• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಪಾಕ್ ರಾಯಭಾರಿಯ ಕರೆ ಕದ್ದಾಲಿಸಿ ಐಎಸ್ಐಗೆ ಸಾಥ್ ನೀಡಿದ ಅಡುಗೆ ಸಹಾಯಕನ ಬಂಧನ

TNN Correspondent Posted On May 24, 2018
0


0
Shares
  • Share On Facebook
  • Tweet It

ಲಖನೌ: ಪಾಕಿಸ್ತಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತದ ರಾಯಭಾರಿ ನಿವಾಸದ ಕದ್ದಾಲಿಕೆ ಮಾಡಿದ ಆರೋಪಿ, ಉತ್ತರ ಖಂಡದ ಪಿತ್ತೋರ್ ಗಡ್ ಮೂಲದ ಅಡುಗೆಯವನನ್ನು ಪೊಲೀಸರು ಬಂಧಿಸಿದ್ದಾರೆ. ಐಎಸ್‌ಐಗೆ ನೆರವು ನೀಡಿರುವ ಮತ್ತು ಹಣಕ್ಕಾಗಿ ಮಹತ್ವದ ಮಾಹಿತಿಯನ್ನು ಸೋರಿಕೆ ಮಾಡಿದ್ದಾನೆ ಎಂಬ ಆರೋಪದಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಪಿತ್ತೋರ್‌ಗಢ ದ ಗರಾಲಿ ಗ್ರಾಮದ 35 ವರ್ಷದ ರಮೇಶ್ ಸಿಂಗ್‌ನನ್ನು ಆತನ ನಿವಾಸದಲ್ಲೇ ಬಂಧಿಸಲಾಗಿದೆ. ಉತ್ತರ ಪ್ರದೇಶದ ಭದ್ರತಾ ವಿರೋಧಿ ದಳ, ಸೇನೆ ಗುಪ್ತಚರ ಇಲಾಖೆ ಹಾಗೂ ಉತ್ತರಾಖಂಡ ಪೊಲೀಸರು ಜಂಟಿಯಾಗಿ ಬಂಧಿಸಿದ್ದಾರೆ.  ಪಾಕಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದ ಭಾರತದ ರಕ್ಷಣಾ ಅಧಿಕಾರಿಯ ನಿವಾಸದಿಂದ ಮಹತ್ವದ ಮಾಹಿತಿಯನ್ನು ಐಎಸ್ ಐ ಸಹಕಾರದಲ್ಲಿ ಕದ್ದಾಲಿಕೆ ಮಾಡುತ್ತಿದ್ದ. ಭಾರತ ರಾಯಭಾರಿ ಮನೆಯಲ್ಲಿ ಅಡುಗೆಯವನಾಗಿ ಕಾರ್ಯ ನಿರ್ವಹಿಸುತ್ತಿದ್ದ. ರಮೇಶ್ ಸಿಂಗ್ ನ ಸಹೋದರ ಭಾರತೀಯ ಸೇನೆಯ ಅಧಿಕಾರಿಯ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಪಿತ್ತೋರ್‌ಗಢ ಕೋರ್ಟ್‌ಗೆ ರಮೇಶ್‌ ಸಿಂಗ್‌ನನ್ನು ಹಾಜರುಪಡಿಸಿದ್ದು, ಲಖನೌಗೆ ಕರೆದೊಯ್ಯಲಾಗಿದೆ. ಈ ಪ್ರಕರಣದ ಬಗ್ಗೆ ಉತ್ತರಾಖಂಡ ಡಿಜಿಪಿ ಉತ್ತರ ಪ್ರದೇಶದ ಎಟಿಎಸ್‌ ಅಧಿಕಾರಿಗಳ ನೆರವು ಕೋರಿದ್ದರು ಎಂದು ಯುಪಿಯ ಎಟಿಎಸ್‌ ಐಜಿ ಆಸಿಮ್ ಅರುಣ್ ಮಾಹಿತಿ ನೀಡಿದ್ದಾರೆ. ಮಿಲಿಟರಿ ಗುಪ್ತಚರ ಇಲಾಖೆಯ ನಿರ್ದೇಶಕರ ನೆರವನ್ನೂ ಪಡೆಯಲಾಗಿದೆ.

ರೈತನಾಗಿರುವ ರಮೇಶ್‌ ಸಿಂಗ್‌ಗೆ ಸಂಬಂಧಿಕರೊಬ್ಬರು ಪಾಕಿಸ್ತಾನದಲ್ಲಿ ಅಡುಗೆ ಕೆಲಸ ಕೊಡಿಸಿದ್ದಾರೆ. ಬಳಿಕ, ಈತ 2015ರ ಮಧ್ಯಭಾಗದಿಂದ 2017 ಸೆಪ್ಟೆಂಬರ್‌ವರೆಗೆ ಭಾರತ ರಕ್ಷಣಾ ಇಲಾಖೆಯ ಅಧಿಕಾರಿಯ ನಿವಾಸದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಐಎಸ್‌ಐ ಸಂಪರ್ಕ ಸಾಧಿಸಿರುವ ಸಿಂಗ್, ಅಧಿಕಾರಿಯ ಮನೆಯಲ್ಲಿ ಪ್ರಮುಖ ದಾಖಲೆ ಸೋರಿಕೆ ಮಾಡಲು ಹಣ ಪಡೆಯುತ್ತಿದ್ದ. ಅಧಿಕಾರಿಯ ಡೈರಿ ಸೇರಿ ಹಲವು ಮಾಹಿತಿ ಐಎಸ್ ಐಗೆ ನೀಡುತ್ತಿದ್ದ ಎನ್ನಲಾಗಿದೆ. ಐಎಸ್‌ಐನಿಂದ ಆರೋಪಿ ಎಷ್ಟು ಹಣ ಪಡೆದಿದ್ದಾನೆ ಎಂದು ಇನ್ನೂ ಗೊತ್ತಾಗಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆನಂದ್ ಕುಮಾರ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search