• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ವೈರಿಗಳ ಹುಟ್ಟಡಗಿಸಲು 5,500 ಬಂಕರ್ ನಿರ್ಮಾಣಕ್ಕೆ ಚಿಂತನೆ, ಪಾಕಿಸ್ತಾನಕ್ಕಿದೆ ಮಾರಿ ಹಬ್ಬ

TNN Correspondent Posted On May 27, 2018
0


0
Shares
  • Share On Facebook
  • Tweet It

ಶ್ರೀನಗರ: ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಉಗ್ರರ ಉಪಟಳ ಜಾಸ್ತಿಯಾಗಿದ್ದು, ಅದಕ್ಕೆ ಭಾರತವೂ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಭಾರತದ ಪ್ರತಿದಾಳಿಗೆ ಹೆದರಿದ್ದ ಪಾಕಿಸ್ತಾನ ದಯಮಾಡಿ ಪ್ರತಿದಾಳಿ ಮಾಡಬೇಡಿ ಎಂದು ಭಾರತೀಯ ಸೇನೆಯನ್ನು ಇತ್ತೀಚೆಗೆ ಬೇಡಿಕೊಂಡಿತ್ತು. ಆದರೆ ನಾಯಿ ಬಾಲ ಡೊಂಕೇ ಎಂಬಂತೆ ಪಾಕಿಸ್ತಾನ ಮತ್ತೆ ಗಡಿಯಲ್ಲಿ ಉಪಟಳ ಆರಂಭಿಸಿದೆ.

ಆದರೆ ಭಾರತೀಯ ಸೇನೆ ಯಾರಿಗೇನು ಕಮ್ಮಿ? ಅದಕ್ಕಾಗಿಯೇ ಗಡಿಯಲ್ಲಿ ಭದ್ರತೆ ಹಾಗೂ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವ ದೃಷ್ಟಿಯಿಂದ ಜಮ್ಮು-ಕಾಶ್ಮೀರ ಗಡಿಯಲ್ಲಿ ಸುಮಾರು 5,500 ಸೇನಾ ಬಂಕರ್ ಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.

ಅಷ್ಟೇ ಅಲ್ಲ, ಗಡಿ ಭಾಗದಲ್ಲಿ ಉಗ್ರರ ದಾಳಿಯಿಂದ ಸಾರ್ವಜನಿಕರನ್ನು ರಕ್ಷಿಸುವ ದೃಷ್ಟಿಯಿಂದ 200 ಸಮುದಾಯ ಭವನ ಹಾಗೂ ಗಡಿ ಭವನಗಳನ್ನು ನಿರ್ಮಿಸಲು ಚಿಂತನೆ ನಡೆಸಲಾಗಿದೆ. ಅಲ್ಲದೆ ಇಡೀ ಯೋಜನೆಯನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಪೂರ್ಣಗೊಳಿಸುವ ಚಿಂತನೆಯಿದೆ.

ಈ ಯೋಜನೆಯ ಜಾರಿಗಾಗಿ ಸುಮಾರು 153 ಕೋಟಿ ರೂಪಾಯಿಗಳ ಅವಶ್ಯಕತೆಯಿದ್ದು, ಈಗಾಗಲೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಗೃಹ ಸಚಿವಾಲಯ ಹಣ ಮಂಜೂರು ಮಾಡಲು ಒಪ್ಪಿಗೆ ಸೂಚಿಸಿದೆ. ಒಟ್ಟಿನಲ್ಲಿ ಗಡಿಯಲ್ಲಿ ಉಪಟಳ ಮಾಡುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸಜ್ಜಾಗಿರುವುದು ಉತ್ತಮ ಬೆಳವಣಿಗೆಯಾಗಿದೆ.

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search