• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಮಾಡಿದರು ಅಭಿವೃದ್ಧಿ ಮೋಡಿ, ಮುಂದಿನ ಅವಧಿಗೂ ಅವರೇ ಪ್ರಧಾನಿಯಾಗುತ್ತಾರಂತೆ ನೋಡಿ!

TNN Correspondent Posted On May 25, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಎಂದರೇನೆ ಹಾಗೆ. ಅವರು ಪ್ರಧಾನಿಯಾಗುವ ಮೊದಲೇ ಇಡೀ ದೇಶದ ಜನರನ್ನು ಆವರಿಸಿದ್ದರು. ವಿರೋಧಿಗಳು, ಕಡು ವಿರೋಧಿಗಳು, ಮೋದಿ ಅವರನ್ನು ಸೋಲಿಸಲೇಬೇಕು ಎಂದು ಪಣತೊಟ್ಟವರು, ರಾಜಕೀಯದಿಂದಲೇ ಮನೆಗೆ ಕಳುಹಿಸಬೇಕು ಎಂದು ಶಪಥ ಮಾಡಿದವರು… ಹೂಂ, ಹೂಂ, ಯಾರೆಂದರೆ ಯಾರಿಗೂ ಮೋದಿ ಜಗ್ಗಲಿಲ್ಲ.

ನರೇಂದ್ರ ಮೋದಿ ಅವರ ಈ ಅಲೆಯ ಪರಿಣಾಮ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 282 ಸ್ಥಾನ ಗೆದ್ದಿತು. ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂತು. ಆದರೆ ನರೇಂದ್ರ ಮೋದಿ ಅವರು ಪದವಿ ಸಿಕ್ಕ ತಕ್ಷಣ ಮೈಮರೆಯಲಿಲ್ಲ. ಬದಲಾಗಿ ಭಾರತದ ಅಭಿವೃದ್ಧಿಗಾಗಿ ಒಂದು ದಿನವೂ ಕೆಲಸ ಮಾಡದೆ ದುಡಿಯುತ್ತಿದ್ದಾರೆ. ಮೋದಿ ಆಡಳಿತದಲ್ಲಿ ಭಾರತ ಬದಲಾವಣೆ ಕಾಣುತ್ತಿದೆ.

ಇದನ್ನು ಮನಗಂಡಿರುವ ಪ್ರತಿಪಕ್ಷಗಳು ಈಗಾಗಲೇ 2019ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರನ್ನು ಹಣೆಯಲು ಒಂದಾಗಿವೆ. ತಂತ್ರ-ಪ್ರತಿತಂತ್ರಗಳನ್ನು ಹೆಣೆಯುತ್ತಿದ್ದಾರೆ.

ಆದರೆ ಮೋದಿ ಅವರ ವಿರುದ್ಧ ಇಷ್ಟೆಲ್ಲ ಶಕ್ತಿಗಳು ಒಂದಾಗಿದ್ದರೂ, ಇಂದಿಗೂ ನರೇಂದ್ರ ಮೋದಿ ಅವರ ಮೇಲೆ ಜನ ಅಪಾರ ಪ್ರೀತಿ, ಅಭಿಮಾನ, ವಿಶ್ವಾಸ ಇಟ್ಟಿದ್ದಾರೆ. ಇದಕ್ಕೆ ಸಾಕ್ಷಿಯಾಗಿ 2019ರ ಲೋಕಸಭೆ ಚುನಾವಣೆಯ ಸಮೀಕ್ಷಾ ವರದಿ ಬಹಿರಂಗವಾಗಿದ್ದು, ನರೇಂದ್ರ ಮೋದಿ ಅವರು ಮತ್ತೆ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ತಿಳಿದುಬಂದಿದೆ,

ಹೌದು, 2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಟೈಮ್ಸ್ ನೌ ಸಂಸ್ಥೆ ಕ್ರೋಮ್ ಡಾಟಾ ಅನಾಲಿಟಿಕ್ಸ್ ಮೂಲಕ ಸಮೀಕ್ಷೆ ನಡೆಸಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 318 ಸಂಸತ್ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ತಿಳಿದುಬಂದಿದೆ.

ಸಮೀಕ್ಷೆಗಾಗಿ ಮೇ 9ರಿಂದ ಮೇ 22ರ ಅವಧಿಯಲ್ಲಿ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 13,575 ಜನರ ಅಭಿಪ್ರಾಯ ಸಂಗ್ರಹಿಸಿದ್ದು, ಶೇ.51ರಷ್ಟು ಜನ ನರೇಂದ್ರ ಮೋದಿಯವರೇ ಮುಂದಿನ ಅವಧಿಗೂ ಪ್ರಧಾನಿಯಾಗಿ ಮುಂದುವರಿಯಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೇವಲ ಶೇ.23ರಷ್ಟು ಜನ ಮಾತ್ರ ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದಿದ್ದಾರೆ. ಒಟ್ಟಿನಲ್ಲಿ ಮೋದಿ ಅವರು ಕೈಗೊಂಡ ಅಭಿವೃದ್ಧಿಗೆ ದೇಶದ ಜನ ಮನಸೋತಿದ್ದು, ಅವರೇ ಮುಂದಿನ ಪ್ರಧಾನಿಯಾಗುತ್ತಾರೆ ಎನ್ನಲಾಗುತ್ತಿದೆ. ಅದಕ್ಕೆ ಸಮೀಕ್ಷಾ ವರದಿಗಳೂ ಪೂರಕವಾಗಿವೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search