• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐದು ತಿಂಗಳಲ್ಲಿ 119 ನಕ್ಸಲರು, 65 ಜಿಹಾದಿ ಭಯೋತ್ಪಾದಕರು ಖಲ್ಲಾಸ್

TNN Correspondent Posted On May 28, 2018
0


0
Shares
  • Share On Facebook
  • Tweet It

ದೆಹಲಿ: ನಕ್ಸಲರು ಮತ್ತು ಭಯೋತ್ಪಾದನೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕಟ್ಟುನಿಟ್ಟನ ಕ್ರಮಗಳು ಭಾರಿ ಪ್ರಮಾಣದಲ್ಲಿ ಯಶ ಕಾಣುತ್ತಿದ್ದು, ದೇಶದಲ್ಲಿ ನಕ್ಸಲರು ಮತ್ತು ಭಯೋತ್ಪಾದನೆ ಹೇಳ ಹೆಸರಿಲ್ಲದಂತಾಗುತ್ತಿದ್ದು, ಶಾಂತಿಯುತ ವಾತಾವರಣ ನಿರ್ಮಾಣದತ್ತ ದೇಶ ಸಾಗುತ್ತಿದೆ. ಕಟ್ಟುನಿಟ್ಟಿನ ಕ್ರಮಗಳಿಗೆ ಸಾಕ್ಷಿಯಾಗಿ ನಕ್ಸಲರು ಮತ್ತು ಉಗ್ರರನ್ನು ಸದೆಬಡೆಯುವ ಕಾರ್ಯ ನಿರಂತರವಾಗಿದ್ದು, 2018 ಜನವರಿಯಿಂದ ಇದುವರೆಗೆ ದೇಶದಲ್ಲಿ 119 ನಕ್ಸಲರು ಮತ್ತು 65 ಜಿಹಾದಿ ಭಯೋತ್ಪಾಕರನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಮೂಲಗಳು ತಿಳಿಸಿವೆ.

ದೇಶದಲ್ಲಿ ನಕ್ಸಲ್ ಚಟುವಟಿಕೆಗಳು ಶೇ. 36.6 ರಷ್ಟು ಇಳಿಕೆಯಾಗಿದೆ. 2010-13 ರಲ್ಲಿ 6,524 ನಕ್ಸಲರ ಸಂಖ್ಯೆ 2014 ರಿಂದ 2017ರವರೆಗೆ 4136 ಕ್ಕೆ ಇಳಿಕೆಯಾಗಿದೆ. ಇನ್ನು ಕೆಲವರು ಸ್ವಯಂ ಪ್ರೇರಿತರಾಗಿ ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ. ಅಲ್ಲದೇ ನಕ್ಸಲ ದಾಳಿಯಲ್ಲಿ ಹುತಾತ್ಮರಾಗುತ್ತಿದ್ದ ಯೋಧರು ಮತ್ತು ಜನಸಾಮಾನ್ಯರ ಸಂಖ್ಯೆಯಲ್ಲೂ ಶೇ.55.5 ರಷ್ಟು ಇಳಿಕೆಯಾಗಿದೆ. 2,428 ರಷ್ಟಿದ್ದ ಸಾವಿನ ಪ್ರಮಾಣ ಇದೀಗ 1,081 ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಸಚಿವಾಲಯ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಕಳೆದ ನಾಲ್ಕು ವರ್ಷದಲ್ಲಿ ಇಸ್ಲಾಮಿಕ್ ಭಯೋತ್ಪಾದನೆಗೆ ಮೂಗುದಾರ ಹಾಕಲಾಗಿದೆ. ಇಡೀ ದೇಶದಲ್ಲಿ ಇಸ್ಲಾಂ ಭಯೋತ್ಪಾದನೆಗೆ ಕಡಿವಾಣ ಹಾಕಲಾಗಿದ್ದು, 113  ರನ್ನು ಬಂಧಿಸಿ, ಇಡೀ ವಿಶ್ವಕ್ಕೆ ಭಾರತ ಭಯೋತ್ಪಾದಕರ ವಿರುದ್ಧ ಕೈಗೊಳ್ಳುತ್ತಿರುವ ಕಠೋರ ನಿಯಮದ ಕುರಿತು ಸ್ಪಷ್ಟ ಸಂದೇಶ ನೀಡಲಾಗಿದೆ. ಕೇಂದ್ರದ ಕಠೋರ ನಿಲುವುಗಳು ದೇಶದಲ್ಲಿ ನಕ್ಸಲ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ಯಶಸ್ವಿಯಾಗಿ ನಿಯಂತ್ರಿಸುತ್ತಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search