• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮ್ಯಾನ್ಮಾರ್ ಹಿಂದೂಗಳ ಪರ ನಿಂತ ಅಮೆರಿಕ, ಹಿಂದೂಗಳ ಹತ್ಯೆ ಕುರಿತು ತನಿಖೆಗೆ ಆಗ್ರಹ

TNN Correspondent Posted On May 27, 2018


  • Share On Facebook
  • Tweet It

ವಾಷಿಂಗ್ಟನ್: ಒಂದೆಡೆ ರೋಹಿಂಗ್ಯಾ ಮುಸ್ಲಿಮರು ಭಾರತದೊಳಕ್ಕೆ ನುಸುಳಿ ತಲೆನೋವಾಗುವ ಎಲ್ಲ ಲಕ್ಷಣ ಗೋಚರಿಸುತ್ತಿದ್ದಾರೆ. ಮತ್ತೊಂದೆಡೆ ಇವರು ಬಾಂಗ್ಲಾದೇಶಕ್ಕೂ ತಲೆನೋವಾಗಿದ್ದಾರೆ. ಮ್ಯಾನ್ಮಾರ್ ನಲ್ಲಂತೂ ಮೊದಲಿನಿಂದಲೂ ಇದೇ ಪರಿಸ್ಥಿತಿ ಇದೆ.

ಆದರೂ ಭಾರತದಲ್ಲಿ ಮಾತ್ರ ಮಾನವೀಯತೆ ದೃಷ್ಟಿಯಿಂದ ರೋಹಿಂಗ್ಯಾ ಮುಸ್ಲಿಮರನ್ನು ಒಡಲೊಳಗಿಟ್ಟುಕೊಂಡು ಪೋಷಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಅವರು ದೇಶದ ಭದ್ರತೆಗೇ ಧಕ್ಕೆ ತರುತ್ತಾರೆ ಎಂಬುದು ಮುಂದಾಲೋಚನೆಯಿದ್ದರೂ, ಅವರೂ ಮುಸ್ಲಿಮರು ಎಂಬ ಕಾರಣಕ್ಕಾಗಿ ಅವರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದಾಗಬೇಕು ಎಂಬುದು ಸಹ ಒತ್ತಾಯವಿದೆ.

ಆದರೆ ರೋಹಿಂಗ್ಯಾ ಮುಸ್ಲಿಮರು ಹಿಂದೂಗಳ ವಿರೋಧಿಗಳು, ಅವರನ್ನು ಕೊಲ್ಲುತ್ತಿದ್ದಾರೆ ಎಂಬ ಸತ್ಯವನ್ನು ಮಾತ್ರ ಅಮೆರಿಕ ಕಂಡುಕೊಂಡಿದ್ದು, ಇದು ನಮ್ಮವರಿಗ್ಯಾಕೆ ಅರ್ಥವಾಗುವುದಿಲ್ಲ ಎಂಬುದು ತಿಳಿಯದಾಗಿದೆ.

ಇದರ ನಡುವೆಯೇ ಮ್ಯಾನ್ಮಾರ್ ನಲ್ಲಿ ಇತ್ತೀಚೆಗೆ ರೋಹಿಂಗ್ಯಾ ಮುಸ್ಲಿಮರು ಹಿಂದೂಗಳನ್ನು ಹತ್ಯೆ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ, ಮ್ಯಾನ್ಮಾರ್ ನಲ್ಲಿರುವ ಹಿಂದೂಗಳ ಪರವಾಗಿ ಅಮೆರಿಕ ಧಾವಿಸಿದ್ದು, ಹಿಂದೂಗಳ ಹತ್ಯೆ ಕುರಿತು ವಿಶ್ವಾಸಾರ್ಹ ತನಿಖೆ ಮಾಡಬೇಕು ಎಂದು ಆಗ್ರಹಿಸಿದೆ.

ಇತ್ತೀಚೆಗೆ ಮ್ಯಾನ್ಮಾರ್ ನ ರಾಖಿನೆ ಆರ್ಕಾನ್ ರೋಹಿಂಗ್ಯಾ ಸಾಲ್ವೇಷನ್ ಆರ್ಮಿಯ ಸದಸ್ಯರು ಹಿಂದೂಗಳನ್ನು ಹತ್ಯೆ ಮಾಡಲಾಗಿರುವ ಕುರಿತು ಮಾಹಿತಿ ಇದ್ದು, ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಹಾಗಾಗಿ ಈ ಕುರಿತು ಸಮಗ್ರವಾಗಿ ತನಿಖೆ ಮಾಡಬೇಕು ಎಂದು ಅಮೆರಿಕ ಮ್ಯಾನ್ಮಾರ್ ಸರ್ಕಾರವನ್ನು ಒತ್ತಾಯಿಸಿದೆ.

ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ನಡೆಸಿದ ಸಮೀಕ್ಷೆ ಅನ್ವಯ ಇತ್ತೀಚೆಗೆ ವರದಿಯೊಂದು ಬಿಡುಗಡೆಯಾಗಿದ್ದು, 2017ರಲ್ಲಿ ಸುಮಾರು ಮಹಿಳೆಯರು ಸೇರಿ ಸುಮಾರು 99 ಹಿಂದೂಗಳನ್ನು ರೋಹಿಂಗ್ಯಾಗಳು ಹತ್ಯೆ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಮೆರಿಕ ತನಿಖೆಗೆ ಆಗ್ರಹಿಸಿದೆ. ಆದರೆ ರೋಹಿಂಗ್ಯಾ ಮುಸ್ಲಿಮರು ಅಪಾಯಕಾರಿ ಎಂಬುದು ಎಂದು ಭಾರತೀಯರು ಅರಿಯುವುದು ಯಾವಾಗ?

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search