• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾವೋವಾದಿಗಳನ್ನು ಎನ್ ಕೌಂಟರ್ ಮಾಡಿದ್ದಕ್ಕೆ ಹೆದರಿ ಮಹಿಳೆ ಶರಣಾಗಿದ್ದಾರೆ ನೋಡಿ

TNN Correspondent Posted On May 25, 2018
0


0
Shares
  • Share On Facebook
  • Tweet It

ಕೇಂದ್ರ ಸರ್ಕಾರ ಮಾವೋವಾದಿಗಳ ನಿಗ್ರಹಕ್ಕೆ ಹಲವು ಯೋಜನೆ ರೂಪಿಸಿದೆ. ಒಡಿಶಾ ಸೇರಿ ಹಲವು ರಾಜ್ಯಗಳು ಸಹ ಇದಕ್ಕೆ ಸಹಕಾರ ನೀಡುತ್ತಿವೆ. ಇದೇ ಕಾರಣಕ್ಕೆ ಒಡಿಶಾದಲ್ಲಿ ಇತ್ತೀಚೆಗೆ ಪೊಲೀಸರು ಎರಡು ಎನ್ ಕೌಂಟರ್ ನಡೆಸಿ ಏಳು ಮಾವೋವಾದಿಗಳನ್ನು ಹತ್ಯೆ ಮಾಡಿದ್ದು ಉತ್ತಮ ನಿದರ್ಶನ.

ಇದರಿಂದ ನಕ್ಸಲರ ಎದೆಯಲ್ಲಿ ನಡುಕ ಹುಟ್ಟಿದ್ದು, ಒಡಿಶಾದಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಮಾವೋವಾದಿಗಳ ಗುಂಪು ಸೇರಿದ್ದ ಮಹಿಳಾ ಮಾವೋದಿಯೊಬ್ಬರು ಪೊಲೀಸರಿಗೆ ಬಂದು ಶರಣಾಗಿದ್ದಾರೆ.

ಹೌದು, ಕೆ.ಲಕ್ಷ್ಮೀ ಅಲಿಯಾಸ್ ಶ್ವೇತಾ ಅಲಿಯಾಸ್ ಕುಮಾರಿ ಎಂಬ ಮಹಿಳೆ ಒಡಿಶಾದ ಮಲ್ಕಂಗಿರಿ ಪೊಲೀಸರಿಗೆ ಬಂದು ಶರಣಾಗಿದ್ದಾರೆ. 2008ರಲ್ಲಿ ಆಂಧ್ರಪ್ರದೇಶ-ಒಡಿಶಾ ಗಡಿಯ ಗುಮ್ಮಾ ಏರಿಯಾ ಸಮಿತಿ ಸದಸ್ಯೆಯಾಗಿ ಕೆಲಸ ಮಾಡುತ್ತಿದ್ದರು, ಇತ್ತೀಚೆಗೆ ಈ ಮಹಿಳೆ ಉಪಟಳ ಜಾಸ್ತಿಯಾಗಿದ್ದ ಕಾರಣ, ಮಹಿಳೆ ಕುರಿತು ಮಾಹಿತಿ ನೀಡಿದವರಿಗೆ 4 ಲಕ್ಷ ರೂ, ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿತ್ತು.

ಈಕೆಯ ಗಂಡ ಧನಂಜಯ ಗೊಪೆ ಅಲಿಯಾಸ್ ಸುಧೀರ್ ಎಂಬುವವನು ಸಹ ಗುಮ್ಮಾ ಏರಿಯಾ ಸಮಿತಿಯ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಆತ ಕೂಡ ಶರಣಾಗುವ ಕುರಿತು ಚಿಂತನೆ ನಡೆಸಿದ್ದಾನೆ. ಮಹಿಳೆ ತನ್ನ ತಪ್ಪು ತಿದ್ದಿಕೊಂಡು ಜೀವನ ನಡೆಸುವುದಾಗಿ ತಿಳಿಸಿದರೆ ಅವಕಾಶ ನೀಡಲಾಗುವುದು ಎಂದು ಎಸ್.ಪಿ. ಜಗಮೋಹನ್ ಮೀನಾ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ರೌಡಿಗಳ ವಿರುದ್ಧ ಕಠಿಣ ಕ್ರಮ, ಎನ್ ಕೌಂಟರ್ ಮಾಡಲು ಅವಕಾಶ ನೀಡಿದ ಕಾರಣ ರೌಡಿಗಳೇ ಪೊಲೀಸ್ ಠಾಣೆಗೆ ಬಂದು ಶರಣಾಗುತ್ತಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ನಕ್ಸಲರ ವಿರುದ್ಧ ಕೈಗೊಳ್ಳುವ ಕಾರ್ಯಾಚರಣೆ, ಎನ್ ಕೌಂಟರ್ ಗೆ ಹೆದರಿ ಮಾವೋವಾದಿಗಳು ಶರಣಾಗುತ್ತಿರುವುದು ಉತ್ತಮ ಬೆಳವಣಿಗೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search