• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು ಕಾಶ್ಮೀರದಲ್ಲಿ ಆನ್ ಲೈನ್ ಭಯೋತ್ಪಾದಕರ ಅಟ್ಟಹಾಸ ತೀವ್ರ

TNN Correspondent Posted On May 28, 2018
0


0
Shares
  • Share On Facebook
  • Tweet It

ಶ್ರೀನಗರ: ಕಾಶ್ಮೀರದ ಪ್ರತ್ಯೇಕತವಾದ ಹೆಸರಲ್ಲಿ ಮುಗ್ದ ಯುವಕರನ್ನು ಬಹಿರಂಗ ಸಭೆ, ಸಮಾರಂಭಗಳ ಮೂಲಕ ಭಯೋತ್ಪಾದನೆಯ ಕೂಪಕ್ಕೆ ತಳುತ್ತಿದ್ದ ಪ್ರತ್ಯೇಕವಾದಿಗಳ ಅಟ್ಟಹಾಸಕ್ಕೆ ಕೇಂದ್ರ ಸರ್ಕಾರ ಕೊನೆ ಹಾಡಿರುವ ಮಧ್ಯೆಯೇ ಆನ್ ಲೈನ್ ಭಯೋತ್ಪಾದನೆ ಕಾಶ್ಮೀರದಲ್ಲಿ ತೀವ್ರಗೊಂಡಿದೆ. ಮದ್ದು, ಗುಂಡುಗಳನಿಟ್ಟು ನೇರವಾಗಿ ಸೈನ್ಯವನ್ನು, ಜನರನ್ನು ಎದುರಿಸುವ ಬದಲು ಮುಗ್ದ ಯುವಕರನ್ನು ಧರ್ಮದ ಹೆಸರಲ್ಲಿ, ಜಿಹಾದ್ ನೆಪದಲ್ಲಿ ಭಯೋತ್ಪಾದನೆಗೆ ತಳ್ಳಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲಾಗುತ್ತಿದೆ.
ಟ್ವಿಟರ್‌, ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ ಸೇರಿ ನಾನಾ ರೀತಿಯ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಯುವಕರಲ್ಲಿ ಧರ್ಮದ ವಿಷ ಬೀಜ ಬಿತ್ತುವ, ಎಲ್ಲ ಕಾರ್ಯಕ್ರಮಗಳಿಗೆ ಧರ್ಮದ ಬಣ್ಣ ಬಳಿದು, ಹಿಂಸೆಗೆ ಪ್ರಚೋಧಿಸುವ ಕಾರ್ಯವನ್ನು ಕಿಪ್ಯಾಡ್ ಜಿಹಾದಿಗಳು ಗುಂಪು ಮಾಡುತ್ತಿದೆ. ಸರ್ಕಾರದ ವಿರುದ್ಧ ಮುಗ್ದ ಯುವಕರನ್ನು ಧರ್ಮದ ಹೆಸರಲ್ಲಿ ಪ್ರಚೋದಿಸುತ್ತಿರುವವರನ್ನು ಮಟ್ಟಹಾಕಲು ಪೊಲೀಸ್ ಇಲಾಖೆಯ ಸೈಬರ್ ಅಪರಾಧ ವಿಭಾಗ ಕಾರ್ಯಪವೃತವಾಗಿವೆ.

ಇತ್ತೀಚಿಗೆ ಕಾಶ್ಮೀರ ಮತ್ತು ಜಮ್ಮುವಿನಲ್ಲಿ ‘ಕೀಪ್ಯಾಡ್‌ ಜಿಹಾದಿ’ ಗುಂಪುಗಳು ಸಕ್ರಿಯವಾಗಿದ್ದು, ಕಾಶ್ಮೀರ ಪ್ರತ್ಯೇಕತಾವಾದಿಗಳು ಕೀಪ್ಯಾಡ್ ಜಿಹಾದಿಗಳನ್ನು ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಡಗುತಾಣಗಳಲ್ಲಿ ಕುಳಿತು  ಕಂಪ್ಯೂಟರ್‌, ಸ್ಮಾರ್ಟ್‌ಫೋನ್‌ ಮೂಲಕ ಕಣಿವೆ ಹಾಗೂ ಹೊರ ರಾಜ್ಯಗಳಲ್ಲೂ ಧರ್ಮಯುದ್ಧ ಸಾರುತ್ತಿದ್ದಾರೆ. ಇದು ಅಮರನಾಥ ಯಾತ್ರೆಯ ಮೇಲೂ ಆತಂಕದ ಛಾಯೇ ಮೂಡಿಸಿದೆ.

ವಿಷ ಬೀಜ ಬಿತ್ತಿ, ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದ ಐದು ನಕಲಿ ಟ್ವಿಟರ್ ಖಾತೆಗಳನ್ನು ಪತ್ತೆ ಹಚ್ಚಲಾಗಿದೆ. ಆನ್ ಲೈನ್ ಭಯೋತ್ಪಾದಕ ಗುಂಪುಗಳನ್ನು ಮಟ್ಟಹಾಕಲು ಪತ್ತೆ ಹಚ್ಚಿದ ನಕಲಿ ಟ್ವಿಟರ್‌, ಫೇಸ್‌ಬುಕ್‌ ಖಾತೆಗಳ  ಮಾಹಿತಿ ಕಲೆಹಾಕಿ ಅದನ್ನು ಕಂಪ್ಯೂಟರ್‌ ಎಮರ್ಜೆನ್ಸಿ ರೆಸ್ಪಾನ್ಸ್‌ ಟೀಮ್‌-ಇಂಡಿಯಾ ತಂಡಕ್ಕೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.

  • Privacy Policy
  • Contact
© Tulunadu Infomedia.

Press enter/return to begin your search