• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಂಟ್ವಾಳದ ಈ ಶಾಲೆಯಂತೆಯೇ ಎಲ್ಲ ಶಾಲೆಗಳೂ ಪ್ರಾರಂಭೋತ್ಸವ ಆಚರಿಸಿದರೆ ಎಷ್ಟು ಚೆಂದ ಅಲ್ಲವೇ?

TNN Correspondent Posted On May 27, 2018
0


0
Shares
  • Share On Facebook
  • Tweet It

ಸರ್ಕಾರಿ ಶಾಲೆ ಎಂದರೆ ಹಳೆ ಕಟ್ಟಡ, ಮುರಿದ ಬೆಂಚುಗಳು, ಉತ್ತಮ ಬೋಧಕ ಸಿಬ್ಬಂದಿ ಇಲ್ಲದ, ಶಾಲೆ ಪಲಿತಾಂಶದ ಬಗ್ಗೆ ತಲೆಕೆಡೆಸಿಕೊಳ್ಳದ, ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯೇ ಇಲ್ಲದ ಸಂಸ್ಥೆಗಳು ಎಂಬ ಮೂಢನಂಬಿಕೆ ತುಂಬ ಜನರಲ್ಲಿದೆ. ಸಿದ್ದರಾಮಯ್ಯರಂತಹ ಮುಖ್ಯಮಂತ್ರಿ ನೇತೃತ್ವದ ಸರ್ಕಾರಗಳೂ ಈ ಮಾತಿಗೆ ಪೂರಕವಾಗಿ ಸರ್ಕಾರಿ ಶಾಲೆ ಮುಚ್ಚಲು ಮುಂದಾಗುತ್ತಾರೆ ಎಂಬುದು ಸಹ ಘೋರ ದುರಂತವೇ ಆಗಿದೆ.

ಆದರೆ ದಕ್ಷಿಣ ಜಿಲ್ಲೆ ಬಂಟ್ವಾಳ ತಾಲೂಕಿನ ಕೆದ್ದಳಿಕೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾತ್ರ ಹೀಗೆ ಸರ್ಕಾರಿ ಶಾಲೆಗಳು ಎಂದರೆ ಮೂಗು ಮುರಿಯುವವರಿಗೆ ಛಾಟಿಯೇಟಿನಂತಹ ಕಾರ್ಯ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಹೌದು, ಈ ಶಾಲೆಯ ಮುಖ್ಯೋಪಾಧ್ಯಾಯರು, ಗ್ರಾಮಸ್ಥರು ಎಲ್ಲರೂ ಸೇರಿ ಶಾಲೆಯ ಪ್ರಾರಂಭೋತ್ಸವವನ್ನು ಹಬ್ಬದಂತೆ ಆಚರಿಸಿದ್ದು ಎಲ್ಲ ಸರ್ಕಾರಿ ಶಾಲೆಗಳಿಗೆ ಮಾದರಿಯಾಗಿದೆ.

ಶನಿವಾರ ಶಾಲೆಯ ಪ್ರಾರಂಭೋತ್ಸವ ಆಚರಿಸಿದ್ದು, ಗ್ರಾಮದ ಅಂಗನವಾಡಿಯಿಂದ ಶಾಲೆಯವರೆಗೆ ಮಕ್ಕಳನ್ನು ಮೆರವಣಿಗೆ ಮೂಲಕ ಕರೆತರಲಾಗಿದೆ. ಅಲ್ಲದೆ ಅಂಗನವಾಡಿಯಲ್ಲಿ ನೂತನವಾಗಿ ಶಾಲೆಗೆ ಸೇರಿದ ಮಕ್ಕಳನ್ನು ತೊಟ್ಟಿಲಿನಲ್ಲಿ ಮಲಗಿಸಿ, ಅವರಿಗೆ ಅಕ್ಕಿಯಲ್ಲಿ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಅಕ್ಷರ ಬೀಜ ಬಿತ್ತಿದ್ದಾರೆ.

ಶಾಲೆ ಹಾಗೂ ಗ್ರಾಮಸ್ಥರ ವತಿಯಿಂದ ಪ್ರತಿ ವರ್ಷವೂ ಹೀಗೆ ಅದ್ಧೂರಿಯಾಗಿ ಶಾಲೆಯ ವಾರ್ಷಿಕೋತ್ಸವ ಆಚರಿಸುತ್ತಿದ್ದು, ಪ್ರತಿ ವರ್ಷವೂ ವಿಭಿನ್ನತೆ ಮೆರೆಯಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಶಾಲೆ ಮುಖ್ಯೋಪಾಧ್ಯಾಯರು, ಎಸ್ಡಿಎಂಸಿ ಅಧ್ಯಕ್ಷರು, ಗ್ರಾಮದ ಹಿರಿಯರು, ಪೋಷಕರು ಆಗಮಿಸಿ, ಮಕ್ಕಳನ್ನು ಓದಿನತ್ತ ಒರೆಗೆ ಹಚ್ಚುತ್ತಿದ್ದಾರೆ. ಇಂತಹ ಶಾಲೆಗಳ ಸಂಖ್ಯೆ ಸಾವಿರವಾಗಲಿ ಎಂಬುದೇ ನಮ್ಮ ಆಶಯ.

 

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search