• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2014ರಲ್ಲಿ ಅಬ್ ಕೀ ಬಾರ್  ಸರ್ಕಾರ್, 2019ರ ಲೋಕಸಭೆ ಚುನಾವಣೆಯಲ್ಲಿ ಯಾವ ಸ್ಲೋಗನ್ ಗೊತ್ತಾ?

TNN Correspondent Posted On May 25, 2018
0


0
Shares
  • Share On Facebook
  • Tweet It

ಅದು 2014. ಇಡೀ ದೇಶ ಒಬ್ಬ ದಕ್ಷ, ಜನಪರ, ಭಾರತದ ಘನತೆಯನ್ನು ಎತ್ತಿ ಹಿಡಿಯುವ, ಭ್ರಷ್ಟಾಚಾರದಿಂದ ಮುಕ್ತವಾಗಿರುವ ನಾಯಕರೊಬ್ಬರನ್ನು ಬಯಸಿದ ವರ್ಷ. ಜನ ಚಳವಳಿ ರೂಪದಲ್ಲಿ ಬಂದು ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ ಕಾರಣ ಒಬ್ಬ ಚಹ ಮಾರುವವರೂ ಪ್ರಧಾನಿಯಾದರು. ಚುನಾವಣೆಗೂ ಮೊದಲು ಬಿಜೆಪಿ ಅಬ್ ಕೀ ಬಾರ್ ಬಿಜೆಪಿ ಸರ್ಕಾರ್ ಎಂಬ ಘೋಷಣೆ ಹೊರಡಿಸಿತ್ತು. ಅದು ಸಹ ತುಂಬ ಜನಪ್ರಿಯವಾಯಿತು.

ಈಗ ಮೋದಿಯವರು ಪ್ರಧಾನಿಯಾಗಿ ನಾಲ್ಕು ವರ್ಷವಾಗಿದೆ. ದೇಶದ ಜಿಡಿಪಿ ಏರಿಕೆಯಾಗುತ್ತಿದೆ. ನೋಟು ನಿಷೇಧದ ಮೂಲಕ ಕಪ್ಪು ಹಣ ತಹಬಂದಿಗೆ ತರಲಾಗಿದೆ. ಸರಕು ಮತ್ತು ಸೇವಾ ತೆರಿಗೆ ಮೂಲಕ ದೇಶದ ತೆರಿಗೆ ವ್ಯವಸ್ಥೆ ಸುಧಾರಣೆಯಾಗಿದೆ. ಭಾರತದ ಘನತೆ ವಿಶ್ವಮಟ್ಟದಲ್ಲಿ ಬಾನೆತ್ತರಕ್ಕೆ ಹಾರಿದೆ. ಪಾಕಿಸ್ತಾನ, ಚೀನಾ ಬಾಲ ಮುದುರಿಕೊಂಡು ಕೂತಿವೆ. ಭ್ರಷ್ಟಾಚಾರ ಕಾಣೆಯಾಗಿದೆ.

ಹೀಗೆ ನರೇಂದ್ರ ಮೋದಿ ಅವರು ಕಳೆದ ನಾಲ್ಕು ವರ್ಷದಲ್ಲಿ ದೇಶದಲ್ಲಿ ಮಾಡಿದ ಹಲವು ಸುಧಾರಣೆಗಳಿಂದ 2019ರ ಚುನಾವಣೆಯಲ್ಲೂ ಮೋದಿ ಅವರನ್ನೇ ಗೆಲ್ಲಿಸಬೇಕು ಎಂಬ ಮನೋಭಾವ ದೇಶದ ಜನರಲ್ಲಿ ಮೂಡಿದೆ. ದೇಶದ 22 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದ್ದು, ಮುಂದಿನ ಐದು ವರ್ಷಗಳ ಕಾಲ ಕೇಂದ್ರದಲ್ಲಿ ನರೇಂದ್ರ ಮೋದಿಯವರೇ ಪ್ರಧಾನಿಯಾಗಿರಲಿ ಎಂಬ ಆಶಯವಾಗುತ್ತಿದೆ. ಸಮೀಕ್ಷೆಗಳು ಸಹ ಇದನ್ನೇ ತಿಳಿಸಿವೆ.

ಈಗ ಬಿಜೆಪಿ ಸಹ 2019ರ ಲೋಕಸಭೆ ಚುನಾವಣೆಗೆ ಸಜ್ಜಾಗಿದೆ. 2014ರಲ್ಲಿ ಹೊರಡಿಸಿದ ಜನಪ್ರಿಯ ಸ್ಲೋಗನ್ ಹಾಗೆ, 2019ರ ಚುನಾವಣೆಗೂ ಒಂದು ಸ್ಲೋಗನ್ ಹೊರಡಿಸಿದೆ. ‘2019 ಮೇ ಫಿರ್ ಮೋದಿ ಸರ್ಕಾರ್’ (2019ರಲ್ಲೂ ಮತ್ತೆ ಮೋದಿ ಸರ್ಕಾರ್) ಎಂಬ ಘೋಷಣೆ ಹೊರಡಿಸಿದೆ.

ಒಟ್ಟಿನಲ್ಲಿ 2019ರ ಲೋಕಸಭೆ ಚುನಾವಣೆಗೆ ಈಗಾಗಲೇ ಎಲ್ಲ ಪಕ್ಷಗಳು ಸಜ್ಜಾಗಿವೆ. ಆದರೆ ನಾವು ಮತಗಟ್ಟೆಯ ಸಾಲಿನಲ್ಲಿ ನಿಂತಾಗ ಯಾರು ಅಭಿವೃದ್ಧಿ ಮಾಡಿದ್ದಾರೆ? ಯಾರು ದೇಶಕ್ಕಾಗಿ ದುಡಿದಿದ್ದಾರೆ? ಯಾರು ದೇಶದ ಘನತೆ ಹೆಚ್ಚಿಸಿದ್ದಾರೆ ಎಂಬುದನ್ನು ಅರಿತು ಮತ ಹಾಕೋಣ. ಅಷ್ಟಕ್ಕೂ ಪ್ರಜಾಪ್ರಭುತ್ವದ ನಿಜವಾದ ಪ್ರಭುಗಳು ನಾವೇ. ಮರೆಯದಿರಿ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search