• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸರ್ಕಾರದ ಸಾಧನೆ ಮನೆ ಮನೆಗೆ ತಲುಪಿಸಲು ಬಿಜೆಪಿ ಮಾಸ್ಟರ್ ಪ್ಲಾನ್

TNN Correspondent Posted On May 26, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ನಾಲ್ಕು ವರ್ಷ ಯಶಸ್ವಿಯಾಗಿ ಪೂರೈಸಿದ್ದು, ವಿಶ್ವದ ದೃಷ್ಟಿಯಲ್ಲಿ ಭಾರತದ ಚಿತ್ರಣವೇ ಬದಲಾಗುತ್ತಿದ್ದರೇ, ದೇಶ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಪ್ರಧಾನಿ ನೇತೃತ್ವದ ಸರ್ಕಾರ ಕೈಗೊಂಡ ದಿಟ್ಟ ನಿರ್ಧಾರಗಳು ದೇಶದಲ್ಲಿ ಹೊಸ ಶಕೆ ಆರಂಭಿಸಿವೆ. ಹಲವು ಜನಪರ ಯೋಜನೆಗಳು ಜನರ ಮನಸ್ಸು ಗೆದ್ದಿವೆ. ಇನ್ನು ಹಲವು ಜನರಿಗೆ ಸರ್ಕಾರದ ಯೋಜನೆಗಳ ಮನದಟ್ಟು ಮಾಡಬೇಕು, ಬಿಜೆಪಿಯ ಕಾರ್ಯಶೈಲಿಯನ್ನು ಜನರ ಮನೆ ಮನಗಳಿಗೆ ತಲುಪಿಸಬೇಕು ಎಂಬ ದೂರದೃಷ್ಟಿಯ ಯೋಜನೆಯೊಂದನ್ನು ಬಿಜೆಪಿ ಕೈಗೊಂಡಿದೆ.

ಕೇಂದ್ರ ಸರ್ಕಾರದ ನಾಲ್ಕು ವರ್ಷದ ಯಶಸ್ವಿ ಯೋಜನೆಗಳನ್ನು ಜನರ ಮನ ಮನೆಗಳಿಗೆ ತಲುಪಲಿಸಲು ಕೇಂದ್ರ ಸಚಿವರು, ರಾಜ್ಯ ಸಚಿವರು, ಸಂಸದರು, ಶಾಸಕರು, ಬಿಜೆಪಿ ಮೇಯರ್ ಗಳು ಸೇರಿ ಎಲ್ಲ ಹಂತದ ಮುಖಂಡರು. ದೇಶಾದ್ಯಂತ ಸುಮಾರು ಒಂದು ಲಕ್ಷ ಪ್ರಮುಖ ಸಾಧಕರನ್ನು, ಗಣ್ಯರನ್ನು ಭೇಟಿ ಮಾಡಲಿದ್ದಾರೆ. ಈ ಕಾರ್ಯಕ್ರಮ ಮೇ 27ರಿಂದಲೇ ಆರಂಭವಾಗಲಿದ್ದು, ಎಲ್ಲ ಹಂತದ ಮುಖಂಡರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.

ಅಭಿಯಾನದಲ್ಲಿ ವಿಶೇಷವಾಗಿ ಎಸ್ಸಿ ಎಸ್ಟಿ ವರ್ಗದವರ ಬಗ್ಗೆ ವಿಶೇಷ ಕಾಳಜಿ ತೋರಲಿದ್ದು, ಬಿಜೆಪಿ ಮುಖಂಡರು ಬೇರೆ ಬೇರೆ ವರ್ಗದ ಸುಮಾರು 25 ಜನರನ್ನು ಭೇಟಿ ಮಾಡಿ, ಸಂವಾದ ನಡೆಸಲಿದ್ದಾರೆ. , ನಿವೃತ್ತ ನ್ಯಾಯಾಧೀಶರು, ನಿವೃತ್ತ ಸೈನ್ಯಾಧಿಕಾರಿಗಳು, ಸೈನಿಕರು, ಖ್ಯಾತ ಕ್ರೀಡಾಪಟುಗಳು, ಸಾಹಿತಿಗಳು ಸೇರಿ ಪ್ರಮುಖರನ್ನು ಭೇಟಿ ಮಾಡಿ, ಚರ್ಚೆ ಸಂವಾದ ನಡೆಸಲಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಅಲ್ಲದೇ ಕೇಂದ್ರ ಸರ್ಕಾರದ ಯೋಜನೆಗಳಿಂದ ಲಾಭ ಪಡೆದ ಫಲಾನುಭವಿಗಳ ಕಾರ್ಯಕ್ರಮ ಏರ್ಪಡಿಸಿ, ಸಂವಾದ ಏರ್ಪಡಿಸುವುದು, ಚರ್ಚೆ ನಡೆಸುವುದು, ಗ್ರಾಮ ಸಭೆ, ಸುದ್ದಿಗೋಷ್ಠಿಗಳನ್ನು ನಡೆಸುವುದು ಸೇರಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕನಿಷ್ಠ ಒಬ್ಬ ಮುಖಂಡ 50 ಪೊಲೀಂಗ್ ಬೂತ್ ಗಳ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಸಾಧನೆಗಳ ಕುರಿತು ಮನದಟ್ಟು ಮಾಡಿಸಬೇಕು ಎಂದು ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search