• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು ಕಾಶ್ಮೀರದಲ್ಲಿ ಆನ್ ಲೈನ್ ಭಯೋತ್ಪಾದಕರ ಅಟ್ಟಹಾಸ ತೀವ್ರ

TNN Correspondent Posted On May 28, 2018
0


0
Shares
  • Share On Facebook
  • Tweet It

ಶ್ರೀನಗರ: ಕಾಶ್ಮೀರದ ಪ್ರತ್ಯೇಕತವಾದ ಹೆಸರಲ್ಲಿ ಮುಗ್ದ ಯುವಕರನ್ನು ಬಹಿರಂಗ ಸಭೆ, ಸಮಾರಂಭಗಳ ಮೂಲಕ ಭಯೋತ್ಪಾದನೆಯ ಕೂಪಕ್ಕೆ ತಳುತ್ತಿದ್ದ ಪ್ರತ್ಯೇಕವಾದಿಗಳ ಅಟ್ಟಹಾಸಕ್ಕೆ ಕೇಂದ್ರ ಸರ್ಕಾರ ಕೊನೆ ಹಾಡಿರುವ ಮಧ್ಯೆಯೇ ಆನ್ ಲೈನ್ ಭಯೋತ್ಪಾದನೆ ಕಾಶ್ಮೀರದಲ್ಲಿ ತೀವ್ರಗೊಂಡಿದೆ. ಮದ್ದು, ಗುಂಡುಗಳನಿಟ್ಟು ನೇರವಾಗಿ ಸೈನ್ಯವನ್ನು, ಜನರನ್ನು ಎದುರಿಸುವ ಬದಲು ಮುಗ್ದ ಯುವಕರನ್ನು ಧರ್ಮದ ಹೆಸರಲ್ಲಿ, ಜಿಹಾದ್ ನೆಪದಲ್ಲಿ ಭಯೋತ್ಪಾದನೆಗೆ ತಳ್ಳಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲಾಗುತ್ತಿದೆ.
ಟ್ವಿಟರ್‌, ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ ಸೇರಿ ನಾನಾ ರೀತಿಯ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಯುವಕರಲ್ಲಿ ಧರ್ಮದ ವಿಷ ಬೀಜ ಬಿತ್ತುವ, ಎಲ್ಲ ಕಾರ್ಯಕ್ರಮಗಳಿಗೆ ಧರ್ಮದ ಬಣ್ಣ ಬಳಿದು, ಹಿಂಸೆಗೆ ಪ್ರಚೋಧಿಸುವ ಕಾರ್ಯವನ್ನು ಕಿಪ್ಯಾಡ್ ಜಿಹಾದಿಗಳು ಗುಂಪು ಮಾಡುತ್ತಿದೆ. ಸರ್ಕಾರದ ವಿರುದ್ಧ ಮುಗ್ದ ಯುವಕರನ್ನು ಧರ್ಮದ ಹೆಸರಲ್ಲಿ ಪ್ರಚೋದಿಸುತ್ತಿರುವವರನ್ನು ಮಟ್ಟಹಾಕಲು ಪೊಲೀಸ್ ಇಲಾಖೆಯ ಸೈಬರ್ ಅಪರಾಧ ವಿಭಾಗ ಕಾರ್ಯಪವೃತವಾಗಿವೆ.

ಇತ್ತೀಚಿಗೆ ಕಾಶ್ಮೀರ ಮತ್ತು ಜಮ್ಮುವಿನಲ್ಲಿ ‘ಕೀಪ್ಯಾಡ್‌ ಜಿಹಾದಿ’ ಗುಂಪುಗಳು ಸಕ್ರಿಯವಾಗಿದ್ದು, ಕಾಶ್ಮೀರ ಪ್ರತ್ಯೇಕತಾವಾದಿಗಳು ಕೀಪ್ಯಾಡ್ ಜಿಹಾದಿಗಳನ್ನು ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಡಗುತಾಣಗಳಲ್ಲಿ ಕುಳಿತು  ಕಂಪ್ಯೂಟರ್‌, ಸ್ಮಾರ್ಟ್‌ಫೋನ್‌ ಮೂಲಕ ಕಣಿವೆ ಹಾಗೂ ಹೊರ ರಾಜ್ಯಗಳಲ್ಲೂ ಧರ್ಮಯುದ್ಧ ಸಾರುತ್ತಿದ್ದಾರೆ. ಇದು ಅಮರನಾಥ ಯಾತ್ರೆಯ ಮೇಲೂ ಆತಂಕದ ಛಾಯೇ ಮೂಡಿಸಿದೆ.

ವಿಷ ಬೀಜ ಬಿತ್ತಿ, ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದ ಐದು ನಕಲಿ ಟ್ವಿಟರ್ ಖಾತೆಗಳನ್ನು ಪತ್ತೆ ಹಚ್ಚಲಾಗಿದೆ. ಆನ್ ಲೈನ್ ಭಯೋತ್ಪಾದಕ ಗುಂಪುಗಳನ್ನು ಮಟ್ಟಹಾಕಲು ಪತ್ತೆ ಹಚ್ಚಿದ ನಕಲಿ ಟ್ವಿಟರ್‌, ಫೇಸ್‌ಬುಕ್‌ ಖಾತೆಗಳ  ಮಾಹಿತಿ ಕಲೆಹಾಕಿ ಅದನ್ನು ಕಂಪ್ಯೂಟರ್‌ ಎಮರ್ಜೆನ್ಸಿ ರೆಸ್ಪಾನ್ಸ್‌ ಟೀಮ್‌-ಇಂಡಿಯಾ ತಂಡಕ್ಕೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search