• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1 ಲಕ್ಷ ಉದ್ಯೋಗ ಸೃಷ್ಟಿಗೆ ಚಿಂತನೆ, ಹೊಸ ಭಾಷ್ಯ ಬರೆದ ಮಧ್ಯಪ್ರದೇಶ ಬಿಜೆಪಿ ಸರ್ಕಾರ

TNN Correspondent Posted On May 27, 2018
0


0
Shares
  • Share On Facebook
  • Tweet It

ಭೋಪಾಲ್: ಯಾವುದೇ ರಾಜ್ಯ ಸರ್ಕಾರವಿರಲಿ, ತಾನು ಆಡಳಿತ ನಡೆಸಿದ ಅವಧಿಯಲ್ಲಿ ಇಷ್ಟು ಉದ್ಯೋಗ ಸೃಷ್ಟಿಸಿದ್ದೇವೆ ಎಂದು ಹೇಳುತ್ತದೆಯೇ ಹೊರತು, ಒಂದೇ ದಿನ ಒಂದು ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಘೋಷಿಸುವುದು ಕಷ್ಟಸಾಧ್ಯ. ಆದರೆ ಈ ಕಷ್ಟಸಾಧ್ಯವನ್ನೂ ಮಧ್ಯಪ್ರದೇಶ ಬಿಜೆಪಿ ಸರ್ಕಾರ ಸರಳಗೊಳಿಸಿದ್ದು, ಒಂದು ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಘೋಷಿಸಿದೆ.

ಹೌದು, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇಂತಹ ಮಹತ್ತರ ನಿರ್ಧಾರ ಘೋಷಿಸಿದ್ದು, ರಾಜ್ಯದ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ಸೃಷ್ಟಿಸಿ, ಸುಮಾರು 1 ಲಕ್ಷ ಯುವಕರಿಗೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮಧ್ಯಪ್ರದೇಶ ಕೌಶಲ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಮಂಡಳಿಯು ಪುಣೆ ಮೂಲದ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ಮಹಾ ಪಂಚಾಯಿತಿ ಸ್ಥಾಪನೆ ಮಾಡಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈನಲ್ಲಿ ರಾಜ್ಯದ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ಸ್ಥಾಪನೆ ಮಾಡಲಿದ್ದು, ಖಾಸಗಿ ಸಹಭಾಗಿತ್ವಕ್ಕಾಗಿ ಸುಮಾರು ಒಂದು ಸಾವಿರ ಖಾಸಗಿ ಕಂಪನಿಗಳಿಗೆ ಮಂಡಳಿ ಆಹ್ವಾನ ನೀಡಿದೆ. ಸ್ಥಾಪನೆ ಮಾಡುವ ಕುರಿತು ಇದುವರೆಗೂ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿದುಬಂದಿದೆ.

ಮಧ್ಯಪ್ರದೇಶದಲ್ಲಿ ಸುಮಾರು 11.24 ಲಕ್ಷ ಪದವೀಧರ ಯುವಕರು ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು 2018ರ ಎಕನಾಮಿಕ್  ಸಮೀಕ್ಷೆಯಿಂದ ಬಹಿರಂಗವಾಗಿದ್ದು, ಈ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರ ಒಂದು ಲಕ್ಷ ಉದ್ಯೋಗ ಸೃಷ್ಟಿಗೆ ಮುಂದಾಗಿದೆ. ಅಲ್ಲದೆ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ನಿರ್ಮಾಣ ಮಾಡುವುದರಿಂದ ಅಧಿಕಾರದ ವಿಕೇಂದ್ರೀಕರಣ ಹಾಗೂ ಸ್ಥಳೀಯ ಆಡಳಿತ ಬಲವಾಗಲಿದೆ ಎಂದೇ ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search