• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1 ಲಕ್ಷ ಉದ್ಯೋಗ ಸೃಷ್ಟಿಗೆ ಚಿಂತನೆ, ಹೊಸ ಭಾಷ್ಯ ಬರೆದ ಮಧ್ಯಪ್ರದೇಶ ಬಿಜೆಪಿ ಸರ್ಕಾರ

TNN Correspondent Posted On May 27, 2018
0


0
Shares
  • Share On Facebook
  • Tweet It

ಭೋಪಾಲ್: ಯಾವುದೇ ರಾಜ್ಯ ಸರ್ಕಾರವಿರಲಿ, ತಾನು ಆಡಳಿತ ನಡೆಸಿದ ಅವಧಿಯಲ್ಲಿ ಇಷ್ಟು ಉದ್ಯೋಗ ಸೃಷ್ಟಿಸಿದ್ದೇವೆ ಎಂದು ಹೇಳುತ್ತದೆಯೇ ಹೊರತು, ಒಂದೇ ದಿನ ಒಂದು ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಘೋಷಿಸುವುದು ಕಷ್ಟಸಾಧ್ಯ. ಆದರೆ ಈ ಕಷ್ಟಸಾಧ್ಯವನ್ನೂ ಮಧ್ಯಪ್ರದೇಶ ಬಿಜೆಪಿ ಸರ್ಕಾರ ಸರಳಗೊಳಿಸಿದ್ದು, ಒಂದು ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಘೋಷಿಸಿದೆ.

ಹೌದು, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇಂತಹ ಮಹತ್ತರ ನಿರ್ಧಾರ ಘೋಷಿಸಿದ್ದು, ರಾಜ್ಯದ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ಸೃಷ್ಟಿಸಿ, ಸುಮಾರು 1 ಲಕ್ಷ ಯುವಕರಿಗೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮಧ್ಯಪ್ರದೇಶ ಕೌಶಲ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಮಂಡಳಿಯು ಪುಣೆ ಮೂಲದ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ಮಹಾ ಪಂಚಾಯಿತಿ ಸ್ಥಾಪನೆ ಮಾಡಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈನಲ್ಲಿ ರಾಜ್ಯದ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ಸ್ಥಾಪನೆ ಮಾಡಲಿದ್ದು, ಖಾಸಗಿ ಸಹಭಾಗಿತ್ವಕ್ಕಾಗಿ ಸುಮಾರು ಒಂದು ಸಾವಿರ ಖಾಸಗಿ ಕಂಪನಿಗಳಿಗೆ ಮಂಡಳಿ ಆಹ್ವಾನ ನೀಡಿದೆ. ಸ್ಥಾಪನೆ ಮಾಡುವ ಕುರಿತು ಇದುವರೆಗೂ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿದುಬಂದಿದೆ.

ಮಧ್ಯಪ್ರದೇಶದಲ್ಲಿ ಸುಮಾರು 11.24 ಲಕ್ಷ ಪದವೀಧರ ಯುವಕರು ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು 2018ರ ಎಕನಾಮಿಕ್  ಸಮೀಕ್ಷೆಯಿಂದ ಬಹಿರಂಗವಾಗಿದ್ದು, ಈ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರ ಒಂದು ಲಕ್ಷ ಉದ್ಯೋಗ ಸೃಷ್ಟಿಗೆ ಮುಂದಾಗಿದೆ. ಅಲ್ಲದೆ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ನಿರ್ಮಾಣ ಮಾಡುವುದರಿಂದ ಅಧಿಕಾರದ ವಿಕೇಂದ್ರೀಕರಣ ಹಾಗೂ ಸ್ಥಳೀಯ ಆಡಳಿತ ಬಲವಾಗಲಿದೆ ಎಂದೇ ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search