• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳನ್ನು ಎನ್ ಕೌಂಟರ್ ಮಾಡಿದ್ದಕ್ಕೆ ಹೆದರಿ ಮಹಿಳೆ ಶರಣಾಗಿದ್ದಾರೆ ನೋಡಿ

TNN Correspondent Posted On May 25, 2018
0


0
Shares
  • Share On Facebook
  • Tweet It

ಕೇಂದ್ರ ಸರ್ಕಾರ ಮಾವೋವಾದಿಗಳ ನಿಗ್ರಹಕ್ಕೆ ಹಲವು ಯೋಜನೆ ರೂಪಿಸಿದೆ. ಒಡಿಶಾ ಸೇರಿ ಹಲವು ರಾಜ್ಯಗಳು ಸಹ ಇದಕ್ಕೆ ಸಹಕಾರ ನೀಡುತ್ತಿವೆ. ಇದೇ ಕಾರಣಕ್ಕೆ ಒಡಿಶಾದಲ್ಲಿ ಇತ್ತೀಚೆಗೆ ಪೊಲೀಸರು ಎರಡು ಎನ್ ಕೌಂಟರ್ ನಡೆಸಿ ಏಳು ಮಾವೋವಾದಿಗಳನ್ನು ಹತ್ಯೆ ಮಾಡಿದ್ದು ಉತ್ತಮ ನಿದರ್ಶನ.

ಇದರಿಂದ ನಕ್ಸಲರ ಎದೆಯಲ್ಲಿ ನಡುಕ ಹುಟ್ಟಿದ್ದು, ಒಡಿಶಾದಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಮಾವೋವಾದಿಗಳ ಗುಂಪು ಸೇರಿದ್ದ ಮಹಿಳಾ ಮಾವೋದಿಯೊಬ್ಬರು ಪೊಲೀಸರಿಗೆ ಬಂದು ಶರಣಾಗಿದ್ದಾರೆ.

ಹೌದು, ಕೆ.ಲಕ್ಷ್ಮೀ ಅಲಿಯಾಸ್ ಶ್ವೇತಾ ಅಲಿಯಾಸ್ ಕುಮಾರಿ ಎಂಬ ಮಹಿಳೆ ಒಡಿಶಾದ ಮಲ್ಕಂಗಿರಿ ಪೊಲೀಸರಿಗೆ ಬಂದು ಶರಣಾಗಿದ್ದಾರೆ. 2008ರಲ್ಲಿ ಆಂಧ್ರಪ್ರದೇಶ-ಒಡಿಶಾ ಗಡಿಯ ಗುಮ್ಮಾ ಏರಿಯಾ ಸಮಿತಿ ಸದಸ್ಯೆಯಾಗಿ ಕೆಲಸ ಮಾಡುತ್ತಿದ್ದರು, ಇತ್ತೀಚೆಗೆ ಈ ಮಹಿಳೆ ಉಪಟಳ ಜಾಸ್ತಿಯಾಗಿದ್ದ ಕಾರಣ, ಮಹಿಳೆ ಕುರಿತು ಮಾಹಿತಿ ನೀಡಿದವರಿಗೆ 4 ಲಕ್ಷ ರೂ, ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿತ್ತು.

ಈಕೆಯ ಗಂಡ ಧನಂಜಯ ಗೊಪೆ ಅಲಿಯಾಸ್ ಸುಧೀರ್ ಎಂಬುವವನು ಸಹ ಗುಮ್ಮಾ ಏರಿಯಾ ಸಮಿತಿಯ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಆತ ಕೂಡ ಶರಣಾಗುವ ಕುರಿತು ಚಿಂತನೆ ನಡೆಸಿದ್ದಾನೆ. ಮಹಿಳೆ ತನ್ನ ತಪ್ಪು ತಿದ್ದಿಕೊಂಡು ಜೀವನ ನಡೆಸುವುದಾಗಿ ತಿಳಿಸಿದರೆ ಅವಕಾಶ ನೀಡಲಾಗುವುದು ಎಂದು ಎಸ್.ಪಿ. ಜಗಮೋಹನ್ ಮೀನಾ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ರೌಡಿಗಳ ವಿರುದ್ಧ ಕಠಿಣ ಕ್ರಮ, ಎನ್ ಕೌಂಟರ್ ಮಾಡಲು ಅವಕಾಶ ನೀಡಿದ ಕಾರಣ ರೌಡಿಗಳೇ ಪೊಲೀಸ್ ಠಾಣೆಗೆ ಬಂದು ಶರಣಾಗುತ್ತಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ನಕ್ಸಲರ ವಿರುದ್ಧ ಕೈಗೊಳ್ಳುವ ಕಾರ್ಯಾಚರಣೆ, ಎನ್ ಕೌಂಟರ್ ಗೆ ಹೆದರಿ ಮಾವೋವಾದಿಗಳು ಶರಣಾಗುತ್ತಿರುವುದು ಉತ್ತಮ ಬೆಳವಣಿಗೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search