• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳನ್ನು ಎನ್ ಕೌಂಟರ್ ಮಾಡಿದ್ದಕ್ಕೆ ಹೆದರಿ ಮಹಿಳೆ ಶರಣಾಗಿದ್ದಾರೆ ನೋಡಿ

TNN Correspondent Posted On May 25, 2018
0


0
Shares
  • Share On Facebook
  • Tweet It

ಕೇಂದ್ರ ಸರ್ಕಾರ ಮಾವೋವಾದಿಗಳ ನಿಗ್ರಹಕ್ಕೆ ಹಲವು ಯೋಜನೆ ರೂಪಿಸಿದೆ. ಒಡಿಶಾ ಸೇರಿ ಹಲವು ರಾಜ್ಯಗಳು ಸಹ ಇದಕ್ಕೆ ಸಹಕಾರ ನೀಡುತ್ತಿವೆ. ಇದೇ ಕಾರಣಕ್ಕೆ ಒಡಿಶಾದಲ್ಲಿ ಇತ್ತೀಚೆಗೆ ಪೊಲೀಸರು ಎರಡು ಎನ್ ಕೌಂಟರ್ ನಡೆಸಿ ಏಳು ಮಾವೋವಾದಿಗಳನ್ನು ಹತ್ಯೆ ಮಾಡಿದ್ದು ಉತ್ತಮ ನಿದರ್ಶನ.

ಇದರಿಂದ ನಕ್ಸಲರ ಎದೆಯಲ್ಲಿ ನಡುಕ ಹುಟ್ಟಿದ್ದು, ಒಡಿಶಾದಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಮಾವೋವಾದಿಗಳ ಗುಂಪು ಸೇರಿದ್ದ ಮಹಿಳಾ ಮಾವೋದಿಯೊಬ್ಬರು ಪೊಲೀಸರಿಗೆ ಬಂದು ಶರಣಾಗಿದ್ದಾರೆ.

ಹೌದು, ಕೆ.ಲಕ್ಷ್ಮೀ ಅಲಿಯಾಸ್ ಶ್ವೇತಾ ಅಲಿಯಾಸ್ ಕುಮಾರಿ ಎಂಬ ಮಹಿಳೆ ಒಡಿಶಾದ ಮಲ್ಕಂಗಿರಿ ಪೊಲೀಸರಿಗೆ ಬಂದು ಶರಣಾಗಿದ್ದಾರೆ. 2008ರಲ್ಲಿ ಆಂಧ್ರಪ್ರದೇಶ-ಒಡಿಶಾ ಗಡಿಯ ಗುಮ್ಮಾ ಏರಿಯಾ ಸಮಿತಿ ಸದಸ್ಯೆಯಾಗಿ ಕೆಲಸ ಮಾಡುತ್ತಿದ್ದರು, ಇತ್ತೀಚೆಗೆ ಈ ಮಹಿಳೆ ಉಪಟಳ ಜಾಸ್ತಿಯಾಗಿದ್ದ ಕಾರಣ, ಮಹಿಳೆ ಕುರಿತು ಮಾಹಿತಿ ನೀಡಿದವರಿಗೆ 4 ಲಕ್ಷ ರೂ, ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿತ್ತು.

ಈಕೆಯ ಗಂಡ ಧನಂಜಯ ಗೊಪೆ ಅಲಿಯಾಸ್ ಸುಧೀರ್ ಎಂಬುವವನು ಸಹ ಗುಮ್ಮಾ ಏರಿಯಾ ಸಮಿತಿಯ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಆತ ಕೂಡ ಶರಣಾಗುವ ಕುರಿತು ಚಿಂತನೆ ನಡೆಸಿದ್ದಾನೆ. ಮಹಿಳೆ ತನ್ನ ತಪ್ಪು ತಿದ್ದಿಕೊಂಡು ಜೀವನ ನಡೆಸುವುದಾಗಿ ತಿಳಿಸಿದರೆ ಅವಕಾಶ ನೀಡಲಾಗುವುದು ಎಂದು ಎಸ್.ಪಿ. ಜಗಮೋಹನ್ ಮೀನಾ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ರೌಡಿಗಳ ವಿರುದ್ಧ ಕಠಿಣ ಕ್ರಮ, ಎನ್ ಕೌಂಟರ್ ಮಾಡಲು ಅವಕಾಶ ನೀಡಿದ ಕಾರಣ ರೌಡಿಗಳೇ ಪೊಲೀಸ್ ಠಾಣೆಗೆ ಬಂದು ಶರಣಾಗುತ್ತಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ನಕ್ಸಲರ ವಿರುದ್ಧ ಕೈಗೊಳ್ಳುವ ಕಾರ್ಯಾಚರಣೆ, ಎನ್ ಕೌಂಟರ್ ಗೆ ಹೆದರಿ ಮಾವೋವಾದಿಗಳು ಶರಣಾಗುತ್ತಿರುವುದು ಉತ್ತಮ ಬೆಳವಣಿಗೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search