎಸ್‌ ಅಧಿಕಾರಿಗಳ ನೆರವು ಕೋರಿದ್ದರು ಎಂದು ಯುಪಿಯ ಎಟಿಎಸ್‌ ಐಜಿ ಆಸಿಮ್ ಅರುಣ್ ಮಾಹಿತಿ ನೀಡಿದ್ದಾರೆ. ಮಿಲಿಟರಿ ಗುಪ್ತಚರ ಇಲಾಖೆಯ ನಿರ್ದೇಶಕರ ನೆರವನ್ನೂ ಪಡೆಯಲಾಗಿದೆ.

ರೈತನಾಗಿರುವ ರಮೇಶ್‌ ಸಿಂಗ್‌ಗೆ ಸಂಬಂಧಿಕರೊಬ್ಬರು ಪಾಕಿಸ್ತಾನದಲ್ಲಿ ಅಡುಗೆ ಕೆಲಸ ಕೊಡಿಸಿದ್ದಾರೆ. ಬಳಿಕ, ಈತ 2015ರ ಮಧ್ಯಭಾಗದಿಂದ 2017 ಸೆಪ್ಟೆಂಬರ್‌ವರೆಗೆ ಭಾರತ ರಕ್ಷಣಾ ಇಲಾಖೆಯ ಅಧಿಕಾರಿಯ ನಿವಾಸದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಐಎಸ್‌ಐ ಸಂಪರ್ಕ ಸಾಧಿಸಿರುವ ಸಿಂಗ್, ಅಧಿಕಾರಿಯ ಮನೆಯಲ್ಲಿ ಪ್ರಮುಖ ದಾಖಲೆ ಸೋರಿಕೆ ಮಾಡಲು ಹಣ ಪಡೆಯುತ್ತಿದ್ದ. ಅಧಿಕಾರಿಯ ಡೈರಿ ಸೇರಿ ಹಲವು ಮಾಹಿತಿ ಐಎಸ್ ಐಗೆ ನೀಡುತ್ತಿದ್ದ ಎನ್ನಲಾಗಿದೆ. ಐಎಸ್‌ಐನಿಂದ ಆರೋಪಿ ಎಷ್ಟು ಹಣ ಪಡೆದಿದ್ದಾನೆ ಎಂದು ಇನ್ನೂ ಗೊತ್ತಾಗಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆನಂದ್ ಕುಮಾರ್ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
Tulunadu News May 19, 2025
ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
Tulunadu News May 19, 2025
Leave A Reply

  • Recent Posts

    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
  • Popular Posts

    • 1
      ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • 2
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • 3
      ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • 4
      RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • 5
      ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search