• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು ಕಾಶ್ಮೀರದಲ್ಲಿ ಆನ್ ಲೈನ್ ಭಯೋತ್ಪಾದಕರ ಅಟ್ಟಹಾಸ ತೀವ್ರ

TNN Correspondent Posted On May 28, 2018
0


0
Shares
  • Share On Facebook
  • Tweet It

ಶ್ರೀನಗರ: ಕಾಶ್ಮೀರದ ಪ್ರತ್ಯೇಕತವಾದ ಹೆಸರಲ್ಲಿ ಮುಗ್ದ ಯುವಕರನ್ನು ಬಹಿರಂಗ ಸಭೆ, ಸಮಾರಂಭಗಳ ಮೂಲಕ ಭಯೋತ್ಪಾದನೆಯ ಕೂಪಕ್ಕೆ ತಳುತ್ತಿದ್ದ ಪ್ರತ್ಯೇಕವಾದಿಗಳ ಅಟ್ಟಹಾಸಕ್ಕೆ ಕೇಂದ್ರ ಸರ್ಕಾರ ಕೊನೆ ಹಾಡಿರುವ ಮಧ್ಯೆಯೇ ಆನ್ ಲೈನ್ ಭಯೋತ್ಪಾದನೆ ಕಾಶ್ಮೀರದಲ್ಲಿ ತೀವ್ರಗೊಂಡಿದೆ. ಮದ್ದು, ಗುಂಡುಗಳನಿಟ್ಟು ನೇರವಾಗಿ ಸೈನ್ಯವನ್ನು, ಜನರನ್ನು ಎದುರಿಸುವ ಬದಲು ಮುಗ್ದ ಯುವಕರನ್ನು ಧರ್ಮದ ಹೆಸರಲ್ಲಿ, ಜಿಹಾದ್ ನೆಪದಲ್ಲಿ ಭಯೋತ್ಪಾದನೆಗೆ ತಳ್ಳಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲಾಗುತ್ತಿದೆ.
ಟ್ವಿಟರ್‌, ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ ಸೇರಿ ನಾನಾ ರೀತಿಯ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಯುವಕರಲ್ಲಿ ಧರ್ಮದ ವಿಷ ಬೀಜ ಬಿತ್ತುವ, ಎಲ್ಲ ಕಾರ್ಯಕ್ರಮಗಳಿಗೆ ಧರ್ಮದ ಬಣ್ಣ ಬಳಿದು, ಹಿಂಸೆಗೆ ಪ್ರಚೋಧಿಸುವ ಕಾರ್ಯವನ್ನು ಕಿಪ್ಯಾಡ್ ಜಿಹಾದಿಗಳು ಗುಂಪು ಮಾಡುತ್ತಿದೆ. ಸರ್ಕಾರದ ವಿರುದ್ಧ ಮುಗ್ದ ಯುವಕರನ್ನು ಧರ್ಮದ ಹೆಸರಲ್ಲಿ ಪ್ರಚೋದಿಸುತ್ತಿರುವವರನ್ನು ಮಟ್ಟಹಾಕಲು ಪೊಲೀಸ್ ಇಲಾಖೆಯ ಸೈಬರ್ ಅಪರಾಧ ವಿಭಾಗ ಕಾರ್ಯಪವೃತವಾಗಿವೆ.

ಇತ್ತೀಚಿಗೆ ಕಾಶ್ಮೀರ ಮತ್ತು ಜಮ್ಮುವಿನಲ್ಲಿ ‘ಕೀಪ್ಯಾಡ್‌ ಜಿಹಾದಿ’ ಗುಂಪುಗಳು ಸಕ್ರಿಯವಾಗಿದ್ದು, ಕಾಶ್ಮೀರ ಪ್ರತ್ಯೇಕತಾವಾದಿಗಳು ಕೀಪ್ಯಾಡ್ ಜಿಹಾದಿಗಳನ್ನು ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಡಗುತಾಣಗಳಲ್ಲಿ ಕುಳಿತು  ಕಂಪ್ಯೂಟರ್‌, ಸ್ಮಾರ್ಟ್‌ಫೋನ್‌ ಮೂಲಕ ಕಣಿವೆ ಹಾಗೂ ಹೊರ ರಾಜ್ಯಗಳಲ್ಲೂ ಧರ್ಮಯುದ್ಧ ಸಾರುತ್ತಿದ್ದಾರೆ. ಇದು ಅಮರನಾಥ ಯಾತ್ರೆಯ ಮೇಲೂ ಆತಂಕದ ಛಾಯೇ ಮೂಡಿಸಿದೆ.

ವಿಷ ಬೀಜ ಬಿತ್ತಿ, ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದ ಐದು ನಕಲಿ ಟ್ವಿಟರ್ ಖಾತೆಗಳನ್ನು ಪತ್ತೆ ಹಚ್ಚಲಾಗಿದೆ. ಆನ್ ಲೈನ್ ಭಯೋತ್ಪಾದಕ ಗುಂಪುಗಳನ್ನು ಮಟ್ಟಹಾಕಲು ಪತ್ತೆ ಹಚ್ಚಿದ ನಕಲಿ ಟ್ವಿಟರ್‌, ಫೇಸ್‌ಬುಕ್‌ ಖಾತೆಗಳ  ಮಾಹಿತಿ ಕಲೆಹಾಕಿ ಅದನ್ನು ಕಂಪ್ಯೂಟರ್‌ ಎಮರ್ಜೆನ್ಸಿ ರೆಸ್ಪಾನ್ಸ್‌ ಟೀಮ್‌-ಇಂಡಿಯಾ ತಂಡಕ್ಕೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search