• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಂಟ್ವಾಳದ ಈ ಶಾಲೆಯಂತೆಯೇ ಎಲ್ಲ ಶಾಲೆಗಳೂ ಪ್ರಾರಂಭೋತ್ಸವ ಆಚರಿಸಿದರೆ ಎಷ್ಟು ಚೆಂದ ಅಲ್ಲವೇ?

TNN Correspondent Posted On May 27, 2018


  • Share On Facebook
  • Tweet It

ಸರ್ಕಾರಿ ಶಾಲೆ ಎಂದರೆ ಹಳೆ ಕಟ್ಟಡ, ಮುರಿದ ಬೆಂಚುಗಳು, ಉತ್ತಮ ಬೋಧಕ ಸಿಬ್ಬಂದಿ ಇಲ್ಲದ, ಶಾಲೆ ಪಲಿತಾಂಶದ ಬಗ್ಗೆ ತಲೆಕೆಡೆಸಿಕೊಳ್ಳದ, ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯೇ ಇಲ್ಲದ ಸಂಸ್ಥೆಗಳು ಎಂಬ ಮೂಢನಂಬಿಕೆ ತುಂಬ ಜನರಲ್ಲಿದೆ. ಸಿದ್ದರಾಮಯ್ಯರಂತಹ ಮುಖ್ಯಮಂತ್ರಿ ನೇತೃತ್ವದ ಸರ್ಕಾರಗಳೂ ಈ ಮಾತಿಗೆ ಪೂರಕವಾಗಿ ಸರ್ಕಾರಿ ಶಾಲೆ ಮುಚ್ಚಲು ಮುಂದಾಗುತ್ತಾರೆ ಎಂಬುದು ಸಹ ಘೋರ ದುರಂತವೇ ಆಗಿದೆ.

ಆದರೆ ದಕ್ಷಿಣ ಜಿಲ್ಲೆ ಬಂಟ್ವಾಳ ತಾಲೂಕಿನ ಕೆದ್ದಳಿಕೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾತ್ರ ಹೀಗೆ ಸರ್ಕಾರಿ ಶಾಲೆಗಳು ಎಂದರೆ ಮೂಗು ಮುರಿಯುವವರಿಗೆ ಛಾಟಿಯೇಟಿನಂತಹ ಕಾರ್ಯ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಹೌದು, ಈ ಶಾಲೆಯ ಮುಖ್ಯೋಪಾಧ್ಯಾಯರು, ಗ್ರಾಮಸ್ಥರು ಎಲ್ಲರೂ ಸೇರಿ ಶಾಲೆಯ ಪ್ರಾರಂಭೋತ್ಸವವನ್ನು ಹಬ್ಬದಂತೆ ಆಚರಿಸಿದ್ದು ಎಲ್ಲ ಸರ್ಕಾರಿ ಶಾಲೆಗಳಿಗೆ ಮಾದರಿಯಾಗಿದೆ.

ಶನಿವಾರ ಶಾಲೆಯ ಪ್ರಾರಂಭೋತ್ಸವ ಆಚರಿಸಿದ್ದು, ಗ್ರಾಮದ ಅಂಗನವಾಡಿಯಿಂದ ಶಾಲೆಯವರೆಗೆ ಮಕ್ಕಳನ್ನು ಮೆರವಣಿಗೆ ಮೂಲಕ ಕರೆತರಲಾಗಿದೆ. ಅಲ್ಲದೆ ಅಂಗನವಾಡಿಯಲ್ಲಿ ನೂತನವಾಗಿ ಶಾಲೆಗೆ ಸೇರಿದ ಮಕ್ಕಳನ್ನು ತೊಟ್ಟಿಲಿನಲ್ಲಿ ಮಲಗಿಸಿ, ಅವರಿಗೆ ಅಕ್ಕಿಯಲ್ಲಿ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಅಕ್ಷರ ಬೀಜ ಬಿತ್ತಿದ್ದಾರೆ.

ಶಾಲೆ ಹಾಗೂ ಗ್ರಾಮಸ್ಥರ ವತಿಯಿಂದ ಪ್ರತಿ ವರ್ಷವೂ ಹೀಗೆ ಅದ್ಧೂರಿಯಾಗಿ ಶಾಲೆಯ ವಾರ್ಷಿಕೋತ್ಸವ ಆಚರಿಸುತ್ತಿದ್ದು, ಪ್ರತಿ ವರ್ಷವೂ ವಿಭಿನ್ನತೆ ಮೆರೆಯಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಶಾಲೆ ಮುಖ್ಯೋಪಾಧ್ಯಾಯರು, ಎಸ್ಡಿಎಂಸಿ ಅಧ್ಯಕ್ಷರು, ಗ್ರಾಮದ ಹಿರಿಯರು, ಪೋಷಕರು ಆಗಮಿಸಿ, ಮಕ್ಕಳನ್ನು ಓದಿನತ್ತ ಒರೆಗೆ ಹಚ್ಚುತ್ತಿದ್ದಾರೆ. ಇಂತಹ ಶಾಲೆಗಳ ಸಂಖ್ಯೆ ಸಾವಿರವಾಗಲಿ ಎಂಬುದೇ ನಮ್ಮ ಆಶಯ.

 

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search