• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಪಾಕ್ ರಾಯಭಾರಿಯ ಕರೆ ಕದ್ದಾಲಿಸಿ ಐಎಸ್ಐಗೆ ಸಾಥ್ ನೀಡಿದ ಅಡುಗೆ ಸಹಾಯಕನ ಬಂಧನ

TNN Correspondent Posted On May 24, 2018
0


0
Shares
  • Share On Facebook
  • Tweet It

ಲಖನೌ: ಪಾಕಿಸ್ತಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತದ ರಾಯಭಾರಿ ನಿವಾಸದ ಕದ್ದಾಲಿಕೆ ಮಾಡಿದ ಆರೋಪಿ, ಉತ್ತರ ಖಂಡದ ಪಿತ್ತೋರ್ ಗಡ್ ಮೂಲದ ಅಡುಗೆಯವನನ್ನು ಪೊಲೀಸರು ಬಂಧಿಸಿದ್ದಾರೆ. ಐಎಸ್‌ಐಗೆ ನೆರವು ನೀಡಿರುವ ಮತ್ತು ಹಣಕ್ಕಾಗಿ ಮಹತ್ವದ ಮಾಹಿತಿಯನ್ನು ಸೋರಿಕೆ ಮಾಡಿದ್ದಾನೆ ಎಂಬ ಆರೋಪದಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಪಿತ್ತೋರ್‌ಗಢ ದ ಗರಾಲಿ ಗ್ರಾಮದ 35 ವರ್ಷದ ರಮೇಶ್ ಸಿಂಗ್‌ನನ್ನು ಆತನ ನಿವಾಸದಲ್ಲೇ ಬಂಧಿಸಲಾಗಿದೆ. ಉತ್ತರ ಪ್ರದೇಶದ ಭದ್ರತಾ ವಿರೋಧಿ ದಳ, ಸೇನೆ ಗುಪ್ತಚರ ಇಲಾಖೆ ಹಾಗೂ ಉತ್ತರಾಖಂಡ ಪೊಲೀಸರು ಜಂಟಿಯಾಗಿ ಬಂಧಿಸಿದ್ದಾರೆ.  ಪಾಕಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದ ಭಾರತದ ರಕ್ಷಣಾ ಅಧಿಕಾರಿಯ ನಿವಾಸದಿಂದ ಮಹತ್ವದ ಮಾಹಿತಿಯನ್ನು ಐಎಸ್ ಐ ಸಹಕಾರದಲ್ಲಿ ಕದ್ದಾಲಿಕೆ ಮಾಡುತ್ತಿದ್ದ. ಭಾರತ ರಾಯಭಾರಿ ಮನೆಯಲ್ಲಿ ಅಡುಗೆಯವನಾಗಿ ಕಾರ್ಯ ನಿರ್ವಹಿಸುತ್ತಿದ್ದ. ರಮೇಶ್ ಸಿಂಗ್ ನ ಸಹೋದರ ಭಾರತೀಯ ಸೇನೆಯ ಅಧಿಕಾರಿಯ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಪಿತ್ತೋರ್‌ಗಢ ಕೋರ್ಟ್‌ಗೆ ರಮೇಶ್‌ ಸಿಂಗ್‌ನನ್ನು ಹಾಜರುಪಡಿಸಿದ್ದು, ಲಖನೌಗೆ ಕರೆದೊಯ್ಯಲಾಗಿದೆ. ಈ ಪ್ರಕರಣದ ಬಗ್ಗೆ ಉತ್ತರಾಖಂಡ ಡಿಜಿಪಿ ಉತ್ತರ ಪ್ರದೇಶದ ಎಟಿಎಸ್‌ ಅಧಿಕಾರಿಗಳ ನೆರವು ಕೋರಿದ್ದರು ಎಂದು ಯುಪಿಯ ಎಟಿಎಸ್‌ ಐಜಿ ಆಸಿಮ್ ಅರುಣ್ ಮಾಹಿತಿ ನೀಡಿದ್ದಾರೆ. ಮಿಲಿಟರಿ ಗುಪ್ತಚರ ಇಲಾಖೆಯ ನಿರ್ದೇಶಕರ ನೆರವನ್ನೂ ಪಡೆಯಲಾಗಿದೆ.

ರೈತನಾಗಿರುವ ರಮೇಶ್‌ ಸಿಂಗ್‌ಗೆ ಸಂಬಂಧಿಕರೊಬ್ಬರು ಪಾಕಿಸ್ತಾನದಲ್ಲಿ ಅಡುಗೆ ಕೆಲಸ ಕೊಡಿಸಿದ್ದಾರೆ. ಬಳಿಕ, ಈತ 2015ರ ಮಧ್ಯಭಾಗದಿಂದ 2017 ಸೆಪ್ಟೆಂಬರ್‌ವರೆಗೆ ಭಾರತ ರಕ್ಷಣಾ ಇಲಾಖೆಯ ಅಧಿಕಾರಿಯ ನಿವಾಸದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಐಎಸ್‌ಐ ಸಂಪರ್ಕ ಸಾಧಿಸಿರುವ ಸಿಂಗ್, ಅಧಿಕಾರಿಯ ಮನೆಯಲ್ಲಿ ಪ್ರಮುಖ ದಾಖಲೆ ಸೋರಿಕೆ ಮಾಡಲು ಹಣ ಪಡೆಯುತ್ತಿದ್ದ. ಅಧಿಕಾರಿಯ ಡೈರಿ ಸೇರಿ ಹಲವು ಮಾಹಿತಿ ಐಎಸ್ ಐಗೆ ನೀಡುತ್ತಿದ್ದ ಎನ್ನಲಾಗಿದೆ. ಐಎಸ್‌ಐನಿಂದ ಆರೋಪಿ ಎಷ್ಟು ಹಣ ಪಡೆದಿದ್ದಾನೆ ಎಂದು ಇನ್ನೂ ಗೊತ್ತಾಗಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆನಂದ್ ಕುಮಾರ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search