• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರ ಸರ್ಕಾರದ ಸಾಧನೆ ಮನೆ ಮನೆಗೆ ತಲುಪಿಸಲು ಬಿಜೆಪಿ ಮಾಸ್ಟರ್ ಪ್ಲಾನ್

TNN Correspondent Posted On May 26, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ನಾಲ್ಕು ವರ್ಷ ಯಶಸ್ವಿಯಾಗಿ ಪೂರೈಸಿದ್ದು, ವಿಶ್ವದ ದೃಷ್ಟಿಯಲ್ಲಿ ಭಾರತದ ಚಿತ್ರಣವೇ ಬದಲಾಗುತ್ತಿದ್ದರೇ, ದೇಶ ಅಭಿವೃದ್ಧಿಯ ಪಥದತ್ತ ಸಾಗುತ್ತಿದೆ. ಪ್ರಧಾನಿ ನೇತೃತ್ವದ ಸರ್ಕಾರ ಕೈಗೊಂಡ ದಿಟ್ಟ ನಿರ್ಧಾರಗಳು ದೇಶದಲ್ಲಿ ಹೊಸ ಶಕೆ ಆರಂಭಿಸಿವೆ. ಹಲವು ಜನಪರ ಯೋಜನೆಗಳು ಜನರ ಮನಸ್ಸು ಗೆದ್ದಿವೆ. ಇನ್ನು ಹಲವು ಜನರಿಗೆ ಸರ್ಕಾರದ ಯೋಜನೆಗಳ ಮನದಟ್ಟು ಮಾಡಬೇಕು, ಬಿಜೆಪಿಯ ಕಾರ್ಯಶೈಲಿಯನ್ನು ಜನರ ಮನೆ ಮನಗಳಿಗೆ ತಲುಪಿಸಬೇಕು ಎಂಬ ದೂರದೃಷ್ಟಿಯ ಯೋಜನೆಯೊಂದನ್ನು ಬಿಜೆಪಿ ಕೈಗೊಂಡಿದೆ.

ಕೇಂದ್ರ ಸರ್ಕಾರದ ನಾಲ್ಕು ವರ್ಷದ ಯಶಸ್ವಿ ಯೋಜನೆಗಳನ್ನು ಜನರ ಮನ ಮನೆಗಳಿಗೆ ತಲುಪಲಿಸಲು ಕೇಂದ್ರ ಸಚಿವರು, ರಾಜ್ಯ ಸಚಿವರು, ಸಂಸದರು, ಶಾಸಕರು, ಬಿಜೆಪಿ ಮೇಯರ್ ಗಳು ಸೇರಿ ಎಲ್ಲ ಹಂತದ ಮುಖಂಡರು. ದೇಶಾದ್ಯಂತ ಸುಮಾರು ಒಂದು ಲಕ್ಷ ಪ್ರಮುಖ ಸಾಧಕರನ್ನು, ಗಣ್ಯರನ್ನು ಭೇಟಿ ಮಾಡಲಿದ್ದಾರೆ. ಈ ಕಾರ್ಯಕ್ರಮ ಮೇ 27ರಿಂದಲೇ ಆರಂಭವಾಗಲಿದ್ದು, ಎಲ್ಲ ಹಂತದ ಮುಖಂಡರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.

ಅಭಿಯಾನದಲ್ಲಿ ವಿಶೇಷವಾಗಿ ಎಸ್ಸಿ ಎಸ್ಟಿ ವರ್ಗದವರ ಬಗ್ಗೆ ವಿಶೇಷ ಕಾಳಜಿ ತೋರಲಿದ್ದು, ಬಿಜೆಪಿ ಮುಖಂಡರು ಬೇರೆ ಬೇರೆ ವರ್ಗದ ಸುಮಾರು 25 ಜನರನ್ನು ಭೇಟಿ ಮಾಡಿ, ಸಂವಾದ ನಡೆಸಲಿದ್ದಾರೆ. , ನಿವೃತ್ತ ನ್ಯಾಯಾಧೀಶರು, ನಿವೃತ್ತ ಸೈನ್ಯಾಧಿಕಾರಿಗಳು, ಸೈನಿಕರು, ಖ್ಯಾತ ಕ್ರೀಡಾಪಟುಗಳು, ಸಾಹಿತಿಗಳು ಸೇರಿ ಪ್ರಮುಖರನ್ನು ಭೇಟಿ ಮಾಡಿ, ಚರ್ಚೆ ಸಂವಾದ ನಡೆಸಲಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಅಲ್ಲದೇ ಕೇಂದ್ರ ಸರ್ಕಾರದ ಯೋಜನೆಗಳಿಂದ ಲಾಭ ಪಡೆದ ಫಲಾನುಭವಿಗಳ ಕಾರ್ಯಕ್ರಮ ಏರ್ಪಡಿಸಿ, ಸಂವಾದ ಏರ್ಪಡಿಸುವುದು, ಚರ್ಚೆ ನಡೆಸುವುದು, ಗ್ರಾಮ ಸಭೆ, ಸುದ್ದಿಗೋಷ್ಠಿಗಳನ್ನು ನಡೆಸುವುದು ಸೇರಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕನಿಷ್ಠ ಒಬ್ಬ ಮುಖಂಡ 50 ಪೊಲೀಂಗ್ ಬೂತ್ ಗಳ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಸಾಧನೆಗಳ ಕುರಿತು ಮನದಟ್ಟು ಮಾಡಿಸಬೇಕು ಎಂದು ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search