• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2014ರಲ್ಲಿ ಅಬ್ ಕೀ ಬಾರ್  ಸರ್ಕಾರ್, 2019ರ ಲೋಕಸಭೆ ಚುನಾವಣೆಯಲ್ಲಿ ಯಾವ ಸ್ಲೋಗನ್ ಗೊತ್ತಾ?

TNN Correspondent Posted On May 25, 2018
0


0
Shares
  • Share On Facebook
  • Tweet It

ಅದು 2014. ಇಡೀ ದೇಶ ಒಬ್ಬ ದಕ್ಷ, ಜನಪರ, ಭಾರತದ ಘನತೆಯನ್ನು ಎತ್ತಿ ಹಿಡಿಯುವ, ಭ್ರಷ್ಟಾಚಾರದಿಂದ ಮುಕ್ತವಾಗಿರುವ ನಾಯಕರೊಬ್ಬರನ್ನು ಬಯಸಿದ ವರ್ಷ. ಜನ ಚಳವಳಿ ರೂಪದಲ್ಲಿ ಬಂದು ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ ಕಾರಣ ಒಬ್ಬ ಚಹ ಮಾರುವವರೂ ಪ್ರಧಾನಿಯಾದರು. ಚುನಾವಣೆಗೂ ಮೊದಲು ಬಿಜೆಪಿ ಅಬ್ ಕೀ ಬಾರ್ ಬಿಜೆಪಿ ಸರ್ಕಾರ್ ಎಂಬ ಘೋಷಣೆ ಹೊರಡಿಸಿತ್ತು. ಅದು ಸಹ ತುಂಬ ಜನಪ್ರಿಯವಾಯಿತು.

ಈಗ ಮೋದಿಯವರು ಪ್ರಧಾನಿಯಾಗಿ ನಾಲ್ಕು ವರ್ಷವಾಗಿದೆ. ದೇಶದ ಜಿಡಿಪಿ ಏರಿಕೆಯಾಗುತ್ತಿದೆ. ನೋಟು ನಿಷೇಧದ ಮೂಲಕ ಕಪ್ಪು ಹಣ ತಹಬಂದಿಗೆ ತರಲಾಗಿದೆ. ಸರಕು ಮತ್ತು ಸೇವಾ ತೆರಿಗೆ ಮೂಲಕ ದೇಶದ ತೆರಿಗೆ ವ್ಯವಸ್ಥೆ ಸುಧಾರಣೆಯಾಗಿದೆ. ಭಾರತದ ಘನತೆ ವಿಶ್ವಮಟ್ಟದಲ್ಲಿ ಬಾನೆತ್ತರಕ್ಕೆ ಹಾರಿದೆ. ಪಾಕಿಸ್ತಾನ, ಚೀನಾ ಬಾಲ ಮುದುರಿಕೊಂಡು ಕೂತಿವೆ. ಭ್ರಷ್ಟಾಚಾರ ಕಾಣೆಯಾಗಿದೆ.

ಹೀಗೆ ನರೇಂದ್ರ ಮೋದಿ ಅವರು ಕಳೆದ ನಾಲ್ಕು ವರ್ಷದಲ್ಲಿ ದೇಶದಲ್ಲಿ ಮಾಡಿದ ಹಲವು ಸುಧಾರಣೆಗಳಿಂದ 2019ರ ಚುನಾವಣೆಯಲ್ಲೂ ಮೋದಿ ಅವರನ್ನೇ ಗೆಲ್ಲಿಸಬೇಕು ಎಂಬ ಮನೋಭಾವ ದೇಶದ ಜನರಲ್ಲಿ ಮೂಡಿದೆ. ದೇಶದ 22 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದ್ದು, ಮುಂದಿನ ಐದು ವರ್ಷಗಳ ಕಾಲ ಕೇಂದ್ರದಲ್ಲಿ ನರೇಂದ್ರ ಮೋದಿಯವರೇ ಪ್ರಧಾನಿಯಾಗಿರಲಿ ಎಂಬ ಆಶಯವಾಗುತ್ತಿದೆ. ಸಮೀಕ್ಷೆಗಳು ಸಹ ಇದನ್ನೇ ತಿಳಿಸಿವೆ.

ಈಗ ಬಿಜೆಪಿ ಸಹ 2019ರ ಲೋಕಸಭೆ ಚುನಾವಣೆಗೆ ಸಜ್ಜಾಗಿದೆ. 2014ರಲ್ಲಿ ಹೊರಡಿಸಿದ ಜನಪ್ರಿಯ ಸ್ಲೋಗನ್ ಹಾಗೆ, 2019ರ ಚುನಾವಣೆಗೂ ಒಂದು ಸ್ಲೋಗನ್ ಹೊರಡಿಸಿದೆ. ‘2019 ಮೇ ಫಿರ್ ಮೋದಿ ಸರ್ಕಾರ್’ (2019ರಲ್ಲೂ ಮತ್ತೆ ಮೋದಿ ಸರ್ಕಾರ್) ಎಂಬ ಘೋಷಣೆ ಹೊರಡಿಸಿದೆ.

ಒಟ್ಟಿನಲ್ಲಿ 2019ರ ಲೋಕಸಭೆ ಚುನಾವಣೆಗೆ ಈಗಾಗಲೇ ಎಲ್ಲ ಪಕ್ಷಗಳು ಸಜ್ಜಾಗಿವೆ. ಆದರೆ ನಾವು ಮತಗಟ್ಟೆಯ ಸಾಲಿನಲ್ಲಿ ನಿಂತಾಗ ಯಾರು ಅಭಿವೃದ್ಧಿ ಮಾಡಿದ್ದಾರೆ? ಯಾರು ದೇಶಕ್ಕಾಗಿ ದುಡಿದಿದ್ದಾರೆ? ಯಾರು ದೇಶದ ಘನತೆ ಹೆಚ್ಚಿಸಿದ್ದಾರೆ ಎಂಬುದನ್ನು ಅರಿತು ಮತ ಹಾಕೋಣ. ಅಷ್ಟಕ್ಕೂ ಪ್ರಜಾಪ್ರಭುತ್ವದ ನಿಜವಾದ ಪ್ರಭುಗಳು ನಾವೇ. ಮರೆಯದಿರಿ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search