• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಮಾಡಿದರು ಅಭಿವೃದ್ಧಿ ಮೋಡಿ, ಮುಂದಿನ ಅವಧಿಗೂ ಅವರೇ ಪ್ರಧಾನಿಯಾಗುತ್ತಾರಂತೆ ನೋಡಿ!

TNN Correspondent Posted On May 25, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಎಂದರೇನೆ ಹಾಗೆ. ಅವರು ಪ್ರಧಾನಿಯಾಗುವ ಮೊದಲೇ ಇಡೀ ದೇಶದ ಜನರನ್ನು ಆವರಿಸಿದ್ದರು. ವಿರೋಧಿಗಳು, ಕಡು ವಿರೋಧಿಗಳು, ಮೋದಿ ಅವರನ್ನು ಸೋಲಿಸಲೇಬೇಕು ಎಂದು ಪಣತೊಟ್ಟವರು, ರಾಜಕೀಯದಿಂದಲೇ ಮನೆಗೆ ಕಳುಹಿಸಬೇಕು ಎಂದು ಶಪಥ ಮಾಡಿದವರು… ಹೂಂ, ಹೂಂ, ಯಾರೆಂದರೆ ಯಾರಿಗೂ ಮೋದಿ ಜಗ್ಗಲಿಲ್ಲ.

ನರೇಂದ್ರ ಮೋದಿ ಅವರ ಈ ಅಲೆಯ ಪರಿಣಾಮ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 282 ಸ್ಥಾನ ಗೆದ್ದಿತು. ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂತು. ಆದರೆ ನರೇಂದ್ರ ಮೋದಿ ಅವರು ಪದವಿ ಸಿಕ್ಕ ತಕ್ಷಣ ಮೈಮರೆಯಲಿಲ್ಲ. ಬದಲಾಗಿ ಭಾರತದ ಅಭಿವೃದ್ಧಿಗಾಗಿ ಒಂದು ದಿನವೂ ಕೆಲಸ ಮಾಡದೆ ದುಡಿಯುತ್ತಿದ್ದಾರೆ. ಮೋದಿ ಆಡಳಿತದಲ್ಲಿ ಭಾರತ ಬದಲಾವಣೆ ಕಾಣುತ್ತಿದೆ.

ಇದನ್ನು ಮನಗಂಡಿರುವ ಪ್ರತಿಪಕ್ಷಗಳು ಈಗಾಗಲೇ 2019ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರನ್ನು ಹಣೆಯಲು ಒಂದಾಗಿವೆ. ತಂತ್ರ-ಪ್ರತಿತಂತ್ರಗಳನ್ನು ಹೆಣೆಯುತ್ತಿದ್ದಾರೆ.

ಆದರೆ ಮೋದಿ ಅವರ ವಿರುದ್ಧ ಇಷ್ಟೆಲ್ಲ ಶಕ್ತಿಗಳು ಒಂದಾಗಿದ್ದರೂ, ಇಂದಿಗೂ ನರೇಂದ್ರ ಮೋದಿ ಅವರ ಮೇಲೆ ಜನ ಅಪಾರ ಪ್ರೀತಿ, ಅಭಿಮಾನ, ವಿಶ್ವಾಸ ಇಟ್ಟಿದ್ದಾರೆ. ಇದಕ್ಕೆ ಸಾಕ್ಷಿಯಾಗಿ 2019ರ ಲೋಕಸಭೆ ಚುನಾವಣೆಯ ಸಮೀಕ್ಷಾ ವರದಿ ಬಹಿರಂಗವಾಗಿದ್ದು, ನರೇಂದ್ರ ಮೋದಿ ಅವರು ಮತ್ತೆ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ತಿಳಿದುಬಂದಿದೆ,

ಹೌದು, 2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಟೈಮ್ಸ್ ನೌ ಸಂಸ್ಥೆ ಕ್ರೋಮ್ ಡಾಟಾ ಅನಾಲಿಟಿಕ್ಸ್ ಮೂಲಕ ಸಮೀಕ್ಷೆ ನಡೆಸಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 318 ಸಂಸತ್ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ತಿಳಿದುಬಂದಿದೆ.

ಸಮೀಕ್ಷೆಗಾಗಿ ಮೇ 9ರಿಂದ ಮೇ 22ರ ಅವಧಿಯಲ್ಲಿ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 13,575 ಜನರ ಅಭಿಪ್ರಾಯ ಸಂಗ್ರಹಿಸಿದ್ದು, ಶೇ.51ರಷ್ಟು ಜನ ನರೇಂದ್ರ ಮೋದಿಯವರೇ ಮುಂದಿನ ಅವಧಿಗೂ ಪ್ರಧಾನಿಯಾಗಿ ಮುಂದುವರಿಯಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೇವಲ ಶೇ.23ರಷ್ಟು ಜನ ಮಾತ್ರ ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದಿದ್ದಾರೆ. ಒಟ್ಟಿನಲ್ಲಿ ಮೋದಿ ಅವರು ಕೈಗೊಂಡ ಅಭಿವೃದ್ಧಿಗೆ ದೇಶದ ಜನ ಮನಸೋತಿದ್ದು, ಅವರೇ ಮುಂದಿನ ಪ್ರಧಾನಿಯಾಗುತ್ತಾರೆ ಎನ್ನಲಾಗುತ್ತಿದೆ. ಅದಕ್ಕೆ ಸಮೀಕ್ಷಾ ವರದಿಗಳೂ ಪೂರಕವಾಗಿವೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search