• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1 ಲಕ್ಷ ಉದ್ಯೋಗ ಸೃಷ್ಟಿಗೆ ಚಿಂತನೆ, ಹೊಸ ಭಾಷ್ಯ ಬರೆದ ಮಧ್ಯಪ್ರದೇಶ ಬಿಜೆಪಿ ಸರ್ಕಾರ

TNN Correspondent Posted On May 27, 2018
0


0
Shares
  • Share On Facebook
  • Tweet It

ಭೋಪಾಲ್: ಯಾವುದೇ ರಾಜ್ಯ ಸರ್ಕಾರವಿರಲಿ, ತಾನು ಆಡಳಿತ ನಡೆಸಿದ ಅವಧಿಯಲ್ಲಿ ಇಷ್ಟು ಉದ್ಯೋಗ ಸೃಷ್ಟಿಸಿದ್ದೇವೆ ಎಂದು ಹೇಳುತ್ತದೆಯೇ ಹೊರತು, ಒಂದೇ ದಿನ ಒಂದು ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಘೋಷಿಸುವುದು ಕಷ್ಟಸಾಧ್ಯ. ಆದರೆ ಈ ಕಷ್ಟಸಾಧ್ಯವನ್ನೂ ಮಧ್ಯಪ್ರದೇಶ ಬಿಜೆಪಿ ಸರ್ಕಾರ ಸರಳಗೊಳಿಸಿದ್ದು, ಒಂದು ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಘೋಷಿಸಿದೆ.

ಹೌದು, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇಂತಹ ಮಹತ್ತರ ನಿರ್ಧಾರ ಘೋಷಿಸಿದ್ದು, ರಾಜ್ಯದ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ಸೃಷ್ಟಿಸಿ, ಸುಮಾರು 1 ಲಕ್ಷ ಯುವಕರಿಗೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮಧ್ಯಪ್ರದೇಶ ಕೌಶಲ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಮಂಡಳಿಯು ಪುಣೆ ಮೂಲದ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ಮಹಾ ಪಂಚಾಯಿತಿ ಸ್ಥಾಪನೆ ಮಾಡಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈನಲ್ಲಿ ರಾಜ್ಯದ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ಸ್ಥಾಪನೆ ಮಾಡಲಿದ್ದು, ಖಾಸಗಿ ಸಹಭಾಗಿತ್ವಕ್ಕಾಗಿ ಸುಮಾರು ಒಂದು ಸಾವಿರ ಖಾಸಗಿ ಕಂಪನಿಗಳಿಗೆ ಮಂಡಳಿ ಆಹ್ವಾನ ನೀಡಿದೆ. ಸ್ಥಾಪನೆ ಮಾಡುವ ಕುರಿತು ಇದುವರೆಗೂ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿದುಬಂದಿದೆ.

ಮಧ್ಯಪ್ರದೇಶದಲ್ಲಿ ಸುಮಾರು 11.24 ಲಕ್ಷ ಪದವೀಧರ ಯುವಕರು ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು 2018ರ ಎಕನಾಮಿಕ್  ಸಮೀಕ್ಷೆಯಿಂದ ಬಹಿರಂಗವಾಗಿದ್ದು, ಈ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರ ಒಂದು ಲಕ್ಷ ಉದ್ಯೋಗ ಸೃಷ್ಟಿಗೆ ಮುಂದಾಗಿದೆ. ಅಲ್ಲದೆ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ನಿರ್ಮಾಣ ಮಾಡುವುದರಿಂದ ಅಧಿಕಾರದ ವಿಕೇಂದ್ರೀಕರಣ ಹಾಗೂ ಸ್ಥಳೀಯ ಆಡಳಿತ ಬಲವಾಗಲಿದೆ ಎಂದೇ ಹೇಳಲಾಗುತ್ತಿದೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search