• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ವಿರುದ್ಧ ಹೋರಾಟಕ್ಕೆ ಜೈಲು ಕೈದಿಗಳನ್ನು ಬಳಸಿಕೊಳ್ಳಲು ಮುಂದಾದ ಪಾಕ್ ಐಎಸ್ ಐ

TNN Correspondent Posted On May 26, 2018
0


0
Shares
  • Share On Facebook
  • Tweet It

ದೆಹಲಿ: ಭಾರತದ ವಿರುದ್ಧ ಷಡ್ಯಂತ್ರಗಳನ್ನು ಮಾಡುತ್ತ, ಭಾರತದ ಮೇಲೆ ದಾಳಿ ನಡೆಸಲು ಭಯೋತ್ಪಾದಕರಿಗೆ ಪ್ರಚೋಧನೆ ನೀಡುತ್ತಿದ್ದ ಪಾಕಿಸ್ತಾನ ಇದೀಗ ಭಾರತದ ವಿರುದ್ಧ ಹೋರಾಟ ಮಾಡುವುದಕ್ಕಾಗಿ ತೀರ ಕೀಳು ಮಟ್ಟಕ್ಕೆ ಇಳಿದಿದ್ದು, ಜೈಲಿನಲ್ಲಿರುವ ಕೈದಿಗಳನ್ನು ಭಾರತದ ಗಡಿಯಲ್ಲಿ ಹೋರಾಟಕ್ಕೆ ಕಳುಹಿಸುವ ಕುರಿತು ತರಬೇತಿ ನೀಡಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಮುಂದಾಗಿದೆ.

ಕೈದಿಗಳನ್ನು ಬಳಸಿಕೊಂಡು ಭಾರತದ ಮೇಲೆ ದಾಳಿ ಮಾಡಬೇಕು, ಭಾರತೀಯ ಸೈನಿಕರ ವಿರುದ್ಧ ಹೇಗೆ ಹೋರಾಡಬೇಕು ಎಂಬುದರ ಕುರಿತು ಜೈಲಿನಲ್ಲೇ ತರಬೇತಿ ನೀಡಲಾಗುತ್ತಿದೆ ಎನ್ನಲಾಗಿದೆ. ಐಎಸ್ ಐ ನ ಈ ನಿರ್ಧಾರ ಭಾರತಕ್ಕೆ ಹೊಸ ತಲೆ ನೋವು ಒಡ್ಡಿದೆ. ಜೈಲಿನಲ್ಲಿರುವ ನಟೋರಿಯಸ್ ಕ್ರಿಮಿನಲ್ ಗಳನ್ನು ಗಡಿ ಮೂಲಕ ನುಸುಳಿಸಿ, ಹೋರಾಟಕ್ಕೆ ಬಳಸಿಕೊಳ್ಳಲು ಪಾಕ್ ಮುಂದಾಗಿದೆ ಎನ್ನಲಾಗಿದೆ.

ಲೈನ್ ಆಫ್ ಕಂಟ್ರೋಲ್ (ಎಲ್ ಒಸಿ) ಬಳಿ ಇರುವ ಭಾರತೀಯ ಸೇನೆಯ ಶಿಬಿರಗಳ ಮೇಲೆ ದಾಳಿ ಮಾಡುವುದು, ಶಿಬಿರಗಳನ್ನು ಲೂಟಿ ಮಾಡುವುದು, ದೋಚುವುದು ಸೇರಿ ನಾನಾ ಕಾರ್ಯಕ್ಕೆ ಜೈಲಿನಲ್ಲಿರುವ ಕ್ರಿಮಿನಲ್ ಗಳನ್ನು ಬಳಸಿಕೊಳ್ಳುವುದು ಐಎಸ್ ಐ ಹುನ್ನಾರ ಎನ್ನಲಾಗಿದೆ. ಕೈದಿಗಳಿಗೆ ಬೇಕಾದ ಇಡೀ ತರಬೇತಿಯ ಹೊಣೆಯನ್ನು ಐಎಸ್ ಐ ಹೊತ್ತುಕೊಂಡಿದ್ದು, ಯುದ್ದಾಸ್ತ್ರಗಳ ತರಬೇತಿಯನ್ನು ನೀಡಲಾಗುತ್ತಿದೆ. ಅವರನ್ನು ಗಡಿಯಲ್ಲಿ ಬಾರ್ಡರ್ ಆ್ಯಕ್ಷನ್ ಟೀಮ್ (ಬ್ಯಾಟ್) ಆಗಿ ಬಳಸಿಕೊಳ್ಳಲಾಗುತ್ತದೆ.

ಕೈದಿಗಳು ಗಡಿಯಲ್ಲಿ ತಮ್ಮ ಸೇವೆ ಸಲ್ಲಿಸಿ ವಾಪಸ್ ಬಂದರೇ ಅವರಿಗೆ ಜೈಲುವಾಸದ ಶಿಕ್ಷೆಯನ್ನು ಕಡಿಮೆ ಮಾಡುವುದು ಮತ್ತು ಸೇವೆ ಸೂಕ್ತ ಭತ್ಯೆ ನೀಡಲು ಐಎಸ್ ಐ ನಿರ್ಧರಿಸಿದೆ. ಅಲ್ಲದೇ ಇವರಲ್ಲಿ ಕೆಲವರನ್ನು ಆತ್ಮಹತ್ಯಾ ಬಾಂಬರ್ ಗಳನ್ನಾಗಿಯೂ ಕೂಡ ಬಳಸಿಕೊಳ್ಳುವ ಆತಂಕ ಎದುರಾಗಿದೆ.

ಇದಲ್ಲದೇ ಭಾರತದಲ್ಲಿ ಅಶಾಂತಿ ಸೃಷ್ಟಿಸಲು ಪಂಜಾಬ್ ನಲ್ಲಿ ಖಲಿಸ್ತಾನ ಹೋರಾಟಕ್ಕೆ ಬೆಂಬಲ ನೀಡುವುದು, ಆತ್ಮಹುತಿ ಬಾಂಬರ್ ಗಳನ್ನು ಸೃಷ್ಟಿ ಮಾಡುವುದು, ಹನಿ ಟ್ರ್ಯಾಪ್ ಮೂಲಕ ಯುವಕರನ್ನು ಸೆಳೆಯುವುದು, ನಿರಂತರವಾಗಿ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸುವ ಹುನ್ನಾರವನ್ನು ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ ಐ ಹುನ್ನಾರ ನಡೆಸಿದೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search